ದುಷ್ಟನು ಸೊಕ್ಕಿನ ಮುಖದಿಂದ, “ಯೆಹೋವನು ವಿಚಾರಿಸುವುದಿಲ್ಲ” ಎಂದು ಹೇಳಿಕೊಂಡು, ದೇವರಿಲ್ಲ ಎಂಬುದಾಗಿ ಸದಾ ಯೋಚಿಸುತ್ತಾನೆ.
TSK
TSK · ಯೋಬನು 21:14
مراجع Treasury of Scripture Knowledge في ಕನ್ನಡ IRV.
ನಾನು ನಲ್ವತ್ತು ವರ್ಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು; “ಈ ಜನರು ಹೃದಯದಲ್ಲಿ ತಪ್ಪಿಹೋಗುವವರು, ನನ್ನ ಆಜ್ಞೆಗಳಿಗೆ ವಿಧೇಯರಾಗದವರು” ಎಂದು ಹೇಳಿದೆನು.
“ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವುದಕ್ಕೆ ಎಷ್ಟುಕಾಲ ಇಷ್ಟಪಡುವರು? ಜ್ಞಾನಹೀನರು ತಿಳಿವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು?
ನೀವು ಹಿಡಿದಿರುವ ಮಾರ್ಗದಿಂದ ತೊಲಗಿರಿ; ನಿಮ್ಮ ದಾರಿಗೆ ಓರೆಯಾಗಿರಿ; ಇಸ್ರಾಯೇಲರ ಸದಮಲಸ್ವಾಮಿಯನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ” ಎಂದು ಹೇಳುತ್ತಾರೆ.
ನಲಿದಾಡುತ್ತಾ ಶತ್ರುಗಳು ನಮ್ಮನ್ನು ಗಾಳಗಳಿಂದ ಹಿಡಿದು ತಮ್ಮ ಬಲೆಗಳಲ್ಲಿ ರಾಶಿ ರಾಶಿಯಾಗಿ ಬಾಚಿಕೊಂಡು ಹೋಗಬೇಕೋ?
ಗೆರಸೇನರ ಸುತ್ತಲಿರುವ ಸೀಮೆಯವರಿಗೆಲ್ಲಾ ಮಹಾ ಭಯ ಉಂಟಾದದ್ದರಿಂದ ಅವರು ಆತನನ್ನು, ನೀನು ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು. ಆತನು ದೋಣಿಯನ್ನು ಹತ್ತಿ ಹಿಂತಿರುಗಿ ಹೋದನು.
‹ಆದರೂ, ನಾನು ಸತ್ಯವನ್ನು ಹೇಳುವವನಾಗಿದ್ದರೂ ನೀವು ನನ್ನನ್ನು ನಂಬುವುದಿಲ್ಲ.›
¶ ಇದಲ್ಲದೆ ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ಮಾಡಬಾರದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟನು.
ದುರ್ನೀತಿಯ ಎಲ್ಲಾ ವಂಚನೆಯಿಂದಲೂ ಕೂಡಿ ನಾಶದ ಮಾರ್ಗದಲ್ಲಿರುವವರಿಗೋಸ್ಕರವಾಗಿ ಬರುವನು. ಯಾಕೆಂದರೆ ಅವರು ಸತ್ಯವನ್ನು ಪ್ರೀತಿಸದೆ ನಿರಾಕರಿಸಿದ್ದರಿಂದ ರಕ್ಷಣೆಯನ್ನು ಹೊಂದದೆ ನಾಶವಾಗುತ್ತಾರೆ.