TSK

TSK · ಯೋಬನು 5:13

مراجع Treasury of Scripture Knowledge في ಕನ್ನಡ IRV.

العودة إلى المقطع

ಅಬ್ಷಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು, “ಯೆಹೋವನೇ ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು” ಎಂದು ಪ್ರಾರ್ಥಿಸಿದನು.

ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದಾಗ ಅವನು ಕತ್ತೆಗೆ ತಡಿಹಾಕಿಸಿ, ಅದರ ಮೇಲೆ ತನ್ನ ಊರಿಗೆ ಹೋದನು. ತನ್ನ ಮನೆಯಲ್ಲಿ ವ್ಯವಸ್ಥೆಮಾಡಿದ ನಂತರ, ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.

ಹಾಮಾನನನ್ನು ಮೊರ್ದೆಕೈಗಾಗಿ ಸಿದ್ಧಮಾಡಿಸಿದ್ದ ಗಲ್ಲುಗಂಬಕ್ಕೆ ಏರಿಸಿದರು. ಹೀಗೆ ಅರಸನ ಕೋಪವೂ ಶಮನವಾಯಿತು.

ಅವನು ಅಗೆದು ಅಗೆದು ಗುಂಡಿಯನ್ನು ತೋಡಿ, ಅದರೊಳಗೆ ತಾನೇ ಬಿದ್ದುಹೋದನಲ್ಲಾ.

ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ ಪಾತಾಳಕ್ಕೆ ಇಳಿದುಹೋಗುವರು.

ಅವರು ನಿಷ್ಕಾರಣವಾಗಿ ನನಗೆ ಬಲೆಯೊಡ್ಡಿದ್ದಾರೆ; ಕಾರಣವಿಲ್ಲದೆ ನನ್ನ ಪ್ರಾಣವನ್ನು ತೆಗೆಯಬೇಕೆಂದು ಗುಂಡಿಯನ್ನು ತೋಡಿದ್ದಾರೆ.

ಐಗುಪ್ತದ ಅಂತರಾತ್ಮವು ಬರಿದಾಗುವುದು. ಅದರ ಆಲೋಚನೆಯನ್ನು ಕೆಡಿಸಿಬಿಡುವೆನು. ಅಲ್ಲಿಯವರು ವಿಗ್ರಹಗಳನ್ನೂ, ಮಂತ್ರಗಾರರನ್ನೂ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನು ಆಶ್ರಯಿಸುವರು.

ಜ್ಞಾನಿಗಳು ಆಶಾಭಂಗಪಟ್ಟು ಬೆಚ್ಚಿಬಿದ್ದು ಸಿಕ್ಕಿಕೊಂಡಿದ್ದಾರೆ. ಇಗೋ, ಯೆಹೋವನ ಮಾತನ್ನು ನಿರಾಕರಿಸಿದರು.

ಎದೋಮನ್ನು ಕುರಿತು ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ತೇಮಾನ್ ಸೀಮೆಗೆ ಬುದ್ಧಿಯು ಇನ್ನಿಲ್ಲವೋ? ವಿವೇಕಿಗಳ ಆಲೋಚನಾಶಕ್ತಿಯು ಅಳಿಯಿತೋ? ಅವರ ಜ್ಞಾನವು ಮಾಯವಾಯಿತೋ?

¶ “ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು, ವಿವೇಕಿಗಳ ವಿವೇಕವನ್ನು ವಿಫಲಗೊಳಿಸುವೆನು.” ಎಂದು ಬರೆಯಲ್ಪಟ್ಟಿದೆ.