ಆ ಶತ್ರುಗಳು ತಮ್ಮ ಕುರಿದನ ಗುಡಾರಗಳ ಸಹಿತವಾಗಿ ಮಿಡತೆಗಳಂತೆ ಗುಂಪುಗುಂಪಾಗಿ ಬರುತ್ತಿದ್ದರು. ಅವರೂ ಅವರ ಒಂಟೆಗಳೂ ಅಸಂಖ್ಯವಾಗಿದ್ದವು. ಆ ಗುಂಪೆಲ್ಲಾ ಬಂದು ದೇಶವನ್ನು ಹಾಳುಮಾಡುತ್ತಿತ್ತು.
TSK
TSK · ಯೆರೆಮಿಯ 49:29
مراجع Treasury of Scripture Knowledge في ಕನ್ನಡ IRV.
ಆಗ ಜೆಬಹನೂ ಮತ್ತು ಚಲ್ಮುನ್ನನೂ ಗಿದ್ಯೋನನಿಗೆ, “ನೀನೇ ಎದ್ದು ಬಂದು ನಮ್ಮನ್ನು ಕೊಂದುಹಾಕು; ಪ್ರಾಯಕ್ಕೆ ತಕ್ಕಂತೆ ಪುರುಷನಿಗೆ ಬಲವಿರುತ್ತದಲ್ಲಾ” ಅನ್ನಲು ಅವನೆದ್ದು ಜೆಬಹ, ಚಲ್ಮುನ್ನರನ್ನು ಕೊಂದುಹಾಕಿ, ಅವರ ಒಂಟೆಗಳ ಕೊರಳಿನಲ್ಲಿದ್ದ ಅರ್ಧಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನು.
ಅವರು ದೇವರ ಮೇಲೆ ಭರವಸೆ ಇಟ್ಟಿದ್ದರಿಂದ ಮೊರೆಯಿಟ್ಟ ಅವರ ಪ್ರಾರ್ಥನೆಗೆ ಕಿವಿಗೊಟ್ಟು ಯುದ್ಧದಲ್ಲಿ ಜಯವನ್ನು ಅನುಗ್ರಹಿಸಿದನು. ಹಗ್ರೀಯರೂ ಇವರ ಜೊತೆಯಲ್ಲಿದ್ದವರೂ ಅವರ ಕೈಯಲ್ಲಿ ಕೊಡಲ್ಪಟ್ಟರು.
ಅನೇಕರು ನನ್ನ ಪ್ರಾಣ ತೆಗೆಯಬೇಕೆಂದು ಒಳ ಸಂಚುಮಾಡುತ್ತಿದ್ದಾರೆ; ಅವರು ಪಿಸುಗುಟ್ಟುವ ಮಾತುಗಳು ನನ್ನ ಕಿವಿಗೆ ಬಿದ್ದಿವೆ; ಎಲ್ಲಾ ಕಡೆಯಲ್ಲಿಯೂ ನನಗೆ ಭೀತಿಯುಂಟಾಗಿದೆ.
ಅದು ಎಂದಿಗೂ ನಿವಾಸ ಸ್ಥಳವಾಗದು. ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಯಾವ ಅರಬಿಯನೂ ಗುಡಾರ ಹಾಕನು ಅಥವಾ ಕುರುಬರು ಮಂದೆಯನ್ನು ತಂಗಿಸರು.
ನಾಶದ ಮೇಲೆ ನಾಶವು, ಒಂದರ ಮೇಲೊಂದು ನಾಶದ ಸುದ್ದಿಬರುತ್ತಿದೆ; ದೇಶವೆಲ್ಲಾ ಹಾಳಾಯಿತು; ತಟ್ಟನೆ ನಮ್ಮ ಗುಡಾರಗಳು, ಕ್ಷಣಮಾತ್ರದಲ್ಲಿ ನಮ್ಮ ಡೇರೆಗಳು ಭಗ್ನವಾದವು.
ನನ್ನ ಗುಡಾರವು ಹಾಳಾಗಿದೆ, ಹಗ್ಗಗಳು ಹರಿದುಹೋಗಿವೆ, ಮಕ್ಕಳು ನನ್ನೊಳಗಿಂದ ತೊಲಗಿ ಇಲ್ಲವಾಗಿದ್ದಾರೆ. ನನ್ನ ಗುಡಾರವನ್ನು ಹಾಕುವುದಕ್ಕೂ, ನನ್ನ ಪರದೆಗಳನ್ನು ಬಿಗಿಯುವುದಕ್ಕೂ ಇನ್ನು ಯಾರೂ ಇರುವುದಿಲ್ಲ.
ಆಹಾ, ನನ್ನ ಕಣ್ಣಿಗೆ ಬಿದ್ದದ್ದೇನು? ಅವರು ಧೈರ್ಯಗೆಟ್ಟು ಬೆನ್ನುಕೊಟ್ಟಿದ್ದಾರೆ. ಅವರ ಶೂರರು ಪೆಟ್ಟುತಿಂದು ಹಿಂದಿರುಗದೆ ಓಡಿಹೋಗುತ್ತಾರೆ; ಸುತ್ತಮುತ್ತಲು ದಿಗಿಲು ಎಂದು ಯೆಹೋವನು ಅನ್ನುತ್ತಾನೆ.
¶ ದಮಸ್ಕವು ಕುಂದಿದೆ, ಓಡಿಹೋಗಲು ಹಿಂದಿರುಗಿದೆ; ಅದಕ್ಕೆ ನಡುಕ ಹಿಡಿದಿದೆ, ಪ್ರಸವವೇದನೆಯಂತಿರುವ ಯಾತನೆ ಮತ್ತು ವ್ಯಥೆಗಳಿಗೆ ಒಳಗಾಗಿದೆ.
ಎಲ್ಲಾದರಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಸಂಕಟಪಡುವವರಲ್ಲ. ನಾವು ಗೊಂದಲಕ್ಕೀಡಾಗಿದ್ದರೂ ಹತಾಶರಾಗುವವರಲ್ಲ.