ಅಪ್ಪಣೆಕೊಡದೆ ಹೋದರೆ, ನಾನು ನಿನ್ನ ದೇಶದಲ್ಲೆಲ್ಲಾ ಕಪ್ಪೆಗಳಿಂದ ಉಪದ್ರವ ಕೊಡುವೆನು.
TSK
TSK · ಯೋಬನು 12:21
مراجع Treasury of Scripture Knowledge في ಕನ್ನಡ IRV.
ಇದಲ್ಲದೆ ಆತನು ಈಜೆಬೆಲಳನ್ನು ಕುರಿತು, ‘ನಾಯಿಗಳು ಇಜ್ರೇಲ್ ಪಟ್ಟಣದ ಗೋಡೆಯ ಬಳಿಯಲ್ಲಿ ಆಕೆಯ ಶವವನ್ನು ತಿನ್ನುವವು.
ಅನಂತರ ಅವನು ಅರಮನೆಯೊಳಕ್ಕೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಸೇವಕರಿಗೆ, “ಆ ಶಾಪಗ್ರಸ್ತ ಸ್ತ್ರೀಯ ಶವವನ್ನು ನೋಡಿ ಅದನ್ನು ಸಮಾಧಿಮಾಡಿರಿ, ಆಕೆಯು ರಾಜಪುತ್ರಿಯಾಗಿರುತ್ತಾಳಲ್ಲವೇ” ಎಂದು ಆಜ್ಞಾಪಿಸಿದನು.
ದೇವರು ತಾನು ಹಾಕಿದ್ದ ಕಟ್ಟನ್ನು ಸಡಲಿಸಿ ನನ್ನನ್ನು ಬಾಧಿಸುವುದಕ್ಕೆ ಅವರನ್ನು ಬಿಟ್ಟಿದ್ದಾನೆ. ಅವರು ನನ್ನ ಎದುರಿನಲ್ಲಿಯೇ ಕಡಿವಾಣವನ್ನು ಕಿತ್ತು ಹಾಕಿದ್ದಾರೆ.
ಅವರಲ್ಲಿ ಯಾರೂ ಬಳಲಿ ಮುಗ್ಗರಿಸುವುದಿಲ್ಲ. ಯಾರೂ ತೂಕಡಿಸಿ ನಿದ್ರಿಸುವುದಿಲ್ಲ. ಅವರ ನಡುಕಟ್ಟು ಬಿಚ್ಚಿಲ್ಲ. ಅವರ ಕೆರದ ಬಾರು ಹರಿಯುವುದಿಲ್ಲ.
ನಿನ್ನ ನಿಲುವಂಗಿಯನ್ನು ಅವನಿಗೆ ತೊಡಿಸಿ, ನಿನ್ನ ನಡುಕಟ್ಟನ್ನು ಅವನಿಗೆ ಕಟ್ಟಿ, ನಿನ್ನ ಅಧಿಕಾರವನ್ನು ಅವನ ಕೈಗೆ ಕೊಡುವೆನು; ಅವನು ಯೆರೂಸಲೇಮಿನ ನಿವಾಸಿಗಳಿಗೂ, ಯೆಹೂದದ ಮನೆತನದವರಿಗೂ ತಂದೆಯಾಗುವನು.
¶ ಆ ದಿನದಲ್ಲಿ ಯೆಹೋವನು ಆಕಾಶಮಂಡಲದ ದೂತಸೈನ್ಯವನ್ನೂ, ಭೂಮಂಡಲದ ಒಡೆಯರನ್ನೂ ದಂಡಿಸುವನು.
ಕಾಲ ಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ಕಡೆಗಣಿಸುತ್ತಾನೆ, ನೆಲೆಸುವಂತೆ ಮಾಡುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ.
ದೇವರು ಕನಸಿನಲ್ಲಿ ಅವರಿಗೆ, ನೀವು ಹೆರೋದನ ಬಳಿಗೆ ಹಿಂದಿರುಗಿ ಹೋಗಬಾರದೆಂದು ಆಜ್ಞೆ ನೀಡಿದ್ದರಿಂದ ಅವರು ಮತ್ತೊಂದು ದಾರಿಯಿಂದ ತಮ್ಮ ದೇಶಕ್ಕೆ ಹೊರಟುಹೋದರು.
¶ ಕಡೆಯದಾಗಿ, ನೀವು ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.