ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿದ ಯೆಹೋವನನ್ನು ಮರೆಯದೇ ಎಚ್ಚರದಿಂದಿರಿ.
TSK
TSK · ಯೋಬನು 8:13
مراجع Treasury of Scripture Knowledge في ಕನ್ನಡ IRV.
ಆಸ್ತಿಯೆಲ್ಲವೂ ಹೆಚ್ಚುತ್ತಿರುವಾಗ ಒಂದು ವೇಳೆ ನೀವು ಅಹಂಕಾರದಿಂದ ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟೀರಿ.
ಆದರೆ ದುಷ್ಟರು ನಿರಾಶ್ರಯರಾಗಿ ಕಂಗೆಡುವರು, ಪ್ರಾಣಬಿಡಬೇಕೆಂಬುದೇ ಅವರ ಬಯಕೆ.”
ಭ್ರಷ್ಟರ ಸಂಘವು ನಿರರ್ಥಕ, ಬೆಂಕಿಯು ಲಂಚಕೋರರ ಗುಡಾರಗಳನ್ನು ಸುಟ್ಟು ಹಾಕುವುದು.
ದುಷ್ಟರ ಉತ್ಸಾಹ ಧ್ವನಿಯು ಅಲ್ಪಕಾಲದ್ದು, ಭ್ರಷ್ಟನ ಉಲ್ಲಾಸವು ಕ್ಷಣಿಕವಾದದ್ದು ಎಂದು ನಿನಗೆ ಗೊತ್ತಿಲ್ಲವೋ?
ದೇವರನ್ನು ಹೃದಯದಲ್ಲಿ ನಂಬದಿರುವವರು ಸಿಟ್ಟುಗೊಂಡಿರುವರು, ಆತನು ಅವರನ್ನು ಬಂಧಿಸುವಾಗಲೂ ಆತನಿಗೆ ಮೊರೆಯಿಡುವುದಿಲ್ಲ.
ದುಷ್ಟರು ಅಂದರೆ ದೇವರನ್ನು ಅಲಕ್ಷ್ಯಮಾಡುವ ಜನಾಂಗಗಳವರೆಲ್ಲಾ ಪಾತಾಳಕ್ಕೆ ಇಳಿದುಹೋಗುವರು.
ದೇವರನ್ನು ಬಿಟ್ಟವರೇ, ಇದನ್ನು ಮನದಟ್ಟು ಮಾಡಿಕೊಳ್ಳಿರಿ; ಇಲ್ಲವಾದರೆ ನಿಮ್ಮನ್ನು ಹರಿದುಬಿಟ್ಟೇನು. ನಿಮ್ಮನ್ನು ತಪ್ಪಿಸುವವರು ಯಾರೂ ಇರುವುದಿಲ್ಲ.
ಶಿಷ್ಟನ ನಂಬಿಕೆಗೆ ಆನಂದವು ಫಲ, ದುಷ್ಟನ ನಿರೀಕ್ಷೆ ನಿಷ್ಫಲ.
¶ “ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಆ ಭ್ರಷ್ಟರು ನಡುಕಕ್ಕೆ ಒಳಗಾಗಿ, ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗುವರು” ಎಂದುಕೊಳ್ಳುತ್ತಾರೆ.
“ಅಯ್ಯೋ, ನನ್ನ ಶಕ್ತಿಯೆಲ್ಲಾ ಹಾಳಾಯಿತು, ಯೆಹೋವನು ನನಗೆ ದಯಪಾಲಿಸಿದ ನಿರೀಕ್ಷೆಯೂ ವ್ಯರ್ಥವಾಯಿತು” ಅಂದುಕೊಂಡೆನು.
¶ ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಯೇಸು ಮೊದಲು ತನ್ನ ಶಿಷ್ಯರಿಗೆ ಉಪದೇಶಿಸಿ ಹೇಳಿದ್ದೇನೆಂದರೆ, ‹“ಫರಿಸಾಯರ ಹುಳಿಹಿಟ್ಟಿನ ಬಗ್ಗೆ, ಅಂದರೆ ಅವರ ಕಪಟತನದ ವಿಷಯದಲ್ಲಿ ಜಾಗರೂಕರಾಗಿರಿ.›