ಬಿಡುಗಡೆ ಮಾಡುವಾಗ ಬರಿಗೈಯಲ್ಲಿ ಕಳುಹಿಸಿಬಿಡಬಾರದು.
TSK
TSK · ಯೆರೆಮಿಯ 22:13
مراجع Treasury of Scripture Knowledge في ಕನ್ನಡ IRV.
ಫರೋಹನು ಗೊತ್ತುಮಾಡಿದಷ್ಟು ಬೆಳ್ಳಿ ಬಂಗಾರವನ್ನು ಕೊಡುವುದಕ್ಕಾಗಿ ಯೆಹೋಯಾಕೀಮನು ತನ್ನ ದೇಶದಲ್ಲಿ ತೆರಿಗೆಯನ್ನು ವಿಧಿಸಿದನು. ತೆರಿಗೆಕೊಡಬೇಕಾದ ಪ್ರತಿಯೊಬ್ಬನು ತನಗೆ ನೇಮಕವಾದಷ್ಟು ಬೆಳ್ಳಿ ಬಂಗಾರವನ್ನು ದೇಶದ ಜನರಿಂದ ವಸೂಲಿಮಾಡಿಕೊಂಡು ಫರೋಹ ನೆಕೋವನಿಗೆ ತಂದೊಪ್ಪಿಸಿದನು.
ಬಟ್ಟೆಯಿಲ್ಲದೆ ಬೆತ್ತಲೆಯಾಗಿ ಅಲೆಯುವರು; ಹಸಿವಿನಿಂದಲೇ ಸಿವುಡುಗಳನ್ನು ಹೊರುವರು.
ಆದಕಾರಣ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ವಿಷಯವಾಗಿ ಯೆಹೋವನು. “ಅಯ್ಯೋ ಅಣ್ಣಾ, ಅಯ್ಯೋ ಅಕ್ಕಾ ಎಂದು ಗೋಳಾಡುವಂತೆ ಇವನಿಗಾಗಿ ಯಾರೂ ಗೋಳಾಡುವುದಿಲ್ಲ; ಅಯ್ಯೋ ನಮ್ಮೊಡೆಯಾ, ಅಯ್ಯೋ, ದೊರೆಯ ಮಹಿಮೆಯೇ ಎಂದು ಇವನಿಗಾಗಿ ಯಾರೂ ಪ್ರಲಾಪಿಸರು.
‘ಕೇಡಿನಿಂದ, ತಪ್ಪಿಸಿಕೊಳ್ಳಲು ತನ್ನ ಗೂಡನ್ನು ಎತ್ತರದಲ್ಲಿ ಕಟ್ಟಿ ತಪ್ಪಿಸಿಕೊಳ್ಳಬೇಕೆಂದು, ತನ್ನ ಕುಟುಂಬಕ್ಕೆ ಆಸ್ತಿಯನ್ನು ಅನ್ಯಾಯವಾಗಿ ಮೋಸದಿಂದ ದೋಚಿಕೊಳ್ಳುವವನ ಗತಿಯನ್ನು ಏನು ಹೇಳಲಿ;
“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.