ಒಳ್ಳೇದರ ಕೆಟ್ಟದ್ದರ ಅರಿವನ್ನು ಹುಟ್ಟಿಸುವ ಈ ಮರದ ಹಣ್ಣನ್ನು ಮಾತ್ರ ತಿನ್ನಬಾರದು. ತಿಂದ ದಿನವೇ ಸತ್ತು ಹೋಗುವೆ” ಎಂದು ಆಜ್ಞಾಪಿಸಿದನು.
TSK
TSK · ಯಾಕೋಬನು 1:15
مراجع Treasury of Scripture Knowledge في ಕನ್ನಡ IRV.
ಅನಂತರ ಆ ಪುರುಷನಿಗೆ, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, ನಿನ್ನ ನಿಮಿತ್ತ ಭೂಮಿಯು ಶಾಪಗ್ರಸ್ಥವಾಯಿತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಬೆವರು ಸುರಿಸಿ ದುಡಿದು ಭೂಮಿಯ ಹುಟ್ಟುವಳಿಯನ್ನು ತಿನ್ನಬೇಕು.
ಅವರು ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುವರು, ಅವರ ಹೊಟ್ಟೆಯು ವಂಚನೆಯಿಂದ ತುಂಬಿರುವುದು.”
ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ ಪಾತಾಳಕ್ಕೆ ಇಳಿದುಹೋಗುವರು.
ತಮ್ಮ ಹಾಸಿಗೆಯಲ್ಲಿ ಮಲಗಿರುವಾಗಲೇ ಅನ್ಯಾಯವನ್ನು ಯೋಚಿಸಿ, ಕೇಡನ್ನು ಕಲ್ಪಿಸುವವರ ಗತಿಯನ್ನು ಏನು ಹೇಳಲಿ. ಉದಯದ ಬೆಳಕಿನಲ್ಲಿ ಅದನ್ನು ನಡಿಸುವರು, ಅದು ಅವರ ಕೈವಶವಷ್ಟೇ.
ಇದಲ್ಲದೆ ಆತನನ್ನು ಹಿಡಿದುಕೊಡುವವನು ಅವರಿಗೆ, “ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಆತನು; ಅವನನ್ನು ಹಿಡಿಯಿರಿ” ಎಂದು ಮುನ್ಸೂಚನೆ ನೀಡಿದ್ದನು.
¶ ಈ ವಿಷಯ ಹೇಗೆಂದರೆ ಒಬ್ಬ ಮನುಷ್ಯನಾದ ಆದಾಮನಿಂದಲೇ ಪಾಪವೂ ಲೋಕದೊಳಗೆ ಪ್ರವೇಶಿಸಿತು ಮತ್ತು ಮರಣವು ಪಾಪದ ನಿಮಿತ್ತ, ಹಾಗು, ಮರಣವು ಎಲ್ಲರು ಪಾಪಮಾಡಿದ್ದರಿಂದ ಎಲ್ಲರಿಗೂ ಪ್ರಾಪ್ತಿಯಾಯಿತು.
ಆ ಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು. ಆ ಬೆಂಕಿಯ ಕೆರೆಯೇ ಎರಡನೆಯ ಮರಣವು.