TSK

TSK · ಯೆರೆಮಿಯ 13:23

مراجع Treasury of Scripture Knowledge في ಕನ್ನಡ IRV.

العودة إلى المقطع

ಸೌಲನಿಗೆ ಈ ವರ್ತಮಾನವು ಮುಟ್ಟಿದಾಗ ಅವನು ಬೇರೆ ಆಳುಗಳನ್ನು ಕಳುಹಿಸಿದನು. ಇವರೂ ಪ್ರವಾದಿಸಿದರು. ಅವನು ಮೂರನೆಯ ಸಾರಿ ಇನ್ನೂ ಕೆಲವು ಮಂದಿ ಆಳುಗಳನ್ನು ಕಳುಹಿಸಿದನು. ಅವರೂ ಪ್ರವಾದಿಸಿದರು.

ಗೋದಿರವೆಯ ಸಂಗಡ ಮೂರ್ಖನನ್ನು ಒರಳಿನಲ್ಲಿ ಒನಕೆಯಿಂದ ಕುಟ್ಟಿದರೂ, ಮೂರ್ಖತನವು ಅವನಿಂದ ತೊಲಗದು.

ಏಕೆ ದ್ರೋಹವನ್ನು ಹೆಚ್ಚಿಸಿ, ಪೆಟ್ಟಿಗೆ ಗುರಿಯಾಗುತ್ತೀರಿ? ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.

ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ನೀವು ತಿದ್ದಿ ನಡೆಯಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.”

ತಿದಿಯು (ಶ್ವಾಸಕೋಶ) ಬುಸುಬುಸುಗುಟ್ಟುತ್ತದೆ, ಸೀಸವು ಉರಿಯಿಂದ ಸುಟ್ಟುಹೋಗುತ್ತದೆ. ಅಕ್ಕಸಾಲಿಗನು ಎಷ್ಟು ಶೋಧಿಸಿದರೂ ನಿಷ್ಪ್ರಯೋಜನ, ಕಲ್ಮಷವು ತೆಗೆಯಲ್ಪಡುವುದಿಲ್ಲ.

ಹೃದಯವು ಎಲ್ಲಾದಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ; ಅದನ್ನು ತಿಳಿದವರು ಯಾರು?