ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಬಳಿಯಲ್ಲಿದ್ದು ನಿನ್ನನ್ನು ಅಭಿವೃದ್ಧಿಪಡಿಸಿ ನಿನಗೂ, ನಿನ್ನ ಸಂತತಿಯವರಿಗೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಹೀಗೆ ನಿನ್ನ ತಂದೆಯಾದ ಅಬ್ರಹಾಮನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು,
TSK
TSK · ಯೆರೆಮಿಯ 2:21
مراجع Treasury of Scripture Knowledge في ಕನ್ನಡ IRV.
ನೀನು ಅವರನ್ನು ನಿನ್ನ ಸ್ವಕೀಯ ದೇಶವಾಗಿರುವ ಬೆಟ್ಟದ ಸೀಮೆಗೆ ತಂದು ಬಲಪಡಿಸುವಿ, ಯೆಹೋವನೇ, ನೀನು ಸ್ವಂತ ನಿವಾಸಕ್ಕಾಗಿ ಕಟ್ಟಿಕೊಂಡಿರುವ ಸ್ಥಳದವರೆಗೂ ಕರ್ತನೇ, ನೀನು ನಿನಗಾಗಿ ಸಿದ್ಧಪಡಿಸಿಕೊಂಡಿರುವ ಪವಿತ್ರ ಪರ್ವತದವರೆಗೂ ಅವರನ್ನು ಬರಮಾಡುವಿ.
ಅವರು ಸೊದೋಮ್ಯರೆಂಬ ದ್ರಾಕ್ಷಾಲತೆಯ ಒಂದು ಬಳ್ಳಿಯಂತಿದ್ದಾರೆ; ಮತ್ತು ಅದು ಗೊಮೋರ ಪಟ್ಟಣದ ತೋಟಗಳಲ್ಲಿ ಬೆಳೆಯುವ ಜಾತಿ. ಅದರ ದ್ರಾಕ್ಷಿಹಣ್ಣು ವಿಷದ ದ್ರಾಕ್ಷಿಹಣ್ಣು; ಅದರ ಗೊಂಚಲು ಕಹಿ.
ನಿನ್ನ ಹಸ್ತವೇ ಈ ದೇಶದಲ್ಲಿದ್ದ ಜನಾಂಗಗಳನ್ನು ಹೊರಡಿಸಿ, ನಮ್ಮ ಪೂರ್ವಿಕರನ್ನೇ ನೆಲೆಗೊಳಿಸಿದೆ; ನೀನು ಆ ಅನ್ಯಜನಗಳನ್ನು ತೆಗೆದುಬಿಟ್ಟು ನಮ್ಮವರನ್ನು ಹಬ್ಬಿಸಿದಿ.
ಅದಕ್ಕೋಸ್ಕರ ನೆಲವನ್ನು ಹಸನುಮಾಡಿದ ಮೇಲೆ, ಅದು ಬೇರುಬಿಟ್ಟು ದೇಶದಲ್ಲೆಲ್ಲಾ ಹಬ್ಬಿಕೊಂಡಿತು.
¶ ಅಯ್ಯೋ, ನಂಬಿಕೆಯುಳ್ಳ ನಗರಿಯು ಸೂಳೆಯಾದಳಲ್ಲಾ! ನ್ಯಾಯದಿಂದ ತುಂಬಿ ಧರ್ಮಕ್ಕೆ ನೆಲೆಯಾಗಿದ್ದ ನಗರ ಈಗ ಕೊಲೆಪಾತಕರಿಗೆ ನೆಲೆಯಾಗಿದೆ.
ಅವನು ಅದನ್ನು ಅಗೆದು, ಕಲ್ಲುಗಳನ್ನು ತೆಗೆದುಹಾಕಿ, ಒಳ್ಳೆಯ ದ್ರಾಕ್ಷಿಯ ಸಸಿಗಳನ್ನು ನೆಟ್ಟು, ಮಧ್ಯದಲ್ಲಿ ಗೋಪುರವನ್ನು ಕಟ್ಟಿ, ದ್ರಾಕ್ಷಿಯ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆಯ ಸಿಹಿ ದ್ರಾಕ್ಷಿಯ ಹಣ್ಣನ್ನು ಕೊಡುವುದೆಂದು ಎದುರುನೋಡುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿತು.
¶ ನನ್ನ ಸೇವಕನಾದ ಇಸ್ರಾಯೇಲೇ, ನಾನು ಆರಿಸಿಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ,
ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.
ಯೆಹೋವನು ನಿನಗೆ ಸುಂದರವಾದ ಫಲದಿಂದ ಕೂಡಿದ ಹಸಿರಾದ ಒಲೀವ್ ಮರವೆಂದು ಹೆಸರಿಟ್ಟಿದ್ದನು. ಆದರೆ ಅವನು ಆ ಮರಕ್ಕೆ ಬೆಂಕಿ ಹಚ್ಚಿ ಬಲು ಧಗಧಗಿಸುವಂತೆ ಮಾಡಿದ್ದಾನೆ; ಅದರ ರೆಂಬೆಗಳು ಮುರಿದುಹೋಗಿವೆ.
“ನರಪುತ್ರನೇ, ದ್ರಾಕ್ಷಿಯ ಗಿಡವು ಉಳಿದ ಗಿಡಗಳಿಗಿಂತ ಎಷ್ಟು ಹೆಚ್ಚು? ವನವೃಕ್ಷಗಳಲ್ಲಿ ದ್ರಾಕ್ಷಾಲತೆಯ ವಿಶೇಷವೇನು?
¶ ಆಗ ಯೇಸು ಅವರೊಂದಿಗೆ ಸಾಮ್ಯಗಳಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು, ‹“ಒಬ್ಬ ಮನುಷ್ಯನು›‹ಒಂದು ದ್ರಾಕ್ಷಿಯ ತೋಟವನ್ನು ಮಾಡಿ ಸುತ್ತಲೂ ಬೇಲಿ ಹಾಕಿಸಿ ದ್ರಾಕ್ಷಿಯ ಆಲೆಗಾಗಿ ಒಂದು ಗುಂಡಿಯನ್ನು ತೆಗೆಸಿ›‹ಕಾವಲು ಗೋಪುರವನ್ನು ಕಟ್ಟಿಸಿದನು. ಬಳಿಕ ಆ ತೋಟವನ್ನು ದ್ರಾಕ್ಷಿಯ ತೋಟಗಾರರಿಗೆ ಗುತ್ತಿಗೆಗೆ ಕೊಟ್ಟು, ಹೊರದೇಶಕ್ಕೆ ಹೊರಟು ಹೋದನು.›
¶ ‹“ನಾನೇ ನಿಜವಾದ ದ್ರಾಕ್ಷಿಬಳ್ಳಿ, ನನ್ನ ತಂದೆ ತೋಟಗಾರನು.›