TSK

TSK · ಯೋಬನು 21:22

مراجع Treasury of Scripture Knowledge في ಕನ್ನಡ IRV.

العودة إلى المقطع

ಆಹಾ, ತನ್ನ ದೂತರಲ್ಲಿಯೂ ಆತನು ನಂಬಿಕೆಯಿಡುವುದಿಲ್ಲ, ಆಕಾಶವೂ ಆತನ ದೃಷ್ಟಿಯಲ್ಲಿ ನಿರ್ಮಲವಾಗಿರದು.

ಆತನು ಕಾಡು ಮೃಗಗಳಿಗಿಂತ ನಮಗೆ ಹೆಚ್ಚು ಜ್ಞಾನವನ್ನು ಬೋಧಿಸುತ್ತಾ, ಆಕಾಶದ ಪಕ್ಷಿಗಳಿಗಿಂತ ಹೆಚ್ಚು ಬುದ್ಧಿಯನ್ನು ನಮಗೆ ಕಲಿಸುತ್ತಾನೆ’ ಎಂದು ಹೇಳುವುದೇ ಇಲ್ಲ.

ಆತನ ಮಾರ್ಗವನ್ನು ಆತನಿಗೆ ಯಾರು ನೇಮಿಸಿದರು? ‘ನೀನು ಅನ್ಯಾಯವನ್ನು ನಡೆಸಿದಿ’ ಎಂದು ಯಾರು ಹೇಳಬಲ್ಲರು?

“ತರ್ಕಮಾಡುವವನು ಸರ್ವಶಕ್ತನಾದ ದೇವರ ಸಂಗಡಲೂ ವ್ಯಾಜ್ಯವಾಡುವನೋ? ದೇವರೊಂದಿಗೆ ವಿವಾದಮಾಡುವವನು ಇದಕ್ಕೆಲ್ಲಾ ಉತ್ತರಕೊಡಲಿ” ಎಂದು ಹೇಳಿದನು.

ನಮ್ಮ ಯೆಹೋವ ದೇವರಿಗೆ ಸಮಾನರು ಯಾರು? ಆತನು ಉನ್ನತಲೋಕದಲ್ಲಿ ಆಸನಾರೂಢನಾಗಿ,

ಯೆಹೋವನ ಆತ್ಮಕ್ಕೆ ಯಾರು ವಿಧಿಯನ್ನು ನೇಮಿಸಿದನು? ಆಲೋಚನಾ ಕರ್ತನಾಗಿ ಆತನಿಗೆ ಉಪದೇಶಿಸಿದವರು ಯಾರು?

ಅಯ್ಯೋ, ತನ್ನನ್ನು ರೂಪಿಸಿದಾತನ ಸಂಗಡ ವ್ಯಾಜ್ಯವಾಡುವವನ ಗತಿ ಏನು! ಮಣ್ಣಿನ ಮಡಿಕೆಗಳಲ್ಲಿ ಅವನೂ ಒಂದು ಮಡಿಕೆಯಲ್ಲವೆ! ಮಣ್ಣು ಕುಂಬಾರನಿಗೆ, ‘ನೀನು ಏನು ಮಾಡುತ್ತೀ?’ ಎಂದು ಕೇಳುವುದುಂಟೇ? ಅಥವಾ ನಿನ್ನ ಕಾರ್ಯವು, ‘ಅವನಿಗೆ ಕೈಯಿಲ್ಲ’ ಅಂದೀತೇ?

“ಕರ್ತನ ಮನಸ್ಸನ್ನು ತಿಳಿದುಕೊಂಡವರಾರು? ಆತನಿಗೆ ಆಲೋಚನಾಕರ್ತನಾಗಿದ್ದವನು ಯಾರು?

ನಾವು ದೇವದೂತರಿಗೂ ತೀರ್ಪುಮಾಡುವೆವೆಂಬುದು ನಿಮಗೆ ತಿಳಿಯದೋ? ಹಾಗಾದರೆ ಇಹಲೋಕ ಜೀವನದ ವಿಷಯಗಳ ಕುರಿತು ನಾವು ಎಷ್ಟೋ ಹೆಚ್ಚಾಗಿ ತೀರ್ಪುಮಾಡಬಹುದಲ್ಲವೇ?

ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡಿಕೊಳ್ಳದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದಲ್ಲಿ ಆಗುವ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿರಿಸಿದ್ದಾನೆ.

ಇದಲ್ಲದೆ ಸತ್ತವರಾದ, ಶ್ರೇಷ್ಠರು ಮತ್ತು ಕನಿಷ್ಠರೆಲ್ಲರು ಸಿಂಹಾಸನದ ಮುಂದೆ ನಿಂತಿರುವುದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು. ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು. ಆ ಪುಸ್ತಕಗಳಲ್ಲಿ ಬರೆದಿರುವ ಪ್ರಕಾರ, ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.