¶ ಬೆಲಗನು ಸತ್ತ ನಂತರ ಬೊಚ್ರದವನಾದ ಜೆರಹನ ಮಗನಾಗಿದ್ದ ಯೋಬಾಬನು ಅಧಿಪತ್ಯಕ್ಕೆ ಬಂದನು.
TSK
TSK · ಯೆರೆಮಿಯ 49:13
مراجع Treasury of Scripture Knowledge في ಕನ್ನಡ IRV.
ಯೆಹೋವನ ಖಡ್ಗವು ರಕ್ತದಿಂದ ತುಂಬಿದೆ. ಅದು ಕುರಿ ಮತ್ತು ಹೋತಗಳ ರಕ್ತದಿಂದಲೂ, ಟಗರುಗಳ ಮೂತ್ರಪಿಂಡದ ಕೊಬ್ಬಿನಿಂದಲೂ ಲೇಪಿತವಾಗಿದೆ. ಏಕೆಂದರೆ ಯೆಹೋವನು ಬೊಚ್ರದಲ್ಲಿ ಬಲಿಯನ್ನೂ, ಎದೋಮ್ ಸೀಮೆಯಲ್ಲಿ ದೊಡ್ಡ ಹತ್ಯೆಯನ್ನೂ ಮಾಡಬೇಕೆಂದಿದ್ದಾನೆ.
ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ಸತ್ಯದ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು. ಎಲ್ಲರೂ ನನಗೆ ಅಡ್ಡಬೀಳುವರು, ಎಲ್ಲರೂ ನನ್ನನ್ನು ದೇವರೆಂದು ಪ್ರತಿಜ್ಞೆಮಾಡುವರು.
ಐಗುಪ್ತದಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವನ ಮಾತನ್ನು ಕೇಳಿರಿ; ಯೆಹೋವನು ಇಂತೆನ್ನುತ್ತಾನೆ, ‘ಆಹಾ, ಕರ್ತನಾದ ಯೆಹೋವನ ಜೀವದಾಣೆ ಎಂದು ನನ್ನ ಹೆಸರನ್ನು ಬಾಯಿಂದ ಎತ್ತಲಿಕ್ಕೆ ಐಗುಪ್ತದಲ್ಲಿ ಯಾವ ಯೆಹೂದ್ಯನೂ ಇನ್ನು ಇರುವುದಿಲ್ಲ ಎಂಬುದಾಗಿ ನನ್ನ ಮಹಾನಾಮದ ಮೇಲೆ ಆಣೆಯಿಟ್ಟಿದ್ದೇನೆ.
ಎದೋಮು ಪರಿಹಾಸ್ಯಕ್ಕೆ ಗುರಿಯಾಗುವುದು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳಿಗೆ ಬೆರಗಾಗಿ ಸಿಳ್ಳುಹಾಕುವರು.
ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಎದೋಮಿನ ಮೇಲೆ ಕೈಯೆತ್ತಿ, ಅದರೊಳಗಿಂದ ಜನರನ್ನೂ ಮತ್ತು ಪಶುಗಳನ್ನೂ ನಿರ್ಮೂಲಮಾಡಿ, ತೇಮಾನಿನಿಂದ ದೆದಾನಿನವರೆಗೂ ಅದನ್ನು ಹಾಳುಮಾಡಿ, ಪ್ರಜೆಗಳನ್ನು ಖಡ್ಗಕ್ಕೆ ಸಿಕ್ಕಿಸುವೆನು.
ಐಗುಪ್ತ್ಯವು ಹಾಳಾಗುವುದು, ಎದೋಮ್, ಹಾಳಾದ ಬೆಂಗಾಡಾಗುವುದು, ಏಕೆಂದರೆ ಅವರು ಯೆಹೂದ್ಯರನ್ನು ಹಿಂಸಿಸಿ, ಅವರ ದೇಶದಲ್ಲಿ ನಿರ್ದೋಷಿಗಳ ರಕ್ತವನ್ನು ಸುರಿಸಿದ್ದಾರೆ.
ಸೇನಾಧೀಶ್ವರ ದೇವರಾದ ಯೆಹೋವನ ನುಡಿಯನ್ನು ಕೇಳಿರಿ ಕರ್ತನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು ಹೀಗೆಂದಿದ್ದಾನೆ, “ನಾನು ಯಾಕೋಬಿನ ಅಟ್ಟಹಾಸಕ್ಕೆ ಅಸಹ್ಯಪಟ್ಟು; ಅದರ ಕೋಟೆಗಳನ್ನು ಹಗೆಮಾಡುತ್ತೇನೆ. ಆದುದರಿಂದ ನಾನು ರಾಜಧಾನಿಯನ್ನೂ, ಅದರ ಸಕಲ ಸಮೃದ್ಧಿಯನ್ನೂ ಆಪತ್ತಿಗೆ ಗುರಿಮಾಡುವೆನು”
“ಆದರೆ ನಾನು ಯಾಕೋಬನನ್ನು ಪ್ರೀತಿಸಿ, ಏಸಾವನನ್ನು ದ್ವೇಷಿಸಿ, ಅವನ ಬೆಟ್ಟಗಳನ್ನು ಹಾಳುಮಾಡಿ ಅವನ ಪಿತ್ರಾರ್ಜಿತ ಆಸ್ತಿಯನ್ನು ಕಾಡುನರಿಗಳ ಪಾಲುಮಾಡಿದ್ದೇನಷ್ಟೆ” ಇದು ಯೆಹೋವನ ನುಡಿ.