ನೀವು ಪುನಃ ನನ್ನನ್ನು ಬಿಟ್ಟು, ಅನ್ಯದೇವತೆಗಳನ್ನು ಸೇವಿಸುತ್ತಾ ಬಂದಿರಿ. ಆದುದರಿಂದ ನಾನು ಇನ್ನು ಮುಂದೆ ನಿಮ್ಮನ್ನು ರಕ್ಷಿಸುವುದೇ ಇಲ್ಲ.
TSK
TSK · ಯೆರೆಮಿಯ 2:13
مراجع Treasury of Scripture Knowledge في ಕನ್ನಡ IRV.
ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ಕೋಪಗೊಳ್ಳುವಂತೆ ಮಾಡಿರುವುದರಿಂದ ನನ್ನ ಕೋಪಾಗ್ನಿಯು ಈ ದೇಶದ ಮೇಲೆ ಉರಿಯಹತ್ತಿದೆ, ಅದು ಆರಿಹೋಗುವುದೇ ಇಲ್ಲ’ ಎನ್ನುತ್ತಾನೆ.
ಆದರೆ ನನ್ನ ಜನರು ನನ್ನ ಮಾತು ಕೇಳಲಿಲ್ಲ; ಇಸ್ರಾಯೇಲರು ನನಗೆ ಸಮ್ಮತಿಸಲಿಲ್ಲ.
ಪ್ರಭುಗಳಲ್ಲಾಗಲಿ, ಮನುಷ್ಯರಲ್ಲಾಗಲಿ ಭರವಸವಿಡಬೇಡಿರಿ, ಅವರು ಸಹಾಯ ಮಾಡ ಶಕ್ತರಲ್ಲ,
ಲೋಕದಲ್ಲಿ ನಡೆಯುವ ಎಲ್ಲಾ ಕೆಲಸಗಳನ್ನು ನೋಡಿದ್ದೇನೆ. ಆಹಾ, ಗಾಳಿಯನ್ನು ಹಿಂದಟ್ಟುವ ಹಾಗೆ ಸಮಸ್ತವೂ ವ್ಯರ್ಥ.
ಒಬ್ಬನು ಜ್ಞಾನದಿಂದಲೂ, ತಿಳಿವಳಿಕೆಯಿಂದಲೂ ತನ್ನ ಕೆಲಸವನ್ನು ನಡೆಸಿ ಸಿದ್ಧಿಗೆ ತಂದ ಮೇಲೆ ಆ ಕೆಲಸದಲ್ಲಿ ಪ್ರಯಾಸಪಡದವನಿಗೆ ಅದರ ಫಲವನ್ನು ಭಾಧ್ಯತೆಯಾಗಿ ಬಿಡಬೇಕಾಯಿತು. ಇದು ಸಹ ವ್ಯರ್ಥವೂ, ಕೇವಲ ಅನ್ಯಾಯವೂ ಆಗಿದೆ.
¶ ಆಗ ಸಮಸ್ತ ಪ್ರಯಾಸವನ್ನು, ಕೈಗೂಡುವ ಸಕಲ ಕಾರ್ಯವನ್ನು ನೋಡಿ ಇವು ಪರಸ್ಪರ ಮತ್ಸರಕ್ಕೆ ಆಸ್ಪದವೆಂದು ಗ್ರಹಿಸಿಕೊಂಡೆನು. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.
ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುದು. ಆದರೆ ಇಸ್ರಾಯೇಲ್ ಜನರಿಗೋ ತಿಳಿವಳಿಕೆ ಇಲ್ಲ. ನನ್ನ ಪ್ರಜೆಯು ಆಲೋಚಿಸುವುದಿಲ್ಲ.
ಆದಕಾರಣ ನನ್ನ ಜನರು ಜ್ಞಾನಹೀನರಾಗಿ ಸೆರೆಗೆ ಹೋಗುವುದು ಖಂಡಿತ. ಘನವಂತರು ಹಸಿಯುವರು ಮತ್ತು ಜನಸಮೂಹವು ಬಾಯಾರಿಕೆಯಿಂದ ಒಣಗುವುದು.
ಚೀಲದಿಂದ ಚಿನ್ನವನ್ನು ಸುರಿದು, ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೊಟ್ಟು ಕೂಲಿಯನ್ನು ಗೊತ್ತುಮಾಡಿದಾಗ, ಅವನು ಅದನ್ನು ದೇವರನ್ನಾಗಿ ಮಾಡಲು, ಅವರು ಅದಕ್ಕೆ ಎರಗಿ ಪೂಜೆಮಾಡುವರು.
“ನಿಜವಾಗಿ ಇವರು ನನ್ನ ಜನರು, ನನ್ನ ಮಕ್ಕಳು, ಮೋಸ ಮಾಡಲಾರರು” ಎಂದು ಆತನು ಅಂದುಕೊಂಡು ಅವರಿಗೆ ರಕ್ಷಕನಾದನು.
ತನ್ನ ದೇವತೆಗಳು ದೇವರಲ್ಲದೆ ಇದ್ದರೂ ಅವುಗಳನ್ನು ಯಾವ ಜನಾಂಗವಾದರೂ ಬದಲಾಯಿಸಿಕೊಂಡಿತೋ? ಆದರೆ ನನ್ನ ಜನರು ತಮ್ಮ ಮಹಿಮೆಯಾದ ನನ್ನ ಬದಲಾಗಿ ಕೆಲಸಕ್ಕೆ ಬಾರದವುಗಳನ್ನು ಆರಿಸಿಕೊಂಡಿದ್ದಾರೆ.
ಕಳ್ಳನು ಸಿಕ್ಕಿಬಿದ್ದು ಹೇಗೆ ನಾಚಿಕೆಪಡುವನೋ, ಹಾಗೆಯೇ ಇಸ್ರಾಯೇಲ್ ವಂಶವು ನಾಚಿಕೆಪಡುವುದು. ಅವರು ಮರಕ್ಕೆ, “ನೀನು ನನ್ನ ತಂದೆ” ಎಂತಲೂ; ಕಲ್ಲಿಗೆ, “ನೀನು ಹೆತ್ತ ತಾಯಿ” ಎಂತಲೂ ಹೇಳುವ ಪ್ರಜೆಗಳು. ಅವರ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು ನಾಚಿಕೆಗೆ ಈಡಾಗುವರು.
¶ ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲು ಅರಿಯರು.
ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?
ಯೆಹೋವನೇ, ಇಸ್ರಾಯೇಲರ ನಿರೀಕ್ಷೆಯೇ, ನಿನ್ನನ್ನು ಬಿಟ್ಟುಹೋಗುವವರು ಆಶಾಭಂಗಪಡುವರು. ಯೆಹೋವನಾದ ನಿನ್ನನ್ನು ತೊರೆದವರು ಜೀವಜಲದ ಬುಗ್ಗೆಯನ್ನು ತೊರೆದವರಾಗಿದ್ದಾರೆ; ಅವರ ಹೆಸರು ಧೂಳಿನಲ್ಲಿ ಬರೆಯಲ್ಪಡುವುದು.
¶ “‘ಈ ಜನರು ನನ್ನನ್ನು ತೊರೆದು ತಮಗಾಗಲಿ, ತಮ್ಮ ಪೂರ್ವಿಕರಿಗಾಗಲಿ ಅಥವಾ ಯೆಹೂದದ ಅರಸರಿಗಾಗಲಿ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕುತ್ತಾ, ಈ ಸ್ಥಳವನ್ನು ಅನ್ಯಸ್ಥಾನವನ್ನಾಗಿ ಮಾಡಿದ್ದಾರೆ.
ನನ್ನ ಜನರೋ ಕೆಲವು ಕಾಲದಿಂದ ಶತ್ರುಗಳಾಗಿ ಎದ್ದಿದ್ದಾರೆ. ಜಗಳವನ್ನೊಲ್ಲದೆ ನಿರ್ಭಯವಾಗಿ ಹೋಗಿ ಬರುವವರ ಮೇಲಂಗಿಯನ್ನು ಕಿತ್ತುಕೊಳ್ಳುತ್ತೀರಿ.
‹ಆದರೆ, ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವುದಿಲ್ಲ. ನಾನು ಅವನಿಗೆ ಕೊಡುವ ನೀರು›‹ಅವನಲ್ಲಿ ಉಕ್ಕುವ ನೀರಿನ ಬುಗ್ಗೆಗಳಾಗಿದ್ದು ನಿತ್ಯ ಜೀವವನ್ನು ಉಂಟುಮಾಡುವುದು”› ಎಂದು ಹೇಳಿದನು.
ಇವರು ನೀರಿಲ್ಲದ ಹಾಳು ಬಾವಿಗಳೂ, ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮೋಡಗಳೂ ಆಗಿದ್ದಾರೆ. ಇಂಥವರಿಗಾಗಿ ಕಗ್ಗತ್ತಲೆಯನ್ನು ಸಂಗ್ರಹಿಸಿ ಇಡಲಾಗಿದೆ.
¶ ಆ ಮೇಲೆ ಅವನು ಸ್ಫಟಿಕದಂತೆ ಅತಿಶುದ್ಧವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನದಿಂದ ಹೊರಟು,