TSK

TSK · ಯಾಕೋಬನು 3:18

مراجع Treasury of Scripture Knowledge في ಕನ್ನಡ IRV.

العودة إلى المقطع

ಧನವನ್ನೇ ನಂಬಿದವನು ಬಿದ್ದುಹೋಗುವನು, ಸದ್ಧರ್ಮಿಯು ಕುಡಿಯ ಹಾಗೆ ಚಿಗುರುವನು.

ನ್ಯಾಯವು ಅಡವಿಯಲ್ಲಿ ನೆಲೆಗೊಳ್ಳುವುದು, ಧರ್ಮವು ತೋಟದಲ್ಲಿ ಇದ್ದೇ ಇರುವುದು.

ಕುದುರೆಗಳು ಬಂಡೆಯ ಮೇಲೆ ಓಡಾಡುವುವೋ? ಅದನ್ನು ಎತ್ತುಗಳಿಂದ ಉಳುವರೋ? ಆದರೆ ನೀವು ನ್ಯಾಯವನ್ನು ವಿಷವನ್ನಾಗಿ ಮಾಡಿ, ಧರ್ಮದ ಸುಫಲವನ್ನು ಕಹಿಯಾಗಿಸಿದಿರಿ.

‹ಕೊಯ್ಯುವವನಿಗೆ ಈಗಲೇ ಕೂಲಿ ದೊರೆಯುತ್ತದೆ. ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ. ಹೀಗೆ ಬಿತ್ತುವವನಿಗೂ ಮತ್ತು ಕೊಯ್ಯುವವನಿಗೂ ಒಟ್ಟಿಗೆ ಸಂತೋಷವಾಗುವುದು.›

ಯೇಸು ಕ್ರಿಸ್ತನ ಮೂಲಕವಾಗಿರುವ ನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಇರಬೇಕೆಂದು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಸಲ್ಲಿಸಬೇಕೆಂತಲೂ ಬೇಡಿಕೊಳ್ಳುತ್ತೇನೆ.

ಏಕೆಂದರೆ ಮನುಷ್ಯನು ಕೋಪಗೊಂಡಾಗ ದೇವರು ಬಯಸುವ ನೀತಿ ಕಾರ್ಯಗಳನ್ನು ಮಾಡಲು ಸಾಧ್ಯವಾಗುವುದಿಲ್ಲ.