TSK

TSK · ಯೆರೆಮಿಯ 19:13

مراجع Treasury of Scripture Knowledge في ಕನ್ನಡ IRV.

العودة إلى المقطع

ನಿಮ್ಮ ದೇವರಾದ ಯೆಹೋವನು ಭೂಲೋಕದಲ್ಲಿರುವ ಬೇರೆ ಎಲ್ಲಾ ಜನಾಂಗಗಳಿಗೋಸ್ಕರ ದಯಪಾಲಿಸಿದ ಸೂರ್ಯ, ಚಂದ್ರ ಅಥವಾ ನಕ್ಷತ್ರಗಳೆನಿಸಿಕೊಳ್ಳುವ ಆಕಾಶಸೈನ್ಯವನ್ನು ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ, ಮರುಳುಗೊಂಡು ಅವುಗಳನ್ನು ಪೂಜಿಸಲೂ ಬಾರದು ಮತ್ತು ನಮಸ್ಕರಿಸಲೂ ಬಾರದು.

ಇದಲ್ಲದೆ, ಯೆಹೂದ್ಯರ ಅರಸರು ದೇವಸ್ಥಾನದ ಮಾಳಿಗೆಯ ಮೇಲೆ ಆಹಾಜನ ಉಪ್ಪರಿಗೆಯ ಹತ್ತಿರ ಕಟ್ಟಿಸಿದ್ದ ಯಜ್ಞವೇದಿಗಳನ್ನೂ, ಮನಸ್ಸೆಯು ಯೆಹೋವನ ಆಲಯದ ಎರಡು ಪ್ರಾಕಾರಗಳಲ್ಲಿ ಕಟ್ಟಿಸಿದ ಯಜ್ಞವೇದಿಗಳನ್ನೂ ಕೆಡವಿ ಪುಡಿಪುಡಿ ಮಾಡಿ ಅವುಗಳ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು.

ಅವರು ನಿನ್ನ ಪವಿತ್ರಾಲಯಕ್ಕೆ ಬೆಂಕಿ ಹಚ್ಚಿ, ನಿನ್ನ ನಾಮಕ್ಕೆ ಪ್ರತಿಷ್ಠಿತವಾದ ಮಂದಿರವನ್ನು ಹೊಲೆಮಾಡಿ, ನೆಲಸಮಗೊಳಿಸಿದ್ದಾರೆ.

¶ ದಿವ್ಯದರ್ಶನದ ಕಣಿವೆಯ ವಿಷಯವಾದ ದೈವೋಕ್ತಿ. ಯಾವ ಕಾರಣಕ್ಕಾಗಿ ನಿನ್ನ ಜನರೆಲ್ಲರೂ ಮಾಳಿಗೆಗಳನ್ನು ಹತ್ತಿದರು?

ಈ ಪಟ್ಟಣಕ್ಕೆ ಪ್ರತಿಭಟಿಸುವ ಕಸ್ದೀಯರು ಇದರೊಳಗೆ ನುಗ್ಗಿ ಬೆಂಕಿಹಚ್ಚಿ ಯಾವ ಮನೆಗಳ ಮಾಳಿಗೆಗಳಲ್ಲಿ ನನ್ನ ಜನರು ಬಾಳನಿಗೆ ಧೂಪಹಾಕಿ, ಅನ್ಯದೇವತೆಗಳಿಗೆ ಪಾನವನ್ನು ನೈವೇದ್ಯವಾಗಿ ಅರ್ಪಿಸಿ ನನ್ನನ್ನು ಕೆಣಕಿದ್ದಾರೋ, ಆ ಮನೆಗಳಿರುವ ಈ ಪಟ್ಟಣವನ್ನು ಸುಟ್ಟುಬಿಡುವರು.

ಅವನು ಯೆಹೋವನ ಆಲಯವನ್ನೂ, ಅರಮನೆಯನ್ನೂ ಮತ್ತು ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.

ನಾನು ಪ್ರಮಾಣ ಪೂರ್ವಕವಾಗಿ ಅವರಿಗೆ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಸೇರಿಸಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳನ್ನೂ ನೋಡಿ ಅಲ್ಲಿ ಯಜ್ಞಪಶುಗಳನ್ನು ವಧಿಸಿ, ನನ್ನನ್ನು ರೇಗಿಸುವ ನೈವೇದ್ಯವನ್ನರ್ಪಿಸಿ, ಸುಗಂಧ ಹೋಮಮಾಡಿ, ಪಾನದ್ರವ್ಯವನ್ನು ಸುರಿದು, ಬಲಿ ಅರ್ಪಿಸುತ್ತಿದ್ದರು.’

ಆದರೆ ದೇವರು ಅವರಿಗೆ ವಿಮುಖನಾಗಿ, ಆಕಾಶದ ನಕ್ಷತ್ರಗಣಗಳನ್ನು ಪೂಜಿಸುವುದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವುದೇನಂದರೆ, “‘ಇಸ್ರಾಯೇಲ್ ವಂಶದವರೇ, ನೀವು ಅರಣ್ಯದಲ್ಲಿದ್ದ ನಲವತ್ತು ವರ್ಷ ನನಗೆ ಯಜ್ಞಗಳನ್ನೂ, ಬಲಿಗಳನ್ನೂ ಅರ್ಪಿಸುತ್ತಿದ್ದಿರೋ? ಇಲ್ಲವಲ್ಲಾ;