ಆದರೆ ಯೆಹೂದ್ಯರೂ ಯೆರೂಸಲೇಮಿನವರೂ ಮನಸ್ಸೆಯಿಂದ ಪ್ರೇರಿತರಾಗಿ ಇಸ್ರಾಯೇಲರ ಮುಂದೆಯೇ ಯೆಹೋವನಿಂದ ನಾಶಹೊಂದಿದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.
TSK
TSK · ಯೆರೆಮಿಯ 2:33
مراجع Treasury of Scripture Knowledge في ಕನ್ನಡ IRV.
“ನಾನು ಅಶುದ್ಧವಾಗಲಿಲ್ಲ, ಬಾಳ್ ದೇವತೆಗಳನ್ನು ನಾನು ಹಿಂಬಾಲಿಸಲಿಲ್ಲ” ಎಂದು ಹೇಗೆ ಹೇಳುತ್ತಿ? ಆ ತಗ್ಗಿನಲ್ಲಿನ ನಿನ್ನ ನಡತೆಯನ್ನು ನೋಡು, ನೀನು ಮಾಡಿದ ದುಷ್ಟ ಕೆಲಸವನ್ನು ಮನಸ್ಸಿಗೆ ತಂದುಕೋ. ಅತ್ತಿತ್ತ ನೆಗೆದಾಡುವ ಬೆದೆಗೆ ಬಂದ ಹೆಣ್ಣು ಒಂಟೆಯಂತಿರುವೆ.
ಯೆಹೋವನು ಹೀಗೆನ್ನುತ್ತಾನೆ, “ಗಂಡನು ತ್ಯಜಿಸಿದವಳು ಅವನಿಂದ ಹೊರಟು ಮತ್ತೊಬ್ಬನ ಹೆಂಡತಿಯಾದ ಮೇಲೆ, ಅವಳನ್ನು ಮೊದಲ ಗಂಡನು ತಿರುಗಿ ಸೇರಿಸಿಕೊಂಡಾನೇ? ಸೇರಿಸಿಕೊಂಡರೆ ಆ ದೇಶವು ಕೇವಲ ಅಪವಿತ್ರವಾಗಿ ಹೋಗುವುದಲ್ಲವೇ? ಹೀಗಿರಲು ಬಹುಮಂದಿಯೊಡನೆ ವ್ಯಭಿಚಾರ ಮಾಡಿದ ನೀನು ನನ್ನ ಬಳಿಗೆ ಹಿಂದಿರುಗಿ ಬರುತ್ತಿಯಾ?
ಆದರೆ ನೀನು ನಡೆದ ದುರ್ಮಾರ್ಗವು ಅವರು ನಡೆದಂಥದಲ್ಲ, ನಿನ್ನ ಅಸಹ್ಯಕಾರ್ಯಗಳು ಅವರು ನಡೆಸಿದಂಥವುಗಳಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸರ್ವದಾ ಅವರಿಗಿಂತ ಬಹುಕೆಟ್ಟವಳಾಗಿ ನಡೆದುಕೊಂಡೆ.”
ಅವರ ತಾಯಿ ವ್ಯಭಿಚಾರ ಮಾಡಿದ್ದಾಳೆ, ಹೆತ್ತವಳು ನಾಚಿಕೆಗೇಡಿಯಾಗಿ ನಡೆದಿದ್ದಾಳೆ. ‘ತನಗೆ ಬೇಕಾದ ಅನ್ನ ಪಾನಗಳನ್ನೂ, ಉಣ್ಣೆ ನಾರುಗಳನ್ನೂ, ತೈಲವನ್ನೂ ಪಾನಕಗಳನ್ನೂ ತನಗೆ ಕೊಡುವ ಹಾಗೂ ತನ್ನೊಂದಿಗೆ ವ್ಯಭಿಚಾರದಲ್ಲಿ ತೊಡಗಿಸಿಕೊಂಡವರ ಹಿಂದೆ ಹೋಗುವೆನು ಅಂದುಕೊಂಡಿದ್ದಾಳೆ.’”