ಮುಂದೆ ನೀವು ಅಮೋನಿಯರ ಹತ್ತಿರಕ್ಕೆ ಬರುವಾಗ ಅವರಿಗೆ ತೊಂದರೆಪಡಿಸಲೂ ಬೇಡಿರಿ, ಅವರಿಗೆ ವೈರಿಗಳಾಗಿ ನಡೆದು ಯುದ್ಧಮಾಡಲೂಬೇಡಿರಿ. ನಾನು ಆ ದೇಶವನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸ್ವತ್ತಾಗಿ ಕೊಟ್ಟಿರುವುದರಿಂದ ನಿಮಗೆ ಅದರಲ್ಲಿ ಯಾವ ಭಾಗವನ್ನಾದರೂ ಕೊಡುವುದಿಲ್ಲ.”
TSK
TSK · ಯೆರೆಮಿಯ 49:1
مراجع Treasury of Scripture Knowledge في ಕನ್ನಡ IRV.
ಆದುದರಿಂದ ಆತನು ಇಸ್ರಾಯೇಲರ ಮೇಲೆ ಕೋಪಗೊಂಡು ಅವರನ್ನು ಫಿಲಿಷ್ಟಿಯರ ಮತ್ತು ಅಮ್ಮೋನಿಯರ ಕೈಗೆ ಒಪ್ಪಿಸಿಬಿಟ್ಟನು.
¶ ಅಮ್ಮೋನಿಯನಾದ ನಾಹಾಷನು ಹೊರಟು ಬಂದು ಯಾಬೇಷ್ ಗಿಲ್ಯಾದಿಗೆ ಮುತ್ತಿಗೆ ಹಾಕಲು, ಯಾಬೇಷಿನವರು ಅವನನ್ನು, “ನೀನು ನಮ್ಮ ಸಂಗಡ ಒಡಂಬಡಿಕೆ ಮಾಡಿಕೋ; ನಾವು ನಿನ್ನನ್ನು ಸೇವಿಸುವೆವು” ಎಂದು ಬೇಡಿಕೊಂಡರು.
ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದ ಯೆಹೋವನ ವಾಕ್ಯದ ಪ್ರಕಾರ ಯೆಹೂದ ರಾಜ್ಯವನ್ನು ಹಾಳುಮಾಡುವುದಕ್ಕೋಸ್ಕರ ಕಸ್ದೀಯರ, ಅರಾಮ್ಯರ, ಮೋವಾಬ್ಯರ, ಅಮ್ಮೋನಿಯರ ಸುಲಿಗೆಯ ಗುಂಪುಗಳನ್ನು ಅಲ್ಲಿಗೆ ಕಳುಹಿಸಿದನು.
ಅಮ್ಮೋನಿಯರೂ, ಮೋವಾಬ್ಯರೂ ಸೇಯೀರ್ ಪರ್ವತದವರ ಮೇಲೆ ಬಿದ್ದು ಅವರನ್ನು ಸಂಪೂರ್ಣವಾಗಿ ಸಂಹರಿಸಿಬಿಟ್ಟರು. ಅಮ್ಮೋನಿಯರನ್ನು ಮುಗಿಸಿಬಿಟ್ಟ ಮೇಲೆ ತಾವೇ ಒಬ್ಬರನ್ನೊಬ್ಬರು ಕೊಲ್ಲುವುದಕ್ಕೆ ಪ್ರಾರಂಭಿಸಿದರು.
ಸನ್ಬಲ್ಲಟನೂ, ಟೋಬೀಯನೂ, ಅರಬಿಯರೂ, ಅಮ್ಮೋನಿಯರೂ, ಅಷ್ಡೋದಿನವರೂ ಯೆರೂಸಲೇಮಿನ ಗೋಡೆಯ ಜೀರ್ಣೋದ್ಧಾರ ಕಾರ್ಯವು ಮುಂದುವರಿದು, ಅದರ ಸಂದುಗಳು ತಿರುಗಿ ಸರಿಯಾಗುತ್ತಾ ಬರುವುದನ್ನು ಕೇಳಿ ಬಹುಕೋಪಗೊಂಡರು.
ಶತ್ರುಗಳು ನಿಶ್ಶೇಷವಾದರು; ನೀನು ಕೆಡವಿದ ಅವರ ಪಟ್ಟಣಗಳು ಸಂಪೂರ್ಣವಾಗಿ ಹಾಳಾದವು. ಅವರ ಸ್ಮರಣೆಯೇ ಇಲ್ಲವಾಯಿತು.
ನಾನು ಉತ್ತರ ದಿಕ್ಕಿನ ಜನಾಂಗಗಳನ್ನೆಲ್ಲಾ ಕರೆಯಿಸಿ, ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡುವೆನು. ಇವರೆಲ್ಲರನ್ನು ಈ ದೇಶದ ಮೇಲೂ, ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ, ಅವುಗಳನ್ನು ತುಂಬಾ ಹಾಳುಗೈದು, ಪರಿಹಾಸ್ಯಕ್ಕೂ, ನಿತ್ಯನಾಶನಕ್ಕೂ ಈಡುಮಾಡುವೆನು.
ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಯೆರೂಸಲೇಮಿನಲ್ಲಿ ಬಂದಿರುವ ರಾಯಭಾರಿಗಳ ಮೂಲಕ ಅವುಗಳನ್ನು ಎದೋಮಿನ ರಾಜ, ಮೋವಾಬಿನ ರಾಜ, ಅಮ್ಮೋನ್ಯರ ರಾಜ, ತೂರಿನ ರಾಜ, ಚೀದೋನಿನ ರಾಜ, ಇವರಿಗೆ ಕಳುಹಿಸು.
ಎದೋಮನ್ನು ಕುರಿತು ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ತೇಮಾನ್ ಸೀಮೆಗೆ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಅಳಿಯಿತೋ? ಅವರ ಜ್ಞಾನವು ಮಾಯವಾಯಿತೋ?
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆದ ಕೇದಾರನ್ನೂ ಹಾಚೋರಿನ ರಾಷ್ಟ್ರಗಳನ್ನೂ ಕುರಿತದ್ದು. “ಏಳಿರಿ, ಕೇದಾರಿಗೆ ಹೋಗಿ ಪೂರ್ವ ದಿಕ್ಕಿನ ದೇಶದವರನ್ನು ಹಾಳುಮಾಡಿರಿ” ಎಂದು ಯೆಹೋವನು ಶತ್ರುಗಳಿಗೆ ಅಪ್ಪಣೆಮಾಡಿದ್ದಾನೆ.
¶ ನರಪುತ್ರನೇ, ನೀನು ದೈವಸಂಕಲ್ಪವನ್ನು ಪ್ರಕಟಿಸುತ್ತಾ ಹೀಗೆ ನುಡಿ, “ಅಮ್ಮೋನ್ಯರ ವಿಷಯದಲ್ಲಿಯೂ ಮತ್ತು ಅವರು ಮಾಡುವ ದೂಷಣೆಯ ವಿಷಯದಲ್ಲಿಯೂ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಖಡ್ಗ, ಸಂಹರಿಸುವುದಕ್ಕೆ ಹಿರಿದಿದೆ, ಮಿಂಚುವಂತೆ ಚೆನ್ನಾಗಿ ಮಸೆದಿದೆ.
“ನರಪುತ್ರನೇ, ನೀನು ಅಮ್ಮೋನಿಗೆ ವಿರುದ್ಧವಾಗಿ, ಅದರ ವಿಷಯದಲ್ಲಿ ದೈವಸಂಕಲ್ಪವನ್ನು ಪ್ರವಾದಿಸುತ್ತಾ ಅದಕ್ಕೆ ಹೀಗೆ ನುಡಿ,
¶ ಮೋವಾಬ್ಯರೂ, ಅಮ್ಮೋನ್ಯರೂ ಅಹಂಕಾರದಿಂದ ನನ್ನ ಜನರ ಮೇರೆಯನ್ನು ಮೀರಿ, ಅವರನ್ನು ನಿಂದಿಸಿ, ಅವರ ಮೇಲೆ ಹೊರಿಸಿರುವ ದೂರುದೂಷಣೆಗಳು ನನ್ನ ಕಿವಿಗೆ ಬಿದ್ದಿವೆ.