‹ಅವರ ಫಲಗಳಿಂದ ಅವರನ್ನು ತಿಳಿದುಕೊಳ್ಳುವಿರಿ. ಮುಳ್ಳುಗಿಡಗಳಲ್ಲಿ ದ್ರಾಕ್ಷಿಹಣ್ಣುಗಳನ್ನೂ ದತ್ತೂರಿ ಗಿಡಗಳಿಂದ ಅಂಜೂರಗಳನ್ನೂ ಸಂಗ್ರಹಿಸುವುದುಂಟೇ?›
TSK
TSK · ಯಾಕೋಬನು 2:18
مراجع Treasury of Scripture Knowledge في ಕನ್ನಡ IRV.
ದೇವರು ಯಾವನನ್ನು ಪುಣ್ಯಕ್ರಿಯೆಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ. ಹೇಗೆಂದರೆ,
ಸಂಶಯಪಟ್ಟು ಊಟಮಾಡುವವನು ಸಂಶಯದಿಂದ ತಿನ್ನುವ ಕಾರಣ ತನ್ನ ಊಟದ ವಿಷಯದಲ್ಲಿ ನಂಬಿಕೆಯಿಲ್ಲದೆ ದೋಷಿಯಾಗಿದ್ದಾನೆ. ನಂಬಿಕೆಯ ಆಧಾರವಿಲ್ಲದಿರುವುದೆಲ್ಲವೂ ಪಾಪವೇ ಆಗಿದೆ.
ಆದ್ದರಿಂದ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.
ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಆಗದಿದ್ದರೂ ಪ್ರಯೋಜನವಿಲ್ಲ, ಆದರೆ ಅವರಲ್ಲಿ ಪ್ರೀತಿಯಿಂದ ಹೊರಹೊಮ್ಮುವ ನಂಬಿಕೆಯೇ ಪ್ರಯೋಜನವಾಗಿದೆ.
ಶುದ್ಧಹೃದಯ, ಒಳ್ಳೆಯ ಮನಸ್ಸಾಕ್ಷಿ, ಪ್ರಾಮಾಣಿಕವಾದ ನಂಬಿಕೆ ಎಂಬಿವುಗಳಿಂದ ಹುಟ್ಟಿದ ಪ್ರೀತಿಯೇ ದೇವಾಜ್ಞೆಯ ಗುರಿಯಾಗಿದೆ.
ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು;
ನಂಬಿಕೆಯಿಂದಲೇ ರಾಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿಕೊಂಡು, ಅವಿಧೇಯರೊಂದಿಗೆ ನಾಶವಾಗದೆ ಉಳಿದಳು.
¶ ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆಯುಂಟೆಂದು ಹೇಳಿಕೊಂಡು ತಕ್ಕ ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವುದೋ?
¶ ನಿಮ್ಮಲ್ಲಿ ಜ್ಞಾನಿಯೂ, ಬುದ್ಧಿವಂತನೂ ಯಾರು? ಅಂಥವನು ಒಳ್ಳೆಯ ನಡತೆಯಿಂದ, ಜ್ಞಾನದ ಲಕ್ಷಣವಾದ ವಿನಯಶೀಲತೆಯ ಕ್ರಿಯೆಗಳಿಂದ ಅದನ್ನು ತೋರಿಸಲಿ.