ಯೆಹೋವನ ದೂತನು ಅವನಿಗೆ, “ನೀನು ಮೂರು ಸಾರಿ ಕತ್ತೆಯನ್ನು ಹೊಡೆದದ್ದೇಕೆ? ನೀನು ನನಗೆ ವಿರುದ್ಧವಾದ ಮಾರ್ಗವನ್ನು ಹಿಡಿದುದರಿಂದ ನಿನ್ನನ್ನು ತಡೆಯುವುದಕ್ಕೆ ನಾನೇ ಬಂದಿದ್ದೇನೆ.
TSK
TSK · ಯೆರೆಮಿಯ 3:21
مراجع Treasury of Scripture Knowledge في ಕನ್ನಡ IRV.
ನಿರ್ದೋಷದ ನಡತೆಯವನು ನಿರ್ಭಯವಾಗಿ ನಡೆಯುವನು, ವಕ್ರಮಾರ್ಗಿಯು ಬೈಲಿಗೆ ಬೀಳುವನು.
ಬಯಿತ್ ಮತ್ತು ದೀಬೋನ್ ಊರಿನವರು ಆಳುವುದಕ್ಕಾಗಿ, ತಮ್ಮ ಎತ್ತರವಾದ ಪೂಜಾ ಸ್ಥಳಗಳಿಗೆ ಹೋಗುತ್ತಾರೆ. ನೆಬೋವಿನಲ್ಲಿಯೂ, ಮೇದೆಬದಲ್ಲಿಯೂ ಮೋವಾಬ್ಯರು ಗೋಳಾಡುತ್ತಾರೆ. ಎಲ್ಲರ ತಲೆಯು ಬೋಳಾಗಿರುವುದು, ಎಲ್ಲರ ಗಡ್ಡವು ವಿಕಾರವಾಗಿ ಕತ್ತರಿಸಲ್ಪಡುವುದು.
ಯುವತಿಯು ತನ್ನ ಆಭರಣಗಳನ್ನು, ವಧುವು ತನ್ನ ಒಡ್ಯಾಣವನ್ನು ಮರೆಯುವುದುಂಟೇ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.
ಅಯ್ಯೋ, ನೋವು ನಿಲ್ಲದು ಎಂದು ನಿನ್ನ ಪೆಟ್ಟಿಗಾಗಿ ಏಕೆ ಅರಚಿಕೊಳ್ಳುತ್ತೀ? ನಿನ್ನ ಅಪರಾಧವು ಹೆಚ್ಚಿ ಪಾಪಗಳು ಬಹಳವಾದುದರಿಂದ ನಿನಗೆ ಇದನ್ನೆಲ್ಲಾ ಮಾಡಿದೆನು.
ಎಫ್ರಾಯೀಮು ಹೀಗೆ ಪ್ರಲಾಪಿಸಿಕೊಳ್ಳುವುದನ್ನು ಕೇಳಿದ್ದೇನೆ, ‘ನೀನು ನನ್ನನ್ನು ಶಿಕ್ಷಿಸಿದ್ದಿ, ಪಳಗದ ಹೋರಿಯಂತೆ ಶಿಕ್ಷೆಯನ್ನು ಅನುಭವಿಸಿದೆನು. ನನ್ನನ್ನು ತಿರುಗಿಸು, ನೀನು ತಿರುಗಿಸಿದ ಹಾಗೆ ತಿರುಗುವೆನು; ನೀನು ನನ್ನ ದೇವರಾದ ಯೆಹೋವನಲ್ಲವೆ.
ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು, ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಗೋಳಾಡುತ್ತಿರುವರು.
ಇಸ್ರಾಯೇಲ್ ತನ್ನ ಸೃಷ್ಟಿಕರ್ತನನ್ನು ಮರೆತು ಅರಮನೆಗಳನ್ನು ಕಟ್ಟಿಕೊಂಡಿದೆ; ಯೆಹೂದವು ಕೋಟೆಕೊತ್ತಲಗಳ ಪಟ್ಟಣಗಳನ್ನು ಮಾಡಿಕೊಂಡಿದೆ; ಆಹಾ, ನಾನು ಆ ಪಟ್ಟಣಗಳ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಅವರ ಸೌಧಗಳನ್ನು ನುಂಗಿಬಿಡುವುದು.”
ನ್ಯಾಯಕ್ಕೆ ಅಸಹ್ಯಪಟ್ಟು, ನೆಟ್ಟಗಿರುವುದನ್ನು ಸೊಟ್ಟಗೆ ಮಾಡುವ ಯಾಕೋಬ ವಂಶದ ಮುಖಂಡರೇ, ಇಸ್ರಾಯೇಲ್ ಮನೆತನದ ಅಧಿಪತಿಗಳೇ,
ದೇವರ ಚಿತ್ತಾನುಸಾರವಾಗಿರುವ ದುಃಖವು ರಕ್ಷಣೆಗೆ ಕಾರಣವಾಗುವ ಮಾನಸಾಂತರವನ್ನುಂಟು ಮಾಡುತ್ತದೆ, ಆ ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಆಸ್ಪದವಿಲ್ಲ; ಆದರೆ ಲೋಕದವರಿಗಿರುವಂಥ ದುಃಖವು ಮರಣವನ್ನುಂಟುಮಾಡುತ್ತದೆ.