ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ, ‘ನಾನು ಹಟವನ್ನು ಹಿಡಿದು ಅವಿಧೇಯನಾದರೂ ನನಗೆ ಕ್ಷೇಮವಾಗಿಯೇ ಇರುವುದು’ ಅಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ಮತ್ತು ನಿರ್ದೋಷಿಗಳಿಗೂ ನಾಶನವನ್ನು ಉಂಟುಮಾಡುವವನಾಗಿರುತ್ತಾನೆ.
TSK
TSK · ಯೆರೆಮಿಯ 42:21
مراجع Treasury of Scripture Knowledge في ಕನ್ನಡ IRV.
ನಾನು ಜೀವ ಮತ್ತು ಮರಣಗಳನ್ನೂ ಹಾಗು ಆಶೀರ್ವಾದ ಮತ್ತು ಶಾಪಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಮತ್ತು ಆಕಾಶಗಳು ಸಾಕ್ಷಿಗಳಾಗಿರಲಿ. ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಕೊಳ್ಳುವಂತೆ ಜೀವವನ್ನೇ ಆರಿಸಿಕೊಳ್ಳಿರಿ.
ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಸ್ವಂತ ಆಲೋಚನೆಗಳನ್ನು ಅನುಸರಿಸಿ ತಮ್ಮ ದುಷ್ಟಹೃದಯದ ಹಟದಂತೆ ನಡೆದು ಹಿಂದಿರುಗಿಯೇ ಹೋದರು, ಮುಂದುವರಿಯಲಿಲ್ಲ.
ಅವರು ಕೇಳಿದರೂ, ಕೇಳದೆ ಹೋದರೂ ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿ ದ್ರೋಹಿಗಳೇ.”
ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು, ನಿನ್ನ ಮುಂದೆ ಕುಳಿತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೋ ತಾವು ದೋಚಿಕೊಂಡದರ ಮೇಲೆ ಇರುತ್ತದೆ.
¶ “ನಿಮ್ಮ ಪೂರ್ವಿಕರಾದರೋ ಗಮನಿಸದೆ ಹೆಗಲುಕೊಡದೇ ಹೋದರು, ಕೇಳಬಾರದೆಂದು ಕಿವಿಮಂದಮಾಡಿಕೊಂಡರು.
ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳುವುದಕ್ಕೂ, ಸಭೆಯಲ್ಲಿಯೂ, ಮನೆಮನೆಯಲ್ಲಿಯೂ, ಉಪದೇಶಿಸುವದಕ್ಕೂ ಹಿಂತೆಗೆಯದೆ