ಬರಗಾಲದಲ್ಲಿ ಮರಣದಿಂದಲೂ, ಯುದ್ಧದಲ್ಲಿ ಕತ್ತಿಯಿಂದಲೂ ನಿನ್ನನ್ನು ಬಿಡಿಸುವನು.
TSK
TSK · ಯೆರೆಮಿಯ 39:18
مراجع Treasury of Scripture Knowledge في ಕನ್ನಡ IRV.
ಯೆಹೋವನಾದರೋ ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕಟಾಕ್ಷಿಸುತ್ತಾನೆ; ತನ್ನ ಕೃಪೆಯನ್ನು ನಿರೀಕ್ಷಿಸುವವರನ್ನು ಲಕ್ಷಿಸುತ್ತಾನೆ.
ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.
ಸೇನಾಧೀಶ್ವರನಾದ ಯೆಹೋವನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
ಪ್ರಭುಗಳಲ್ಲಾಗಲಿ, ಮನುಷ್ಯರಲ್ಲಾಗಲಿ ಭರವಸವಿಡಬೇಡಿರಿ, ಅವರು ಸಹಾಯ ಮಾಡ ಶಕ್ತರಲ್ಲ,
ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ.
ಪಟ್ಟಣದಲ್ಲಿ ನಿಲ್ಲುವವನು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸಾಯುವನು. ನಿಮ್ಮನ್ನು ಮುತ್ತುವ ಕಸ್ದೀಯರನ್ನು ಮೊರೆಹೋಗಲು ಪಟ್ಟಣವನ್ನು ಬಿಡುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಬಾಚಿಕೊಂಡು ಹೋಗುವನು.
ಯೆಹೋವನ ಈ ವಾಕ್ಯವನ್ನು ಕೇಳು, ಇಗೋ, ನಾನು ಕಟ್ಟಿದ್ದನ್ನು ನಾನೇ ಕೆಡವುವೆನು, ನಾನು ನೆಟ್ಟದ್ದನ್ನು ನಾನೇ ಕಿತ್ತುಹಾಕುವೆನು; ಹೌದು, ಭೂಮಂಡಲದಲ್ಲೆಲ್ಲಾ ಹಾಗೆ ಮಾಡುವೆನು.
¶ ಧರ್ಮಶಾಸ್ತ್ರವಿಲ್ಲದೆ ಪಾಪಮಾಡಿದವರು ಧರ್ಮಶಾಸ್ತ್ರವಿಲ್ಲದವರಾಗಿ ನಾಶಹೊಂದುವರು; ಮತ್ತು ಧರ್ಮಶಾಸ್ತ್ರಕ್ಕನುಸಾರವಾಗಿದ್ದು ಪಾಪಮಾಡಿದವರು ಧರ್ಮಶಾಸ್ತ್ರಕ್ಕನುಸಾರವಾಗಿ ತೀರ್ಪನ್ನು ಹೊಂದುವರು.
ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ.