TSK

TSK · ಯೆರೆಮಿಯ 49:39

مراجع Treasury of Scripture Knowledge في ಕನ್ನಡ IRV.

العودة إلى المقطع

ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಸಕಲ ದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.

ಆದರೂ ಕಾಲಾಂತರದಲ್ಲಿ ಅಮ್ಮೋನ್ಯರ ದುರವಸ್ಥೆಯನ್ನು ತಪ್ಪಿಸುವೆನು. ಇದು ಯೆಹೋವನ ನುಡಿ.”

ಐಗುಪ್ತದ ದುರವಸ್ಥೆಯನ್ನು ತಪ್ಪಿಸಿ, ಅವರ ಜನ್ಮ ಭೂಮಿಯಾದ ಪತ್ರೋಸ್ ದೇಶಕ್ಕೆ ಪುನಃ ಬರಮಾಡುವೆನು; ಅಲ್ಲೇ ಅವರು ಕನಿಷ್ಠ ರಾಜ್ಯದವರಾಗಿರುವರು.

¶ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಅನುಕಂಪವುಳ್ಳವನಾಗಿ ಯಾಕೋಬ್ಯರ ದುರಾವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆ ತೋರಿಸುವೆನು.

ಉಳಿದು ಅಂತ್ಯಕಾಲದಲ್ಲಿ ನಿನ್ನ ಜನರಿಗಾಗುವ ಗತಿಯನ್ನು ನಿನಗೆ ತಿಳಿಸುವುದಕ್ಕೋಸ್ಕರ ಬಂದೆನು; ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವುಂಟು” ಎಂದು ಹೇಳಿದನು.

ನಾನು ನನ್ನ ಜನರಾದ ಇಸ್ರಾಯೇಲರ ದುರಾವಸ್ಥೆಯನ್ನು ತಪ್ಪಿಸುವೆನು. ಅವರು ಹಾಳು ಬಿದ್ದ ಪಟ್ಟಣಗಳನ್ನು ಪುನಃ ಕಟ್ಟಿ ಅವುಗಳಲ್ಲಿ ವಾಸಿಸುವರು ಮತ್ತು ದ್ರಾಕ್ಷಿಯ ತೋಟಗಳನ್ನು ಮಾಡಿಕೊಂಡು ಅವುಗಳ ದ್ರಾಕ್ಷಾರಸವನ್ನು ಕುಡಿಯುವರು, ತೋಟಗಳನ್ನು ಮಾಡಿಕೊಂಡು ಅವುಗಳ ಫಲಗಳನ್ನು ತಿನ್ನುವರು.