TSK

TSK · ಯೆರೆಮಿಯ 2:6

مراجع Treasury of Scripture Knowledge في ಕನ್ನಡ IRV.

العودة إلى المقطع

ಆಸ್ತಿಯೆಲ್ಲವೂ ಹೆಚ್ಚುತ್ತಿರುವಾಗ ಒಂದು ವೇಳೆ ನೀವು ಅಹಂಕಾರದಿಂದ ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟೀರಿ.

ಆತನು ಶೂನ್ಯವೂ ಮತ್ತು ಭಯಂಕರವೂ ಆಗಿರುವ ಮರಳುಗಾಡಿನಲ್ಲಿ ಅವರನ್ನು ಕಂಡು ಗುರಾಣಿಯಂತೆ ಆವರಿಸಿಕೊಂಡನು. ಪ್ರೀತಿಯಿಂದ ಪರಾಂಬರಿಸಿ ಕಣ್ಣುಗುಡ್ಡೆಯಂತೆ ಕಾಪಾಡಿದನು.

“ಎಲೀಯನ ದೇವರಾದ ಯೆಹೋವನೆಲ್ಲಿ?” ಎಂದು ಅಂದುಕೊಂಡು, ಆ ಕಂಬಳಿಯಿಂದ ನೀರನ್ನು ಹೊಡೆಯಲು ಅದು ಎರಡು ಭಾಗವಾಯಿತು. ಎಲೀಷನು ಹೊಳೆಯನ್ನು ದಾಟಿಹೋದನು.

ನಾನು ಅಂಧಕಾರದಿಂದಲೂ, ಮರಣಾಂಧಕಾರದಿಂದಲೂ ತುಂಬಿದ ದೇಶಕ್ಕೆ ಹೋಗುವುದರೊಳಗೆ ಸ್ವಲ್ಪ ಹರ್ಷಗೊಳ್ಳಲು ಅವಕಾಶವಾಗಲಿ. ಆ ದೇಶದಿಂದ ತಿರುಗಿ ಬರಲಾರೆನು.

ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.

ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ, ಪುರಾತನ ಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.

ಈಗ ನಿನ್ನ ಹೆಸರೆತ್ತಿ ಪ್ರಾರ್ಥಿಸಿ, ನಿನ್ನನ್ನು ಆಶ್ರಯಿಸಲು ತ್ರಾಣ ತಂದುಕೊಳ್ಳುವವನು ಎಲ್ಲಿಯೂ ಇಲ್ಲ; ನೀನು ನಮಗೆ ವಿಮುಖನಾಗಿ ನಮ್ಮನ್ನು ನಮ್ಮ ಅಪರಾಧಗಳಿಗೆ ವಶಮಾಡಿದ್ದಿಯಲ್ಲಾ.

ಯಾಜಕರು, ‘ಯೆಹೋವನು ಎಲ್ಲಿ?’ ಎಂಬುದನ್ನು ವಿಚಾರಿಸಲಿಲ್ಲ. ಧರ್ಮೋಪದೇಶಕರು ನನ್ನನ್ನು ತಿಳಿಯಲ್ಲಿಲ್ಲ, ಪಾಲಕರು ನನಗೆ ದ್ರೋಹಮಾಡಿದರು, ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ ಕೆಲಸಕ್ಕೆ ಬಾರದವುಗಳನ್ನು ಆರಾಧಿಸಿದರು.

ಅವರು ಯೆಹೋವನನ್ನು ಅಲ್ಲಗಳೆದು, ‘ಆತನು ಏನು ಮಾಡುವನು? ನಮಗೆ ಕೇಡುಬಾರದು, ಖಡ್ಗವೂ, ಕ್ಷಾಮವೂ ನಮ್ಮ ಕಣ್ಣಿಗೆ ಬೀಳವು;

ನಾನಾದರೋ ನೀನು ಐಗುಪ್ತ ದೇಶದಲ್ಲಿದ್ದ ಕಾಲದಿಂದ ಯೆಹೋವನೆಂಬ ನಿನ್ನ ದೇವರಾಗಿದ್ದೇನೆ; ನನ್ನ ಹೊರತು ಯಾವ ದೇವರೂ ನಿನಗೆ ಗೊತ್ತಿಲ್ಲ, ನನ್ನ ಹೊರತು ಯಾವ ರಕ್ಷಕನೂ ಇಲ್ಲ.

ಹೀಗೆ ಕತ್ತಲಲ್ಲಿ ವಾಸಿಸಿದ ಈ ಸೀಮೆಯ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣದ ಛಾಯೆ ನೆರೆದ ಪ್ರದೇಶಗಳಲ್ಲಿ ವಾಸಿಸುವವರಿಗೆ ಬೆಳಕು ಉದಯವಾಯಿತು” ಎಂಬುದು.