ಅವರಿಗೆ, “ನಾನು ಈಗ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳಿರಿ, ಮತ್ತು ನಿಮ್ಮ ಸಂತತಿಯವರಿಗೆ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸಿರಿಸಬೇಕೆಂದು ಆಜ್ಞಾಪಿಸಿರಿ.
TSK
TSK · ಯೆರೆಮಿಯ 31:21
مراجع Treasury of Scripture Knowledge في ಕನ್ನಡ IRV.
ಇಸ್ರಾಯೇಲರ ಎಲ್ಲಾ ಕುಲಗಳಲ್ಲಿ ಇಸ್ರಾಯೇಲ್ ದೇವರಾದ ಯೆಹೋವನ ದರ್ಶನವನ್ನು ಬಯಸುತ್ತಿದ್ದವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಯಜ್ಞವನ್ನರ್ಪಿಸುವುದಕ್ಕಾಗಿ ಆ ಲೇವಿಯರನ್ನು ಹಿಂಬಾಲಿಸಿ ಯೆರೂಸಲೇಮಿಗೆ ಬಂದರು.
ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ; ಸುಲಿಗೆಯಿಂದ ಗಳಿಸಿ ಅಹಂಕಾರಪಡಬೇಡಿರಿ; ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ.
ಆಗ ನಾನು ನೋಡಿ ಆಲೋಚಿಸಿದೆನು, ದೃಷ್ಟಿಸಿ ಶಿಕ್ಷಿತನಾದೆನು.
ತೊಲಗಿರಿ, ತೊಲಗಿರಿ, ಬಾಬೆಲಿನಿಂದ ಹೊರಡಿರಿ, ಅಶುದ್ಧವಾದ ಯಾವುದನ್ನೂ ಮುಟ್ಟದಿರಿ, ಅದರಿಂದ ದೂರ ಹೋಗಿ, ಯೆಹೋವನ ಆರಾಧನೆಯ ಉಪಕರಣಗಳನ್ನು ಹೊರುವವರೇ, ಶುದ್ಧರಾಗಿರಿ!
ಊರ ಬಾಗಿಲುಗಳಲ್ಲಿ ಹಾದು ಬನ್ನಿರಿ, ಹಾದು ಬನ್ನಿರಿ, ಜನರಿಗೆ ದಾರಿಯನ್ನು ಸರಿಮಾಡಿರಿ, ರಾಜಮಾರ್ಗವನ್ನು ಎತ್ತರಿಸಿರಿ, ಸರಿಪಡಿಸಿರಿ. ಕಲ್ಲುಗಳನ್ನು ತೆಗೆದುಹಾಕಿರಿ, ಜನಾಂಗಗಳಲ್ಲಿ ಧ್ವಜವನ್ನೆತ್ತಿರಿ!
ಭ್ರಷ್ಟರಾದ ಮಕ್ಕಳೇ, ತಿರುಗಿಕೊಳ್ಳಿರಿ, ನಾನು ನಿಮಗೆ ಪತಿ. ಒಂದು ಪಟ್ಟಣಕ್ಕೆ ಒಬ್ಬನಂತೆಯೂ, ಗೋತ್ರಕ್ಕೆ ಇಬ್ಬರಂತೆಯೂ ಆರಿಸಿ ಚೀಯೋನಿಗೆ ಕರೆತರುವೆನು.
ಇಸ್ರಾಯೇಲೆಂಬ ಯುವತಿಯೇ, ನಾನು ನಿನ್ನ ಹಾಳುಪ್ರದೇಶಗಳನ್ನು ಪುನಃ ಕಟ್ಟುವೆನು; ಅವು ಕಟ್ಟಡಗಳಾಗುವವು. ನೀನು ಮತ್ತೆ ದಮ್ಮಡಿಗಳಿಂದ ವೈಭವಗೊಂಡು ವಿನೋದಪಡುವವರ ನಾಟ್ಯಗಳಲ್ಲಿ ಸೇರಿಕೊಳ್ಳುವಿ.
ನೀವು ಬಾಬೆಲಿನೊಳಗಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ; ಅದಕ್ಕೆ ಉಂಟಾಗುವ ದಂಡನೆಗೆ ಒಳಗಾಗಬೇಡಿರಿ. ಯೆಹೋವನು ಮುಯ್ಯಿತೀರಿಸುವ ಕಾಲ ಬಂದಿದೆ; ಆತನು ಬಾಬಿಲೋನಿಗೆ ಪ್ರತಿಕಾರ ಮಾಡುವನು.
ಆ ಪುರುಷನು ನನಗೆ, “ನರಪುತ್ರನೇ, ನೀನು ಕಣ್ಣಿಟ್ಟು ನೋಡು, ಕಿವಿಗೊಟ್ಟು ಕೇಳು; ನಾನು ನಿನಗೆ ತೋರಿಸುವುದನ್ನೆಲ್ಲಾ ಮನಸ್ಸಿಟ್ಟು ತಿಳಿದುಕೋ. ನಾನು ನಿನಗೆ ತೋರಿಸುವುದನ್ನು ನೀನು ನೋಡಬೇಕೆಂದೇ ಇಲ್ಲಿಗೆ ಬರಮಾಡಿದ್ದೇನೆ. ನೀನು ನೋಡುವುದನ್ನೆಲ್ಲಾ ಇಸ್ರಾಯೇಲ್ ವಂಶದವರಿಗೆ ಪ್ರಕಟಿಸು” ಎಂದು ಹೇಳಿದನು.
¶ ಎಲೈ, ಎಲೈ ಉತ್ತರದೇಶದಿಂದ ಓಡಿ ಬನ್ನಿರಿ; ಇದು ಯೆಹೋವನ ನುಡಿ; ಚತುರ್ದಿಕ್ಕಿನ ಗಾಳಿಗಳಂತೆ ನಿಮ್ಮನ್ನು ಚದುರಿಸಿದ್ದೆನಲ್ಲಾ; ಇದು ಯೆಹೋವನ ನುಡಿ.