ನೀವು ಸಮರ್ಪಿಸುವ ಸರ್ವಾಂಗಹೋಮ, ಯಜ್ಞಪಶುಗಳನ್ನೂ, ನಿಮ್ಮ ಬೆಳೆಯಲ್ಲಿ ದಶಮಾಂಶವನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆ ಕಾಣಿಕೆಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲ ಮರಿಗಳನ್ನೂ ಆ ಸ್ಥಳಕ್ಕೆ ಮಾತ್ರ ತರಬೇಕು.
TSK
TSK · ಯೋವೇಲ 1:16
مراجع Treasury of Scripture Knowledge في ಕನ್ನಡ IRV.
ಆ ಏಳು ವಾರಗಳಾದ ನಂತರ ಪಂಚಾಶತ್ತಮ ದಿನದ ಹಬ್ಬವನ್ನು ಆಚರಿಸಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ನೀವು ಆಗ ಆತನಿಗೋಸ್ಕರ ತರಬೇಕು.
ಅದರಲ್ಲಿ ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ಮತ್ತು ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ಸಂಭ್ರಮಿಸಬೇಕು.
ಆತನ ಪರಿಶುದ್ಧ ನಾಮದಲ್ಲಿ ಹಿಗ್ಗಿರಿ; ಯೆಹೋವನ ದರ್ಶನವನ್ನು ಕೋರುವವರ ಹೃದಯವು ಹರ್ಷಿಸಲಿ.
ಯೆಹೋವನು ತನ್ನ ಬಲಗೈಯ ಮೇಲೆಯೂ, ತನ್ನ ಭುಜಬಲದ ಮೇಲೆಯೂ ಆಣೆಯಿಟ್ಟು, “ನಿನ್ನ ದವಸವನ್ನು ನಿನ್ನ ಶತ್ರುಗಳ ಆಹಾರಕ್ಕೆ ಇನ್ನು ಕೊಡುವುದೇ ಇಲ್ಲ. ನೀನು ಶ್ರಮಿಸಿ ಪಡೆದು ದ್ರಾಕ್ಷಾರಸವನ್ನು ಅನ್ಯರು ಕುಡಿಯುವುದೇ ಇಲ್ಲ;
¶ ಯಾಜಕರೇ, ಗೋಣಿತಟ್ಟನ್ನು ಉಟ್ಟುಕೊಂಡು ಗೋಳಾಡಿರಿ! ಯಜ್ಞವೇದಿಯ ಸೇವಕರೇ, ಗೋಳಾಡಿರಿ. ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಬಿದ್ದುಕೊಂಡಿರಿ. ಏಕೆಂದರೆ ಧಾನ್ಯನೈವೇದ್ಯಗಳು ಮತ್ತು ಪಾನದ್ರವ್ಯಗಳು ನಿಮ್ಮ ದೇವರ ಆಲಯಕ್ಕೆ ಬಾರದೆ ನಿಂತುಹೋಗಿದೆ.