¶ ಯೆಹೋವನಾದ ದೇವರು ಉಂಟುಮಾಡಿದ ಎಲ್ಲಾ ಕಾಡುಮೃಗಗಳಲ್ಲಿ ಸರ್ಪವು ಅತಿ ಯುಕ್ತಿಯುಳ್ಳದ್ದಾಗಿತ್ತು. ಸರ್ಪವು ಸ್ತ್ರೀಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನು ನೀವು ತಿನ್ನಬಾರದೆಂದು ದೇವರು ಅಪ್ಪಣೆ ಕೊಟ್ಟಿರುವುದು ನಿಜವೋ?” ಎಂದು ಕೇಳಲು.
TSK
TSK · ಯಾಕೋಬನು 3:15
مراجع Treasury of Scripture Knowledge في ಕನ್ನಡ IRV.
ಅಬ್ಷಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು, “ಯೆಹೋವನೇ ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು” ಎಂದು ಪ್ರಾರ್ಥಿಸಿದನು.
¶ ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲು ಅರಿಯರು.
‹ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ಅಪರಾಧಿಯೆಂದು ಖಂಡಿಸಲಿಕ್ಕೆ ಕಳುಹಿಸಲಿಲ್ಲ.›
ಅವನನ್ನು ದೃಷ್ಟಿಸಿನೋಡಿ; “ಸೈತಾನನ ಮಗನೇ, ಮೋಸದಿಂದಲೂ, ಎಲ್ಲಾ ಕೆಟ್ಟತನದಿಂದಲೂ ತುಂಬಿರುವವನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೇರವಾದ ಮಾರ್ಗಗಳನ್ನು ಡೊಂಕು ಮಾಡುವುದನ್ನು ಬಿಡುವುದಿಲ್ಲವೋ?
¶ “ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು, ವಿವೇಕಿಗಳ ವಿವೇಕವನ್ನು ವಿಫಲಗೊಳಿಸುವೆನು.” ಎಂದು ಬರೆಯಲ್ಪಟ್ಟಿದೆ.
¶ ಆದರೆ ಪರಿಪಕ್ವತೆಯುಳ್ಳವರ ಮಧ್ಯದಲ್ಲಿ ಜ್ಞಾನವನ್ನೇ ಹೇಳುತ್ತೇವೆ. ಅದು ಇಹಲೋಕದ ಜ್ಞಾನವಲ್ಲ, ಗತಿಸಿ ಹೋಗುವ ಇಹಲೋಕಾಧಿಕಾರಿಗಳ ಜ್ಞಾನವೂ ಅಲ್ಲ.
ಯಾಕೆಂದರೆ ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮಲ್ಲಿ ಹೊಟ್ಟೆಕಿಚ್ಚು ಜಗಳಗಳು ಇರುವಲ್ಲಿ, ನೀವು ಪ್ರಾಪಂಚಿಕರಾಗಿದ್ದು ಕೇವಲ ಬೇರೆ ಮನುಷ್ಯರಂತೆ ನಡೆಯುತ್ತೀರಲ್ಲವೆ?
ನಾವು ಕೇವಲ ಮನುಷ್ಯಜ್ಞಾನವನ್ನು ಬಳಸದೇ ದೇವರ ಕೃಪೆಯನ್ನು ಆಶ್ರಯಿಸಿ ಪರಿಶುದ್ಧರಾಗಿಯೂ, ಪ್ರಾಮಾಣಿಕರಾಗಿಯೂ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡೆದುಕೊಂಡೆವೆಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಇದೇ ನಮಗಿರುವ ಹೆಮ್ಮೆ.
ಆದರೆ ಅಂಥವರು ಸುಳ್ಳು ಅಪೊಸ್ತಲರೂ, ಮೋಸಗಾರರಾದ ಕೆಲಸದವರೂ, ಕ್ರಿಸ್ತನ ಅಪೊಸ್ತಲರಾಗಿ ಕಾಣಿಸುವುದಕ್ಕೆ ವೇಷಹಾಕಿಕೊಳ್ಳುವವರೂ ಆಗಿದ್ದಾರೆ.
ಆ ಅಧರ್ಮಸ್ವರೂಪನು, ಸೈತಾನನ ಕಾರ್ಯಕ್ಕೆ ಅನುಸಾರವಾಗಿ, ಅದು ಸುಳ್ಳಾದ ಸಕಲವಿಧವಾದ ಮಹತ್ಕಾರ್ಯ, ಸೂಚಕಕಾರ್ಯ, ಅದ್ಭುತಕಾರ್ಯ ಇವುಗಳಿಂದಲೂ,
ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ.
ಆದರೆ ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, ಪ್ರಾಮಾಣಿಕವಾದ್ದದು ಆಗಿದೆ.
ಇವರು ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳುವವರೂ, ಪ್ರಾಕೃತ ಮನುಷ್ಯರೂ, ದೇವರಾತ್ಮ ಇಲ್ಲದವರೂ ಆಗಿದ್ದಾರೆ.
ಅಧೋಲೋಕದ ಅಧಿಕಾರಿಯಾದ ದೂತನೇ ಅವುಗಳನ್ನಾಳುವ ಅರಸನು. ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ, ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರುಂಟು.