TSK

TSK · ಯಾಕೋಬನು 1:26

مراجع Treasury of Scripture Knowledge في ಕನ್ನಡ IRV.

العودة إلى المقطع

ನೀನು ದೇವರಿಗೆ ವಿರುದ್ಧವಾಗಿ ತಿರುಗಿಬಿದ್ದು ವ್ಯರ್ಥವಾದ ಮಾತುಗಳನ್ನು ಸುಮ್ಮನೆ ಸುರಿಸುತ್ತೀಯಲ್ಲಾ!

ಆದುದರಿಂದ ನೀವು ವಿವೇಕಹೀನರಾಗಿ ಕುದುರೆಯಂತಾಗಲಿ ಅಥವಾ ಹೇಸರಗತ್ತೆಯಂತಾಗಲಿ ಇರಬೇಡಿರಿ; ಅವುಗಳು ಬಾರು ಕಡಿವಾಣಗಳಿಲ್ಲದೆ ಸ್ವಾಧೀನವಾಗುವುದಿಲ್ಲ.

“ನನ್ನ ನಾಲಿಗೆ ಪಾಪಕ್ಕೆ ಹೋಗದಂತೆ ಜಾಗರೂಕನಾಗಿರುವೆನು, ದುಷ್ಟರು ನನ್ನ ಮುಂದೆ ಇರುವಾಗ ಬಾಯಿಗೆ ಕಡಿವಾಣ ಹಾಕಿಕೊಂಡಿರುವೆನು” ಅಂದುಕೊಂಡೆನು.

ಬಾಯಿಯ ಫಲವಾಗಿ ಮನುಷ್ಯನು ಸುಖವನ್ನು ಅನುಭವಿಸುವನು, ಬಲಾತ್ಕಾರವೇ ದ್ರೋಹಿಗಳ ಕೋರಿಕೆ.

ಜ್ಞಾನಿಗಳ ನಾಲಿಗೆಯು ತಿಳಿವಳಿಕೆಯನ್ನು ಸಾರ್ಥಕ ಮಾಡುವುದು, ಜ್ಞಾನಹೀನರ ಬಾಯಿಯು ಮೂರ್ಖತನವನ್ನು ಕಾರುವುದು.

ಮನುಷ್ಯನ ದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು, ಕಟ್ಟಕಡೆಗೆ ಅದು ಮರಣಮಾರ್ಗವೇ.

ಧರ್ಮಿಯು ಹಿಂತೆಗೆಯದೆ ಕೊಡುವನು, ಲೋಭಿಯು ದಿನವೆಲ್ಲಾ ಆಶಿಸುತ್ತಲೇ ಇರುವನು.

ಅವನು ತಿನ್ನುವುದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, “ನನ್ನ ಕೈ ಸುಳ್ಳನ್ನು ಹಿಡಿದಿದೆಯಲ್ಲಾ” ಎಂದುಕೊಳ್ಳಲೂ ಆಗದು. ತನ್ನನ್ನು ರಕ್ಷಿಸಿಕೊಳ್ಳಲೂ ಆಗದು.

‹ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಅವರು ಉಪದೇಶವಾಗಿ ಬೋಧಿಸುತ್ತಿರುವುದರಿಂದ ನನ್ನನ್ನು ವ್ಯರ್ಥವಾಗಿ ಆರಾಧಿಸುವರು”› ಎಂಬುದೇ.

‹ಆದುದರಿಂದ ನೀವು ಹೇಗೆ ಕಿವಿಗೊಡಬೇಕೋ ನೋಡಿಕೊಳ್ಳಿರಿ, ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು; ಇಲ್ಲದವನ ಕಡೆಯಿಂದ ಅವನು ತನ್ನದೆಂದು ಎಣಿಸುವಂಥದೂ ತೆಗೆಯಲ್ಪಡುವುದು”› ಅಂದನು.

ನಾನು ನಿಮಗೆ ಸಾರಿದ ಸುವಾರ್ತೆಯನ್ನು ನೀವು ದೃಢವಾಗಿ ಹಿಡಿದುಕೊಂಡರೆ ನಿಮಗೆ ರಕ್ಷಣೆಯಾಗುತ್ತದೆ. ಇಲ್ಲದಿದ್ದರೆ ನಿಮ್ಮ ನಂಬಿಕೆಯು ನಿರರ್ಥಕವಾಗುತ್ತದೆ.

¶ ಆದರೆ ಗಣ್ಯವ್ಯಕ್ತಿಗಳಾಗಿದ್ದವರಿಂದ ನನಗೇನೂ ದೊರೆಯಲಿಲ್ಲ. ಅವರು ಹಿಂದಿನ ಕಾಲದಲ್ಲಿ ಎಂಥವರಾಗಿದ್ದರೋ ನನಗೆ ಲಕ್ಷ್ಯವಿಲ್ಲ. ದೇವರಿಗೆ ಮನುಷ್ಯರನ್ನು ಮೆಚ್ಚಿಸಬೇಕಾಗಿಲ್ಲ. ಗಣ್ಯವ್ಯಕ್ತಿಗಳೆಂದು ಎನಿಸಿಕೊಂಡವರು ನನಗೇನನ್ನೂ ತಿಳಿಸಿಕೊಡಲಿಲ್ಲ.

¶ ನೀವು ಇವೆಲ್ಲವುಗಳನ್ನು ಅನುಭವಿಸಿದ್ದು ವ್ಯರ್ಥವೋ? ವ್ಯರ್ಥವೇ ಎಂದು ಹೇಳಬೇಕೇನು?

ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತು ಹೊರಡಬಾರದು. ಭಕ್ತಿಯನ್ನು ವೃದ್ಧಿ ಮಾಡುವಂತಹ ಸಮಯೋಚಿತವಾದ ಮಾತನ್ನು ಆಡಿದರೆ ಕೇಳುವವರಿಗೆ ಹಿತವಾಗಿ ತೋರುವುದು.

ನಿಮ್ಮ ಸಂಭಾಷಣೆಯು ಯಾವಾಗಲೂ ಕೃಪೆಯುಳ್ಳದ್ದಾಗಿಯೂ, ಉಪ್ಪಿನಂತೆ ರುಚಿಕರವಾಗಿಯೂ ಇರಲಿ. ಹೀಗೆ ನೀವು ಪ್ರತಿಯೊಬ್ಬರಿಗೂ ಯಾವಾವ ರೀತಿಯಲ್ಲಿ ಉತ್ತರಹೇಳಬೇಕು ಎಂಬುದನ್ನು ತಿಳಿದುಕೊಳ್ಳುವಿರಿ.

ದೇವರ ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇವಲ ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ.

ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುಮಾಡುವವರಾಗಿದ್ದಾರೆ. ಒಬ್ಬನು ಮಾತಿನಲ್ಲಿ ತಪ್ಪಿ ನಡೆಯದಿದ್ದರೆ ಅವನು ಸರ್ವಸುಗುಣವುಳ್ಳವನೂ ತನ್ನ ಇಡೀ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.