¶ ನೀವು ಅರಣ್ಯದಲ್ಲಿ ನಿಮ್ಮ ದೇವರಾದ ಯೆಹೋವನಿಗೆ ಕೋಪಹುಟ್ಟಿಸಿದ್ದನ್ನು ನೆನಪುಮಾಡಿಕೊಳ್ಳಿರಿ; ಅದನ್ನು ಮರೆಯಬೇಡಿರಿ. ನೀವು ಐಗುಪ್ತದೇಶವನ್ನು ಬಿಟ್ಟಂದಿನಿಂದ ಈ ಸ್ಥಳಕ್ಕೆ ಬಂದ ದಿನದವರೆಗೂ ಯೆಹೋವನ ಆಜ್ಞೆಗಳನ್ನು ಧಿಕ್ಕರಿಸುವವರಾಗಿದ್ದೀರಿ.
TSK
TSK · ಯೆರೆಮಿಯ 22:21
مراجع Treasury of Scripture Knowledge في ಕನ್ನಡ IRV.
ಯಾಕೆಂದರೆ ನೀವು ಹಟಮಾರಿಗಳು, ಆಜ್ಞೆಗೆ ಒಳಗಾಗದವರೆಂಬುದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಯೆಹೋವನಿಗೆ ವಿರುದ್ಧವಾಗಿ ಪ್ರತಿಭಟಿಸಿದ್ದೀರಿ; ನಾನು ಹೋದ ತರುವಾಯ ನೀವು ಪುನಃ ಬೀಳುವುದು ಮತ್ತಷ್ಟು ನಿಶ್ಚಯ.
¶ ಈ ಇಸ್ರಾಯೇಲರು ಯೆಹೋವನ ದೃಷ್ಟಿಯಲ್ಲಿ ಕೆಟ್ಟದನ್ನು ಮಾಡಿದರು ಹಾಗೂ ಬಾಳನನ್ನು ಸೇವಿಸಿದರು.
ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ.
ನಮ್ಮ ಪೂರ್ವಿಕರಂತೆ ನಾವೂ ಪಾಪಿಗಳು; ಅಪರಾಧಮಾಡಿದೆವು; ದುಷ್ಟತನವನ್ನು ನಡೆಸಿದೆವು.
ನೀನು ಕೇಳಿಲ್ಲ, ತಿಳಿದೂ ಇಲ್ಲ, ಪುರಾತನಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ನೀನು ದೊಡ್ಡ ವಂಚಕನೆಂದೂ, ಗರ್ಭದಿಂದಲೇ ದ್ರೋಹಿಯೆಂದು ನಾನು ತಿಳಿದುಕೊಂಡಿದ್ದೇನೆ.
ನೀವು ಎಂತಹ ದುಷ್ಟ ವಂಶದವರು! ಯೆಹೋವನ ಮಾತನ್ನು ಕೇಳಿರಿ, “ನಾನು ಇಸ್ರಾಯೇಲಿಗೆ ಅರಣ್ಯವಾಗಿಯೂ, ಗಾಢಾಂಧಕಾರದ ಪ್ರದೇಶವಾಗಿಯೂ ಏಕೆ ಪರಿಣಮಿಸಿದವು? ‘ನಾವು ಮನಬಂದಂತೆ ತಿರುಗುತ್ತಿದ್ದೇವೆ, ನಿನ್ನ ಹತೋಟಿಗೆ ಇನ್ನು ಬಾರೆವು’” ಎಂದು ನನ್ನ ಜನರು ಹೇಳುವುದು ಏಕೆ?
ಯೆಹೋವನು, “ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವುವು. ಆ ಸನ್ಮಾರ್ಗವು ಎಲ್ಲಿ? ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು ಎಂದು ಅಪ್ಪಣೆಕೊಟ್ಟಾಗ ಅವರು ‘ಅದರಲ್ಲಿ ನಾವು ನಡೆಯುವುದೇ ಇಲ್ಲ’ ಎಂದರು.
ಆದರೆ, ‘ನನ್ನ ಧ್ವನಿಗೆ ಕಿವಿಗೊಡಿರಿ, ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಪ್ರಜೆಯಾಗಿರುವಿರಿ; ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೇ ನಡೆಯಿರಿ’ ಎಂಬ ಈ ಒಂದು ಅಪ್ಪಣೆಯನ್ನು ಮಾತ್ರ ಕೊಟ್ಟೆನು.
ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ, ನನ್ನ ಆಜ್ಞೆಗೆ ಮಣಿಯಲಿಲ್ಲ; ತಮ್ಮ ಪೂರ್ವಿಕರಿಗಿಂತಲೂ ಕೆಟ್ಟವರಾಗಿ ನಡೆದರು.
ಯೆಹೋವನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ತಪ್ಪದೆ ಕಳುಹಿಸುತ್ತಿದ್ದರೂ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.
¶ ಹೀಗಿರಲು ಸೇನಾಧೀಶ್ವರನಾದ ಯೆಹೋವನ ಈ ನುಡಿಯನ್ನು ಕೇಳಿರಿ, “ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ,
ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ, ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.
¶ “‘ಅವರಾದರೋ ನನ್ನ ಮಾತನ್ನು ನಿರಾಕರಿಸಿ, ನನ್ನ ಮೇಲೆ ತಿರುಗಿ ಬಿದ್ದರು; ತಮ್ಮ ಕಣ್ಣಿಗೆ ಕಾಣುವ ಇಷ್ಟವಾದ ಅಸಹ್ಯ ವಸ್ತುಗಳನ್ನು ಯಾರೂ ಬಿಸಾಡಿಬಿಡಲಿಲ್ಲ, ಐಗುಪ್ತದ ವಿಗ್ರಹಗಳನ್ನು ತ್ಯಜಿಸಲಿಲ್ಲ; ಆಗ ನಾನು ಇವರ ಮೇಲೆ ಐಗುಪ್ತ ದೇಶದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ನನ್ನ ಕೋಪವನ್ನು ತೀರಿಸಿಕೊಳ್ಳುವೆನು’ ಅಂದುಕೊಂಡೆನು.
¶ “ಆದರೆ ಆ ಸಂತಾನದವರಾದರೋ ನನ್ನ ಮೇಲೆ ತಿರುಗಿ ಬಿದ್ದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಗೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಅನುಸರಿಸಿ ನಡೆಯಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದರು; ಆದುದರಿಂದ ನಾನು ಅರಣ್ಯದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು” ಅಂದುಕೊಂಡೆನು.
ಅವರು ಐಗುಪ್ತದಲ್ಲಿ ವ್ಯಭಿಚಾರ ಮಾಡುತ್ತಿದ್ದರು. ಬಾಲ್ಯದಲ್ಲೇ ವ್ಯಭಿಚಾರ ಮಾಡಿದ್ದರಿಂದ ಅವರ ಸ್ತನಗಳು ಹಿಸುಕಲ್ಪಟ್ಟವು. ಎಳೆಯ ತೊಟ್ಟುಗಳು ನಸುಕಲ್ಪಟ್ಟವು.