ಇದಲ್ಲದೆ, “ಯೆರೂಸಲೇಮಿನಲ್ಲಿ ನನ್ನ ಹೆಸರನ್ನು ಸ್ಥಾಪಿಸುವೆನು” ಎಂದು ಯೆಹೋವನು ಯಾವುದನ್ನು ಕುರಿತು ಹೇಳಿದ್ದನೋ, ಆ ಯೆಹೋವನ ಆಲಯದಲ್ಲಿ ಮನಸ್ಸೆಯು ಯಜ್ಞವೇದಿಗಳನ್ನು ಕಟ್ಟಿಸಿದನು.
TSK
TSK · ಯೆರೆಮಿಯ 11:13
مراجع Treasury of Scripture Knowledge في ಕನ್ನಡ IRV.
ಇಸ್ರಾಯೇಲರ ಅರಸನಾದ ಸೊಲೊಮೋನನು ಚೀದೋನ್ಯರ ಅಷ್ಟೋರೆತ್ ದೇವತೆ, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಯೆರೂಸಲೇಮಿನ ಎದುರಿನಲ್ಲಿಯೂ, ವಿಘ್ನಪರ್ವತದ ದಕ್ಷಿಣದಿಕ್ಕಿನಲ್ಲಿಯೂ ಸ್ಥಾಪಿಸಿದ್ದ ಪೂಜಾಸ್ಥಳಗಳನ್ನು ಅರಸನು ಹೊಲೆ ಮಾಡಿದನು.
ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ. ತಮ್ಮ ಕೈಯಿಂದಲೇ, ತಮ್ಮ ಬೆರಳುಗಳಿಂದಲೇ ಮಾಡಿದ ಕೆಲಸಕ್ಕೆ ನಮಸ್ಕರಿಸುತ್ತಾರೆ.
ಯೆಹೋವನು ಹೀಗೆನ್ನುತ್ತಾನೆ, “ಗಂಡನು ತ್ಯಜಿಸಿದವಳು ಅವನಿಂದ ಹೊರಟು ಮತ್ತೊಬ್ಬನ ಹೆಂಡತಿಯಾದ ಮೇಲೆ, ಅವಳನ್ನು ಮೊದಲ ಗಂಡನು ತಿರುಗಿ ಸೇರಿಸಿಕೊಂಡಾನೇ? ಸೇರಿಸಿಕೊಂಡರೆ ಆ ದೇಶವು ಕೇವಲ ಅಪವಿತ್ರವಾಗಿ ಹೋಗುವುದಲ್ಲವೇ? ಹೀಗಿರಲು ಬಹುಮಂದಿಯೊಡನೆ ವ್ಯಭಿಚಾರ ಮಾಡಿದ ನೀನು ನನ್ನ ಬಳಿಗೆ ಹಿಂದಿರುಗಿ ಬರುತ್ತಿಯಾ?
ನಾವೇ ತಂದುಕೊಂಡ ಅವಮಾನದಲ್ಲಿ ಬಿದ್ದಿರೋಣ, ನಮ್ಮ ನಾಚಿಕೆಯು ನಮ್ಮನ್ನು ಮುಚ್ಚಿಬಿಡಲಿ. ನಾವು ಮತ್ತು ನಮ್ಮ ಪೂರ್ವಿಕರೂ ಬಾಲ್ಯದಿಂದ ಇಂದಿನವರೆಗೂ ನಮ್ಮ ದೇವರಾದ ಯೆಹೋವನಿಗೆ ಪಾಪಮಾಡುತ್ತಾ ಬಂದಿದ್ದೇವಷ್ಟೆ. ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಲೇ ಇಲ್ಲ” ಎಂದು ಮೊರೆಯಿಡುತ್ತಾರೆ.
ಯೆಹೂದದ ಪಾಪವು ಉಕ್ಕಿನ ಕಂಠದಿಂದಲೂ ಹಾಗೂ ವಜ್ರದ ಮೊನೆಯಿಂದಲೂ ಲಿಖಿತವಾಗಿದೆ. ಅದು ಅವರ ಹೃದಯದ ಹಲಗೆಯಲ್ಲಿಯೂ, ಅವರ ಯಜ್ಞವೇದಿಗಳ ಕೊಂಬುಗಳಲ್ಲಿಯೂ ಕೆತ್ತಿದೆ.
ಅವರು ಅದನ್ನು ನಿರ್ದೋಷಿಗಳ ರಕ್ತದಿಂದ ತುಂಬಿಸಿ, ತಮ್ಮ ಮಕ್ಕಳನ್ನು ಬಾಳ್ ದೇವತೆಗೆ ಆಹುತಿ ಕೊಡುವುದಕ್ಕೆ ಬಾಳನ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡಿದ್ದಾರಲ್ಲಾ. ನಾನು ಇಂಥಾ ಆಚಾರವನ್ನು ವಿಧಿಸಲಿಲ್ಲ, ಅದರ ಮಾತನ್ನೇ ಆಡಲಿಲ್ಲ, ಅದು ನನ್ನ ಮನಸ್ಸಿನಲ್ಲಿ ಹುಟ್ಟಲೂ ಇಲ್ಲ.
ಅವರು ಕಿವಿಗೊಟ್ಟು ಕೇಳಲಿಲ್ಲ, ಅನ್ಯದೇವತೆಗಳಿಗೆ ಧೂಪಹಾಕುವುದನ್ನು ನಿಲ್ಲಿಸಲಿಲ್ಲ, ತಮ್ಮ ದುರಾಚಾರವನ್ನು ಬಿಡಲಿಲ್ಲ.
ಇಸ್ರಾಯೇಲ್ ಸೊಂಪಾಗಿ ಬೆಳೆದ ದ್ರಾಕ್ಷಾಲತೆಯಾಗಿದೆ; ಹಣ್ಣುಬಿಟ್ಟುಕೊಂಡಿದೆ; ಅದರ ಹಣ್ಣುಗಳು ಹೆಚ್ಚಿದಷ್ಟೂ ಯಜ್ಞವೇದಿಗಳನ್ನು ಹೆಚ್ಚಿಸಿಕೊಂಡಿದೆ; ಅದರ ಭೂಮಿಯು ಎಷ್ಟು ಒಳ್ಳೆಯದೋ, ಅಷ್ಟು ಒಳ್ಳೆಯ ವಿಗ್ರಹ ಸ್ತಂಭಗಳನ್ನು ನಿರ್ಮಾಣ ಮಾಡಿಕೊಂಡಿದೆ.