ದೇವರು ಭ್ರಷ್ಟನ ಆತ್ಮವನ್ನು ಕಡಿದು ಎಳೆಯುವಾಗ, ಅವನಿಗೆ ನಿರೀಕ್ಷೆಯೆಲ್ಲಿರುವುದು?
TSK
TSK · ಯಾಕೋಬನು 4:3
مراجع Treasury of Scripture Knowledge في ಕನ್ನಡ IRV.
ಅವರು ಕೂಗಿಕೊಂಡರೂ ರಕ್ಷಿಸುವವನಿಲ್ಲ; ಯೆಹೋವನಿಗೆ ಮೊರೆಯಿಟ್ಟರೂ ಆತನು ಉತ್ತರವನ್ನು ಕೊಡಲೇ ಇಲ್ಲ.
ಆಗ ಅವರು ನನಗೆ ಮೊರೆಯಿಟ್ಟರೂ ನಾನು ಉತ್ತರಕೊಡೆನು, ನನ್ನನ್ನು ಆತುರದಿಂದ ಹುಡುಕಿದರೂ ನಾನು ಕಾಣಿಸೆನು.
ಬಡವನ ಕೂಗಿಗೆ ಕಿವಿಮುಚ್ಚಿಕೊಳ್ಳುವವನು, ತಾನೇ ಮೊರೆಯಿಡುವಾಗ ಯಾರೂ ಉತ್ತರಕೊಡರು.
ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು. ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಆಲಿಸುವುದಿಲ್ಲ. ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.
ಆದಕಾರಣ ಈ ಜನರಿಗೋಸ್ಕರ ಬೇಡಿಕೊಳ್ಳಬೇಡ, ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಲೂ ಬೇಡ. ಅವರು ತಮ್ಮ ಕೇಡಿನ ನಿಮಿತ್ತ ನನಗೆ ಮೊರೆಯಿಡುವಾಗ ನಾನು ಕೇಳುವುದಿಲ್ಲ” ಎಂದು ಹೇಳಿದನು.
ಇಷ್ಟೆಲ್ಲಾ ನಡೆಸಿ ಇವರು ಯೆಹೋವನಿಗೆ ಮೊರೆಯಿಡಲು ಆತನು ಇವರಿಗೆ ಉತ್ತರಕೊಡನು. ಇವರ ನಡತೆಯ ದುಷ್ಕೃತ್ಯಗಳಿಗೆ ತಕ್ಕ ಹಾಗೆ ಆ ಕಾಲದಲ್ಲಿ ಇವರಿಗೆ ವಿಮುಖನಾಗುವೆನು.”
ಅದಕ್ಕೆ ಯೇಸು ಪ್ರತ್ಯುತ್ತರವಾಗಿ, ‹“ನೀವು ಬೇಡಿಕೊಳ್ಳುತ್ತಿರುವುದು ಏನೆಂದು ನಿಮಗೆ ತಿಳಿಯದು. ನಾನು ಕುಡಿಯಬೇಕಾಗಿರುವ ಪಾನಪಾತ್ರೆಯಲ್ಲಿ ಕುಡಿಯುವುದಕ್ಕೆ ನಿಮ್ಮಿಂದ ಆಗುವುದೋ?”› ಎಂದು ಕೇಳಿದನು. ಅವರು ಆತನಿಗೆ, “ನಮ್ಮಿಂದ ಆಗುವುದು” ಅಂದರು.
‹ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯುವುದು.›
‹ಆದರೆ ಸೂಳೆಯರನ್ನು ಕಟ್ಟಿಕೊಂಡು ನಿನ್ನ ಬದುಕನ್ನು ಹಾಳುಮಾಡಿದ ಈ ನಿನ್ನ ಮಗನು ಬಂದಾಗ ಕೊಬ್ಬಿದ ಕರುವನ್ನು ಇವನಿಗೆ ಕೊಯ್ಸಿದಿಯಲ್ಲಾ’ ಎಂದು ಉತ್ತರಕೊಟ್ಟನು.›
ಆದರೆ ದೇವರ ಬಳಿ ಬೇಡುವವನು ಸ್ವಲ್ಪವೂ ಸಂದೇಹಪಡದೆ ನಂಬಿಕೆಯಿಂದ ಬೇಡಿಕೊಳ್ಳಲಿ. ಸಂದೇಹಪಡುವವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ಅಲೆಯಂತೆ ಅತ್ತಿತ್ತ ಅಲೆಯುತ್ತಿರುತ್ತಾನೆ.
ಆತನ ಆಜ್ಞೆಗಳನ್ನು ಕೈಕೊಂಡು ಆತನಿಗೆ ಮೆಚ್ಚಿಕೆಯಾಗುವ ಕಾರ್ಯಗಳನ್ನು ಮಾಡುವವರಾದರೆ ನಾವು ಏನು ಬೇಡಿಕೊಂಡರೂ ಆತನಿಂದ ಹೊಂದುವೆವು.