ದೇವರು ಹೇಳಿದ ಸ್ಥಳಕ್ಕೆ ಅವರು ಸೇರಿದಾಗ ಅಬ್ರಹಾಮನು ಯಜ್ಞವೇದಿಯನ್ನು ಕಟ್ಟಿ, ಕಟ್ಟಿಗೆಯನ್ನು ಜೋಡಿಸಿ ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಕಟ್ಟಿ ಅವನನ್ನು ಯಜ್ಞವೇದಿಯ ಮೇಲೆ ಇದ್ದ ಕಟ್ಟಿಗೆಯ ಮೇಲೆ ಮಲಗಿಸಿದನು.
TSK
TSK · ಯಾಕೋಬನು 2:21
مراجع Treasury of Scripture Knowledge في ಕನ್ನಡ IRV.
ನಾನು ನಿಮ್ಮ ಪಿತೃವಾದ ಅಬ್ರಹಾಮನನ್ನು ಅಲ್ಲಿಂದ ಕರೆತಂದು ಕಾನಾನ್ ದೇಶದಲ್ಲೆಲ್ಲಾ ಸಂಚಾರ ಮಾಡಿ, ಇಸಾಕನೆಂಬ ಮಗನನ್ನು ಕೊಟ್ಟು ಅವನ ಸಂತಾನವನ್ನು ಹೆಚ್ಚಿಸಿದೆನು.
ನಿಮ್ಮ ಪಿತೃವಾದ ಅಬ್ರಹಾಮನನ್ನೂ, ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ. ಅಬ್ರಹಾಮನು ಒಬ್ಬನೇ ಇದ್ದಾಗ ನಾನು ಅವನನ್ನು ಕರೆದು, ಆಶೀರ್ವದಿಸಿ ಅವನ ಸಂತಾನವನ್ನು ಹೆಚ್ಚಿಸಿದೆನು.
‹ನಿನ್ನ ಮಾತುಗಳಿಂದಲೇ ನೀನು ನೀತಿವಂತನೆಂದು ತೀರ್ಪು ಹೊಂದುವಿ. ನಿನ್ನ ಮಾತುಗಳಿಂದಲೇ ನೀನು ಅಪರಾಧಿಯೆಂದು ತೀರ್ಪು ಹೊಂದುವಿ”› ಅಂದನು.
‹ಅವನು ‘ತಂದೆಯೇ, ಅಬ್ರಹಾಮನೇ ಹಾಗಲ್ಲ. ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವರು’ ಅಂದನು.›
ಸತ್ತುಹೋದ ನಮ್ಮ ತಂದೆಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡವನೋ? ಪ್ರವಾದಿಗಳೂ ಸತ್ತುಹೋದರು, ನಿನ್ನನ್ನೇ ನೀನು ಯಾರೆಂದು ಭಾವಿಸಿಕೊಳ್ಳುತ್ತಿದ್ದೀ?” ಎಂದು ಕೇಳಿದರು.
ಯಾಕೆಂದರೆ ಯಾವ ಮನುಷ್ಯನಾದರೂ ನೇಮನಿಷ್ಠೆಗಳನ್ನು ಅನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. ಧರ್ಮಶಾಸ್ತ್ರದಿಂದ ಪಾಪದ ಅರಿವು ಉಂಟಾಗುತ್ತದಷ್ಟೆ.
ಇದಲ್ಲದೆ ಸುನ್ನತಿಯವರಲ್ಲಿ ಸುನ್ನತಿಹೊಂದಿದ್ದವರಿಗೆ ಮಾತ್ರವಲ್ಲದೆ, ನಮ್ಮ ಪಿತೃವಾಗಿರುವ ಅಬ್ರಹಾಮನಿಗೆ ಸುನ್ನತಿಯಾಗುವುದಕ್ಕೂ ಮೊದಲೇ ಇದ್ದ ನಂಬಿಕೆಯ ಕ್ರಮವನ್ನು ಅನುಸರಿಸಿ ನಡೆಯುತ್ತಾರೋ ಅವರಿಗೆ ಸಹ ಮೂಲ ತಂದೆಯಾಗಿದ್ದಾನೆ.
ಆದರೂ ಒಬ್ಬನು; “ನಿನಗೆ ನಂಬಿಕೆಯುಂಟು ಮತ್ತು ನನಗೆ ಕ್ರಿಯೆಗಳುಂಟು” ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ನನಗೆ ತೋರಿಸು. ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ತೋರಿಸುತ್ತೇನೆ ಎಂದು ಹೇಳುವನಲ್ಲವೇ.