¶ “ಆದರೆ ಅವರು ತಾವೂ ಹಾಗು ತಮ್ಮ ಪೂರ್ವಿಕರು ನನಗೆ ದ್ರೋಹಿಗಳಾಗಿ ಪಾಪಮಾಡಿದವರೆಂದೂ ಅರಿಕೆಮಾಡಿದರೆ, ತಾವು ನನಗೆ ವಿರೋಧವಾಗಿ ನಡೆದುದರಿಂದಲೇ
TSK
TSK · ಯೆರೆಮಿಯ 29:13
مراجع Treasury of Scripture Knowledge في ಕನ್ನಡ IRV.
¶ ನಾನು ನಿಮ್ಮ ಮುಂದೆ ಇಟ್ಟಿರುವ ಆಶೀರ್ವಾದವೂ ಮತ್ತು ಶಾಪವೂ ನಿಮ್ಮ ಅನುಭವಕ್ಕೆ ಬಂದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಚದರಿಸಿರುವ ದೇಶಗಳಲ್ಲಿ ನೀವು ಇವುಗಳನ್ನು ನೆನಪಿಗೆ ತಂದುಕೊಂಡು,
ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಅವರು ಪಶ್ಚಾತ್ತಾಪಪಟ್ಟು, ನಿನ್ನ ಅನುಗ್ರಹದಿಂದ ತಮ್ಮ ಪೂರ್ವಿಕರಿಗೆ ದೊರಕಿದ ದೇಶದ ಕಡೆಗೂ, ನೀನು ಆರಿಸಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿಗೋಸ್ಕರ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು,
ಅರಸನು ಕಂಬದ ಬಳಿಯಲ್ಲಿ ನಿಂತು, ತಾನು ಯೆಹೋವನ ಮಾರ್ಗದಲ್ಲಿ ನಡೆಯುವುದಾಗಿಯೂ, ಆತನ ಆಜ್ಞಾನಿಯಮ, ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಕೈಕೊಳ್ಳುವುದಾಗಿಯೂ ಆ ಒಡಂಬಡಿಕೆಯ ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲಾ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಯೆಹೋವನಿಗೆ ಎಲ್ಲಾ ಜನರ ಎದುರು ಪ್ರಮಾಣ ಮಾಡಿದನು.
ತಾವು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಅವರು ಪಶ್ಚಾತ್ತಾಪಪಟ್ಟು, ನಿನ್ನ ಅನುಗ್ರಹದಿಂದ ತಮ್ಮ ಪೂರ್ವಿಕರಿಗೆ ದೊರಕಿದ ದೇಶದ ಕಡೆಗೂ, ನೀನು ಆರಿಸಿಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿನಲ್ಲಿ ಕಟ್ಟಿಸಿರುವ ಈ ಆಲಯದ ಕಡೆಗೂ ತಿರುಗಿಕೊಂಡು, ‘ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು’ ಎಂದು ವಿಜ್ಞಾಪನೆ ಮಾಡಿ,
ಅವನು ತನ್ನ ದೇವರ ಒಲುಮೆಯನ್ನು ಪಡೆದುಕೊಳ್ಳುವುದಕ್ಕಾಗಿ ದೇವಾಲಯದ ಸೇವೆ ಮಾಡುವ, ಕಾರ್ಯದಲ್ಲಿಯೂ ಧರ್ಮಶಾಸ್ತ್ರವಿಧಿಗಳ ಸಂಬಂಧದಲ್ಲಿಯೂ, ತಾನು ಪ್ರಾರಂಭಿಸಿದ ಎಲ್ಲಾ ಕಾರ್ಯಗಳನ್ನು ಯಥಾರ್ಥಚಿತ್ತದಿಂದಲೂ ಪ್ರಾಮಾಣಿಕನಾಗಿಯೂ ನಡೆದುಕೊಂಡು ಕೃತಾರ್ಥನಾದನು.
ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು; ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು;
ನಾನು ಪೂರ್ಣಮನಸ್ಸಿನಿಂದ ನಿನ್ನನ್ನು ಹುಡುಕುತ್ತೇನೆ, ನಿನ್ನ ಆಜ್ಞೆಗಳಿಗೆ ತಪ್ಪಿಹೋಗದಂತೆ ನನ್ನನ್ನು ಕಾಪಾಡು.
ಗರ್ವಿಷ್ಠರು ನನ್ನ ವಿರುದ್ಧವಾಗಿ ಸುಳ್ಳುಕಲ್ಪಿಸಿದ್ದಾರೆ, ನಾನಾದರೋ ಪೂರ್ಣಮನಸ್ಸಿನಿಂದ ನಿನ್ನ ನಿಯಮಗಳನ್ನು ಕೈಕೊಳ್ಳುವೆನು.
ಯೆಹೋವನಿಗೆ ಮೊರೆಯಿಡುವವರು, ಯಥಾರ್ಥವಾಗಿ ಮೊರೆಯಿಡುವುದಾದರೆ ಆತನು ಹತ್ತಿರವಾಗಿಯೇ ಇದ್ದಾನೆ.
ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ, ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.
ಇಸ್ರಾಯೇಲಿಗೆ ಇಷ್ಟು ದಂಡನೆಯಾದರೂ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನನ್ನ ಕಡೆಗೆ ಪೂರ್ಣಮನದಿಂದಲ್ಲ, ಕಪಟದಿಂದಲೇ ನನ್ನ ಕಡೆ ತಿರುಗಿಕೊಂಡಿದ್ದಾಳೆ” ಎಂಬುದೇ ಯೆಹೋವನಾದ ನನ್ನ ನುಡಿ.
ಯೆಹೋವನು ಇಂತೆನ್ನುತ್ತಾನೆ, ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲರೂ ಮತ್ತು ಯೆಹೂದ್ಯರೂ ಒಟ್ಟಿಗೆ ಹಿಂದಿರುಗಿ ದಾರಿಯುದ್ದಕ್ಕೂ ಅಳುತ್ತಾ ಬಂದು, ತಮ್ಮ ದೇವರಾದ ಯೆಹೋವನಲ್ಲಿ ಮೊರೆಹೋಗುವರು.
ಯೆಹೋವನು ಹೀಗೆ ಹೇಳುತ್ತಾನೆ, “ಈಗಲಾದರೂ, ನೀವು ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ. ಉಪವಾಸಮಾಡಿರಿ, ಅಳಿರಿ, ಗೋಳಾಡಿರಿ.”
¶ ನಾಚಿಕೆಗೇಡಿ ಜನಾಂಗದವರೇ, ತೀರ್ಪು ಫಲಿಸುವುದರೊಳಗೆ, ಯೆಹೋವನ ಉಗ್ರಕೋಪವು ನಿಮ್ಮ ಮೇಲೆ ಬರುವುದಕ್ಕೆ ಮೊದಲೇ ಯೆಹೋವನ ಸಿಟ್ಟಿನ ದಿನವೂ ಉರಿದು ನಿಮ್ಮ ಮೇಲೆ ಬರುವುದಕ್ಕಿಂತ ಮೊದಲೇ, ನೀವೆಲ್ಲರೂ ಸೇರಿ ಬನ್ನಿರಿ, ಒಟ್ಟಾಗಿ ಕೂಡಿರಿ.
‹ಹಾಗೆಯೇ ನಾನು ನಿಮಗೆ ಹೇಳುವುದೇನಂದರೆ, ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು.›