ಅವರು ತಮ್ಮ ಕುರಿದನಗಳನ್ನು ಯೋಸೇಫನ ಬಳಿಗೆ ತೆಗೆದುಕೊಂಡು ಬರಲು, ಅವನು ಅವರ ಕುದುರೆಗಳನ್ನೂ, ಕುರಿದನಗಳನ್ನೂ, ಕತ್ತೆಗಳನ್ನೂ ತೆಗೆದುಕೊಂಡು ಅವರಿಗೆ ಧಾನ್ಯವನ್ನು ಕೊಟ್ಟನು. ಆ ವರ್ಷದಲ್ಲಿ ಅವರ ಕುರಿದನಗಳನ್ನೆಲ್ಲಾ ತೆಗೆದುಕೊಂಡು ಧಾನ್ಯವನ್ನು ಕೊಟ್ಟು ಅವರನ್ನು ಸಂರಕ್ಷಿಸಿದನು.
TSK
TSK · ಯೋಬನು 2:4
مراجع Treasury of Scripture Knowledge في ಕನ್ನಡ IRV.
ಅವರು ಯೆಹೋಶುವನಿಗೆ “ನಿನ್ನ ದೇವರಾದ ಯೆಹೋವನು ತನ್ನ ಸೇವಕನಾದ ಮೋಶೆಗೆ ‘ನಾನು ನಿಮಗೆ ಈ ದೇಶವನ್ನೆಲ್ಲಾ ಕೊಡುವಾಗ ನೀವು ಇದರ ಎಲ್ಲಾ ನಿವಾಸಿಗಳನ್ನು ಸಂಹರಿಸಿ ಬಿಡಬೇಕೆಂದು’ ಆಜ್ಞಾಪಿಸಿದ್ದನ್ನು ಕೇಳಿ ನಮ್ಮ ಪ್ರಾಣ ತೆಗೆಯುವಿರೆಂದು ಹೆದರಿ ಹೀಗೆ ಮಾಡಿದೆವು.
ಆಗ ಎಸ್ತೇರ್ ರಾಣಿಯು, “ಅರಸನು ನನ್ನ ಮೇಲೆ ಕಟಾಕ್ಷವಿಟ್ಟು ಸಮ್ಮತಿಸುವುದಾದರೆ ನನ್ನ ವಿಜ್ಞಾಪನೆಯನ್ನೂ, ಪ್ರಾರ್ಥನೆಯನ್ನೂ ಲಾಲಿಸಿ ನನ್ನ ಜೀವವನ್ನೂ ಮತ್ತು ನನ್ನ ಜನಾಂಗವನ್ನೂ ಉಳಿಸಬೇಕು.
ಆ ದಿನದಲ್ಲಿ ಮನುಷ್ಯರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ, ಬಂಗಾರದ ವಿಗ್ರಹಗಳನ್ನೂ, ಇಲಿ, ಬಾವಲಿಗಳಿಗಾಗಿ ಬಿಸಾಡಿ ಬಿಡುವರು.
¶ ‹“ಈ ಕಾರಣದಿಂದ, ನಮ್ಮ ಜೀವನಕ್ಕೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗಾಗಿ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದುದಲ್ಲವೇ.›
‹ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ದೇಹವು ಮೇಲಾದದು.›
ಇಷ್ಟೇ ಅಲ್ಲದೆ, ನನ್ನ ಕರ್ತನಾದ ಕ್ರಿಸ್ತಯೇಸುವನ್ನರಿಯುವುದೇ ಅತಿ ಶ್ರೇಷ್ಠವಾದದ್ದೆಂದು ತಿಳಿದು ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ಆತನ ನಿಮಿತ್ತ ನಾನು ಎಲ್ಲವನ್ನೂ ಕಳೆದುಕೊಂಡು ಅವುಗಳನ್ನು ಕಸವೆಂದೆಣಿಸುತ್ತೇನೆ.