ನಿಮಗಿಂತ ಮುಂಚೆ ಆ ದೇಶದಲ್ಲಿ ಇದ್ದವರು ಇಂಥ ಅಸಹ್ಯವಾದ ಕೆಲಸಗಳನ್ನು ಮಾಡಿದ್ದರಿಂದ ಆ ದೇಶವು ಅಶುದ್ಧವಾಗಿ ಹೋಯಿತಲ್ಲಾ.
TSK
TSK · ಯೆರೆಮಿಯ 16:13
مراجع Treasury of Scripture Knowledge في ಕನ್ನಡ IRV.
ನೀವು ಆ ದೇಶಗಳಲ್ಲಿ ಮನುಷ್ಯರು ಮಾಡಿಕೊಂಡ ದೇವರುಗಳನ್ನು ಅಂದರೆ ಮರದಲ್ಲಾಗಲಿ, ಕಲ್ಲಿನಲ್ಲಾಗಲಿ ಕೆತ್ತಲ್ಪಟ್ಟು ನೋಡಲಾರದೆ, ಕೇಳಲಾರದೆ, ತಿನ್ನಲಾರದೆ, ವಾಸನೆ ಗ್ರಹಿಸಲಾರದೆ ಇರುವ ದೇವರುಗಳನ್ನು ಪೂಜಿಸುವವರಾಗುವಿರಿ.
ಹೇಗೆ ಯೆಹೋವನು ಈಗ ನಿಮ್ಮನ್ನು ಅಭಿವೃದ್ಧಿಪಡಿಸುವುದರಲ್ಲಿಯೂ, ಹೆಚ್ಚಿಸುವುದರಲ್ಲಿಯೂ ಸಂತೋಷಪಡುತ್ತಾನೋ ಹಾಗೆಯೇ ಆಗ ನಿಮ್ಮನ್ನು ಕೆಡಿಸಿ ನಾಶಮಾಡುವುದರಲ್ಲಿ ಸಂತೋಷಪಟ್ಟು, ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದೊಳಗಿಂದ ನಿಮ್ಮನ್ನು ಕಿತ್ತುಹಾಕುವನು.
ಆದರೆ ನೀವು ಆತನನ್ನು ಬಿಟ್ಟು ಆತನ ಮಾತನ್ನು ಕೇಳಲೊಲ್ಲದೆ ಮರುಳುಗೊಂಡವರಾಗಿ, ಇತರ ದೇವರುಗಳನ್ನು ಪೂಜಿಸಿ, ಸೇವಿಸಿದರೆ,
ಬಾಬೆಲಿನ ಅರಸನು ಹಮಾತ್ ಪ್ರದೇಶದ ಅವರನ್ನು ಕತ್ತಿಯಿಂದ ರಿಬ್ಲದಲ್ಲಿ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟು ಹೋಗಬೇಕಾಯಿತು.
ಆದುದರಿಂದ ಇವರು ಹಟಮಾರಿಗಳು; ತಮ್ಮ ಮನಸ್ಸಿನಂತೆ ನಡೆಯಲಿ ಎಂದು ಬಿಟ್ಟುಬಿಟ್ಟೆನು.
ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು” ಎಂದು ಯೆಹೋವನು ನುಡಿಯುತ್ತಾನೆ.
ಇಸ್ರಾಯೇಲರ ನಿರೀಕ್ಷೆಯೇ, ಇಕ್ಕಟ್ಟಿನಲ್ಲಿ ಅವರಿಗೆ ರಕ್ಷಕನೇ, ಏಕೆ ಸ್ವದೇಶದಲ್ಲಿ ಪರದೇಶಿಯಂತೆಯೂ, ಇಳಿದುಕೊಳ್ಳುವುದಕ್ಕೆ ಗುಡಾರಹಾಕಿಕೊಳ್ಳುವ ಪ್ರಯಾಣಿಕನ ಹಾಗೂ ಇದ್ದೀ?
ಅವುಗಳನ್ನು ನಿನ್ನ ಶತ್ರುಗಳ ಕೈಗೆ ಕೊಟ್ಟು, ನೀನು ನೋಡದ ದೇಶಕ್ಕೆ ಸಾಗಿಸಿಬಿಡುವೆನು. ನನ್ನ ರೋಷದಿಂದ ಉರಿಯು ಹತ್ತಿಕೊಂಡಿದೆ, ಅದು ನಿಮ್ಮನ್ನು ಸುಟ್ಟುಬಿಡುವುದು.”
ನಾನು ನಿಮಗೆ ದಯಪಾಲಿಸಿದ ಸ್ವತ್ತನ್ನು ನಿಮ್ಮ ದೋಷದಿಂದಲೇ ಕಳೆದುಕೊಳ್ಳುವಿರಿ. ನೀವು ನೋಡದ ದೇಶದಲ್ಲಿ ನಿಮ್ಮನ್ನು ನಿಮ್ಮ ಶತ್ರುಗಳಿಗೆ ದಾಸರನ್ನಾಗಿ ಮಾಡುವೆನು. ನೀವು ನನ್ನ ರೋಷಾಗ್ನಿಯನ್ನು ಹೆಚ್ಚಿಸಿದ್ದೀರಿ, ಅದು ನಿತ್ಯವೂ ಉರಿಯುತ್ತಿರುವುದು.