TSK

TSK · ಯೋವೇಲ 1:11

مراجع Treasury of Scripture Knowledge في ಕನ್ನಡ IRV.

العودة إلى المقطع

ಯಾರೂ ದಾಟದ ಹಾಗೆ ದೇಶವು ಹಾಳಾಗಿ ಕಾಡಿನಂತೆ ಸುಟ್ಟು ಹೋದದ್ದು ಏಕೆ? ಈ ವಿಚಾರವನ್ನು ಗ್ರಹಿಸತಕ್ಕ ಜ್ಞಾನಿಯು ಯಾರು? ಅದನ್ನು ಯೆಹೋವನ ಬಾಯಿಂದಲೇ ಕೇಳಿ ತಿಳಿಸಬಲ್ಲವನು ಯಾರು?

ಅವರಲ್ಲಿನ ಶ್ರೀಮಂತರು ತಮ್ಮ ಕೈಕೆಳಗಿನವರನ್ನು ನೀರು ತರಲು ಕಳುಹಿಸುತ್ತಾರೆ. ಅವರು ಕೊಳಗಳಿಗೆ ಹೋದಾಗ ನೀರು ಕಾಣುವುದಿಲ್ಲ, ಬರೀ ಪಾತ್ರೆಗಳನ್ನು ತೆಗೆದುಕೊಂಡು ಹಿಂದಕ್ಕೆ ಬರುತ್ತಾರೆ. ಆಶೆಗೆಟ್ಟು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ.

ಸೇನಾಧೀಶ್ವರ ದೇವರಾದ, ಯೆಹೋವನು ಇಂತೆನ್ನುತ್ತಾನೆ: “ಎಲ್ಲಾ ಚೌಕಗಳಲ್ಲಿ ಕಿರುಚಾಟವಾಗುವುದು ಮತ್ತು ಸಕಲ ಬೀದಿಗಳಲ್ಲಿ, ‘ಅಯ್ಯೋ! ಅಯ್ಯೋ!’ ಎಂದು ಅರಚಿಕೊಳ್ಳುವರು. ರೈತರನ್ನು ಪ್ರಲಾಪಿಸುವುದಕ್ಕೂ ಗೋಳಾಟದವರನ್ನು ಗೋಳಾಡುವುದಕ್ಕೂ ಕರೆಯುವರು.