ಯಾಜಕರು, ‘ಯೆಹೋವನು ಎಲ್ಲಿ?’ ಎಂಬುದನ್ನು ವಿಚಾರಿಸಲಿಲ್ಲ. ಧರ್ಮೋಪದೇಶಕರು ನನ್ನನ್ನು ತಿಳಿಯಲ್ಲಿಲ್ಲ, ಪಾಲಕರು ನನಗೆ ದ್ರೋಹಮಾಡಿದರು, ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ ಕೆಲಸಕ್ಕೆ ಬಾರದವುಗಳನ್ನು ಆರಾಧಿಸಿದರು.
TSK
TSK · ಯೆರೆಮಿಯ 10:21
مراجع Treasury of Scripture Knowledge في ಕನ್ನಡ IRV.
ಜ್ಞಾನಿಗಳು ಆಶಾಭಂಗಪಟ್ಟು ಬೆಚ್ಚಿಬಿದ್ದು ಸಿಕ್ಕಿಕೊಂಡಿದ್ದಾರೆ. ಇಗೋ, ಯೆಹೋವನ ಮಾತನ್ನು ನಿರಾಕರಿಸಿದರು.
ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು. ಅವನು ಎರಕ ಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.
¶ “ನನ್ನ ಕಾವಲಿನ ಕುರಿಗಳನ್ನು ಚದುರಿಸಿ ಹಾಳು ಮಾಡುವ ಕುರುಬರ ಗತಿಯನ್ನು ಏನೆಂದು ಹೇಳಲಿ” ಎಂಬುದು ಯೆಹೋವನ ನುಡಿ.
ಅವರ ಒಂಟೆಗಳು ಕೊಳ್ಳೆಯಾಗುವವು, ಅವರ ಲೆಕ್ಕವಿಲ್ಲದ ದನಕುರಿಗಳು ಸೂರೆಹೋಗುವವು; ಚಂಡಿಕೆಬಿಟ್ಟುಕೊಂಡಿರುವ ಜನರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು; ಎಲ್ಲಾ ಕಡೆಯಿಂದಲೂ ವಿಪತ್ತನ್ನು ಅವರ ಮೇಲೆ ಬರಮಾಡುವೆನು.
ಆ ನಾಡಿನೊಳಗೆ ಪ್ರವಾದಿಗಳು ಒಳಸಂಚು ಮಾಡಿಕೊಂಡಿದ್ದಾರೆ, ಬೇಟೆಯನ್ನು ಸೀಳುತ್ತಾ ಗರ್ಜಿಸುವ ಸಿಂಹದಂತಿದ್ದಾರೆ, ನರಪ್ರಾಣಿಗಳನ್ನು ನುಂಗಿದ್ದಾರೆ. ಆಸ್ತಿಯನ್ನೂ, ಅಮೂಲ್ಯ ವಸ್ತುಗಳನ್ನೂ ದೋಚಿಕೊಂಡಿದ್ದಾರೆ; ದೇಶದಲ್ಲಿ ಬಹಳ ಮಂದಿಯನ್ನು ವಿಧವೆಯರನ್ನಾಗಿ ಮಾಡಿದ್ದಾರೆ.
ನನ್ನ ಕುರಿಗಳು ಪರ್ವತಗಳ ಮೇಲೆಯೂ, ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೆಯೂ ಅಲೆದಾಡುತ್ತಿವೆ; ಹೌದು, ನನ್ನ ಮಂದೆಯು ಭೂಮಂಡಲದಲ್ಲೆಲ್ಲಾ ಚದುರಿಹೋಗಿದೆ; ಯಾರೂ ಅವುಗಳ ಹಿಂದೆ ಹೋಗಿ ಹುಡುಕಲಿಲ್ಲ.
¶ ನನ್ನ ಕೋಪವು ಕುರುಬರ ಮೇಲೆ ಧಗಧಗಿಸುತ್ತದೆ. ನಾನು ಹೋತಗಳನ್ನು ದಂಡಿಸುವೆನು; ಸೇನಾಧೀಶ್ವರ ಯೆಹೋವನು ತನ್ನ ಮಂದೆಯಾದ ಯೆಹೂದ ವಂಶವನ್ನು ಪರಾಂಬರಿಸಿ ಘನವಾದ ಯುದ್ಧಾಶ್ವವನ್ನಾಗಿ ಮಾಡಿಕೊಳ್ಳುವನು.
‹ಕೂಲಿಯಾಳು ಕುರಿಗಳ ಕುರುಬನೂ ಒಡೆಯನೂ ಆಗಿರದೆ, ಅವನು ತೋಳ ಬರುವುದನ್ನು ನೋಡುತ್ತಲೇ ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ. ಆಗ ತೋಳವು ಕುರಿಗಳನ್ನು ಹಿಡಿದುಕೊಂಡು ಮಂದೆಯನ್ನು ಚದರಿಸುತ್ತದೆ.›