TSK

TSK · ಯೆರೆಮಿಯ 23:13

مراجع Treasury of Scripture Knowledge في ಕನ್ನಡ IRV.

العودة إلى المقطع

ನೀನು ಈಗ ಎಲ್ಲಾ ಇಸ್ರಾಯೇಲರನ್ನೂ, ಈಜೆಬೆಲಳಿಂದ ಪೋಷಣೆ ಹೊಂದುವ ಬಾಳನ ನಾನೂರೈವತ್ತು ಪ್ರವಾದಿಗಳನ್ನು ಮತ್ತು ಅಶೇರ ದೇವತೆಯ ನಾನೂರು ಪ್ರವಾದಿಗಳನ್ನು ಕರ್ಮೆಲ್ ಬೆಟ್ಟಕ್ಕೆ ಕರೆಯಿಸು” ಎಂದು ಹೇಳಿದನು.

ಆಗ ಅವನು ಬಾಳನ ಪ್ರವಾದಿಗಳಿಗೆ, “ನೀವು ಹೆಚ್ಚು ಜನ ಇರುವುದರಿಂದ ಮೊದಲು ನೀವೇ ಒಂದು ಹೋರಿಯನ್ನು ಆರಿಸಿಕೊಂಡು ಅದನ್ನು ಸಿದ್ಧಪಡಿಸಿ, ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ. ಆದರೆ ಬೆಂಕಿಯನ್ನು ಹೊತ್ತಿಸಬಾರದು” ಅಂದನು.

ಆದರೆ ಯೆಹೂದ್ಯರೂ ಯೆರೂಸಲೇಮಿನವರೂ ಮನಸ್ಸೆಯಿಂದ ಪ್ರೇರಿತರಾಗಿ ಇಸ್ರಾಯೇಲರ ಮುಂದೆಯೇ ಯೆಹೋವನಿಂದ ನಾಶಹೊಂದಿದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.

ಯಾಜಕರು, ‘ಯೆಹೋವನು ಎಲ್ಲಿ?’ ಎಂಬುದನ್ನು ವಿಚಾರಿಸಲಿಲ್ಲ. ಧರ್ಮೋಪದೇಶಕರು ನನ್ನನ್ನು ತಿಳಿಯಲ್ಲಿಲ್ಲ, ಪಾಲಕರು ನನಗೆ ದ್ರೋಹಮಾಡಿದರು, ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ ಕೆಲಸಕ್ಕೆ ಬಾರದವುಗಳನ್ನು ಆರಾಧಿಸಿದರು.

ವ್ಯಭಿಚಾರ, ದ್ರಾಕ್ಷಾರಸ ಮತ್ತು ಮದ್ಯಗಳು ಬುದ್ಧಿಯನ್ನು ಕೆಡಿಸುತ್ತವೆ.

ದಂಡನೆಯ ದಿನಗಳು ಹತ್ತಿರವಾಗಿದೆ, ಮುಯ್ಯಿತೀರಿಸುವ ದಿನಗಳು ಸಮೀಪಿಸಿವೆ. ಅದು ಇಸ್ರಾಯೇಲಿನ ಅನುಭವಕ್ಕೆ ಬಂದೇ ಬರುವವು; ಇಸ್ರಾಯೇಲೇ, ನಿನ್ನ ಅಧರ್ಮವು ಬಹಳವಾಗಿರುವುದರಿಂದಲೂ, ವಿರೋಧವು ಹೆಚ್ಚಾಗಿರುವುದರಿಂದಲೂ, “ಪ್ರವಾದಿಯು ಮೂರ್ಖನು ಮತ್ತು ದೇವರಾತ್ಮ ಪ್ರೇರಿತನು ಹುಚ್ಚನು” ಅಂದುಕೊಳ್ಳುತ್ತೀ.