TSK

TSK · ಯೆರೆಮಿಯ 32:3

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಐಗುಪ್ತರ ಅರಸನು ಅವರಿಗೆ, “ಮೋಶೆ ಮತ್ತು ಆರೋನರೇ, ಈ ಜನರು ತಮ್ಮ ಕೆಲಸವನ್ನು ಮಾಡದಂತೆ ಯಾಕೆ ಅಡ್ಡಿ ಮಾಡುತ್ತೀರಿ? ನಿಮ್ಮ ಬಿಟ್ಟೀ ಕೆಲಸಕ್ಕೆ ಹೋಗಿರಿ” ಎಂದು ಹೇಳಿದನು.

ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ದುಃಖಪಡಲ್ಲಿಲ್ಲ, ಸಂಹರಿಸಿದರೂ ನೀತಿ ಶಿಕ್ಷೆಗೆ ಒಳಪಡಲಿಲ್ಲ. ತಮ್ಮ ಮುಖವನ್ನು ಕಲ್ಲಿಗಿಂತ ಕಠಿನಮಾಡಿಕೊಂಡು ಪಶ್ಚಾತ್ತಾಪಪಡದೆ ಹೋಗಿದ್ದಾರೆ.

ಸಮಸ್ತಜನರಿಗೆ ಹೇಳಬೇಕೆಂದು ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಯೆರೆಮೀಯನು ಹೇಳಿ ಮುಗಿಸಿದ ಮೇಲೆ ಯಾಜಕರೂ, ಪ್ರವಾದಿಗಳೂ ಎಲ್ಲಾ ಜನರೂ ಅವನನ್ನು ಹಿಡಿದು, “ನೀನು ಸಾಯಲೇಬೇಕು!

ಯಾವ ಜನಾಂಗ, ಯಾವ ರಾಜ್ಯ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಅಡಿಯಾಳಾಗಲಿಕ್ಕೂ, ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಡಲಿಕ್ಕೂ ಒಪ್ಪದೆ ಇರುವನೋ ಆ ಜನಾಂಗವನ್ನು ನಾನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ದಂಡಿಸುತ್ತಾ ಬಂದು, ಕಡೆಯಲ್ಲಿ ಅವನ ಕೈಯಿಂದಲೇ ನಿರ್ಮೂಲ ಮಾಡಿಸುವೆನು’ ಇದು ಯೆಹೋವನ ನುಡಿ.

ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ನೀನು ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಹೋಗಿ ಅವನಿಗೆ ಹೀಗೆ ಹೇಳು, ‘ಯೆಹೋವನ ಮಾತನ್ನು ಆಲಿಸು, ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈವಶಮಾಡುವೆನು, ಅವನು ಅದನ್ನು ಬೆಂಕಿಯಿಂದ ಸುಟ್ಟುಬಿಡುವನು.

ಹೀಗಿರಲು ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ಈ ವಾಕ್ಯವನ್ನು ದಯಪಾಲಿಸಿದನು.

ಆ ಮೇಲೆ ಆ ಪ್ರಧಾನರು ಅರಸನಿಗೆ, “ಒಡೆಯಾ, ಇವನಿಗೆ ಮರಣ ದಂಡನೆಯಾಗಬೇಕು. ಇವನು ಪಟ್ಟಣದಲ್ಲಿ ಉಳಿದಿರುವ ಯೋಧರಿಗೂ ಸಕಲ ಜನರಿಗೂ ಇಂಥಾ ಮಾತುಗಳನ್ನು ಸಾರುತ್ತಾ ಅವರನ್ನು ಜೋಲುಗೈಯವರನ್ನಾಗಿ ಮಾಡುತ್ತಾನೆ; ಈ ಜನರ ಕ್ಷೇಮವನ್ನಲ್ಲ, ಹಾನಿಯನ್ನೇ ಹಾರೈಸುತ್ತಾನೆ” ಎಂದು ಹೇಳಿದರು.

ಆದರೆ ಬೇತೇಲಿನಲ್ಲಿ ಇನ್ನು ಪ್ರವಾದನೆ ಮಾಡಬೇಡ. ಇದು ರಾಜಕೀಯ ಪವಿತ್ರಾಲಯ, ಇದು ಅರಮನೆ” ಎಂದು ಹೇಳಿದನು.

ಅವರು ಜನರನ್ನೂ, ಹಿರಿಯರನ್ನೂ, ಶಾಸ್ತ್ರಿಗಳನ್ನೂ ಪ್ರಚೋದಿಸಿದರು ಮತ್ತು ಅವನನ್ನು ಹಿಡಿದು, ಎಳೆದುಕೊಂಡು, ಹಿರೀಸಭೆಗೆ ತೆಗೆದುಕೊಂಡು ಹೋಗಿ ಅವನಿಗೆ ವಿರುದ್ಧವಾಗಿ ಸುಳ್ಳುಸಾಕ್ಷಿಗಳನ್ನು ಕರತಂದು ನಿಲ್ಲಿಸಿದರು.