TSK

TSK · ಯೋವೇಲ 2:13

مراجع Treasury of Scripture Knowledge في ಕನ್ನಡ IRV.

العودة إلى المقطع

¶ ರೂಬೇನನು ತಿರುಗಿ ಆ ಗುಂಡಿಯ ಹತ್ತಿರಕ್ಕೆ ಬಂದು ಅದರಲ್ಲಿ ಯೋಸೇಫನು ಇಲ್ಲದೆ ಇರುವುದನ್ನು ಕಂಡು ತನ್ನ ಬಟ್ಟೆಗಳನ್ನು ಹರಿದುಕೊಂಡನು.

¶ ಯೆಹೋವನು ಮೋಶೆಗೆ ಎದುರಾಗಿ ಹೋಗುತ್ತಾ ಪ್ರಕಟಿಸಿ ಹೇಳಿದ್ದೇನೆಂದರೆ; “ಯೆಹೋವನೆಂಬ ದೇವರು ಕರುಣಾಳುವು, ಕೃಪಾಳುವು, ದೀರ್ಘಶಾಂತವುಳ್ಳವನು, ಪ್ರೀತಿಯುಳ್ಳವನು ಹಾಗು ನಂಬಿಗಸ್ತನಾದ ದೇವರು ಆಗಿದ್ದೇನೆ;

ಸೌಲನೂ ಅವನ ಮಗನಾದ ಯೋನಾತಾನನೂ, ಯೆಹೋವನ ಪ್ರಜೆಗಳಾದ ಇಸ್ರಾಯೇಲರೂ ಕತ್ತಿಯಿಂದ ಸಂಹೃತರಾದದ್ದಕ್ಕಾಗಿ ದಾವೀದನೂ ಅವನ ಜನರೂ

¶ ಇಸ್ರಾಯೇಲರ ಅರಸನು ಪತ್ರವನ್ನು ಓದಿದ ಕೂಡಲೆ ಬಟ್ಟೆಗಳನ್ನು ಹರಿದುಕೊಂಡು, ತನ್ನ ಪರಿವಾರದವರಿಗೆ, “ಅವನು ಕಳುಹಿಸಿದ ಮನುಷ್ಯನನ್ನು ಕುಷ್ಠರೋಗದಿಂದ ವಾಸಿಮಾಡಬೇಕಂತೆ. ಇದು ಎಂಥ ಅಪ್ಪಣೆ! ನಾನೇನು ದೇವರೋ? ಜೀವದಾನಮಾಡುವುದಕ್ಕಾಗಲಿ, ಸಾಯಿಸುವುದಕ್ಕಾಗಲಿ ನನಗೆ ಸಾಮರ್ಥ್ಯ ಉಂಟೋ? ಇವನು ನನ್ನೊಡನೆ ಜಗಳವಾಡುವುದಕ್ಕೆ ಕಾರಣ ಹುಡುಕುತ್ತಿದ್ದಾನಲ್ಲವೇ ನೀವೇ ಆಲೋಚಿಸಿ ನೋಡಿರಿ” ಎಂದು ಹೇಳಿದನು.

¶ ಅರಸನು ಧರ್ಮೋಪದೇಶಗ್ರಂಥದ ವಾಕ್ಯಗಳನ್ನು ಕೇಳಿದಾಗ, ಬಟ್ಟೆಗಳನ್ನು ಹರಿದುಕೊಂಡನು.

ಪರಲೋಕದಿಂದ ನೀನು ಲಾಲಿಸಿ ನಿನ್ನ ಸೇವಕರು ಪ್ರಜೆಗಳೂ ಆದ ಇಸ್ರಾಯೇಲರ ಪಾಪಗಳನ್ನು ಕ್ಷಮಿಸಿ, ಅವರು ನಡೆಯಬೇಕಾದ ಸನ್ಮಾರ್ಗವನ್ನು ತೋರಿಸಿ, ನಿನ್ನ ಪ್ರಜೆಗಳಿಗೆ ಸ್ವತ್ತಾಗಿ ಕೊಟ್ಟ ದೇಶಕ್ಕೆ ಮಳೆಯನ್ನು ಅನುಗ್ರಹಿಸು.

¶ ಆಗ ಯೋಬನು ಎದ್ದು ಮೇಲಂಗಿಯನ್ನು ಹರಿದುಕೊಂಡು, ತಲೆ ಬೋಳಿಸಿಕೊಂಡು ನೆಲದ ಮೇಲೆ ಅಡ್ಡಬಿದ್ದು ದೇವರನ್ನು ಆರಾಧಿಸಿ,

ಕುಗ್ಗಿದ ಮನಸ್ಸೇ ದೇವರಿಗೆ ಇಷ್ಟವಾದ ಯಜ್ಞ; ದೇವರೇ, ಪಶ್ಚಾತ್ತಾಪದಿಂದ ಜಜ್ಜಿಹೋದ ಮನಸ್ಸನ್ನು ನೀನು ತಿರಸ್ಕರಿಸುವುದಿಲ್ಲ.

ಕರ್ತನೇ, ನೀನು ಕನಿಕರವೂ, ದಯೆಯೂ ಉಳ್ಳ ದೇವರು; ದೀರ್ಘಶಾಂತನು, ಬಹಳ ಪ್ರೀತಿಯೂ, ನಂಬಿಕೆಯೂ ಉಳ್ಳವನು.

ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು, ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು.

ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.

ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ, ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.

ನಾನು ದಂಡನೆಯನ್ನು ನಿರ್ಣಯಿಸಿದ ಆ ಜನಾಂಗದವರು ತಮ್ಮ ಕೆಟ್ಟತನದಿಂದ ತಿರುಗಿಕೊಂಡರೆ, ನಾನು ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು.

ಯೆಹೋವನು ಕೂಗಿ ಅವನಿಗೆ, “ನೀನು ಯೆರೂಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಿ ಅದರೊಳಗೆ ನಡೆಯುವ ಸಮಸ್ತ ಅಸಹ್ಯ ಕಾರ್ಯಗಳಿಗಾಗಿ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು” ಎಂದು ಅಪ್ಪಣೆಕೊಟ್ಟನು.

ದೇವರು ಒಂದು ವೇಳೆ ಮನಮರುಗಿ, ಮನಸ್ಸನ್ನು ಬದಲಾಯಿಸಿಕೊಂಡು ತನ್ನ ಉಗ್ರಕೋಪವನ್ನು ತೊರೆದರೆ, ನಾವು ನಾಶವಾಗದೆ ಉಳಿದೇವು” ಎಂಬುದನ್ನು ನಿನೆವೆಯಲ್ಲೆಲ್ಲಾ ಸಾರಿಸಿದನು.

ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವತ್ತಿನವರಲ್ಲಿ ಉಳಿದಿರುವ ಅಪರಾಧವನ್ನು ಕ್ಷಮಿಸುವವನೂ, ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ. ಹೌದು ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ. ಕರುಣೆಯೇ ಆತನಿಗೆ ಇಷ್ಟ.

‹“ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕ ರಾಜ್ಯವು ಅವರದು.›

ಅಥವಾ ಆತನ ಅಪಾರವಾದ ದಯೆ, ಸಹನೆ, ದೀರ್ಘಶಾಂತಿಗಳನ್ನು ಕೇವಲವಾಗಿ ಯೋಚಿಸಿ, ನಿನ್ನ ಮನಸ್ಸು ಮಾರ್ಪಡಿಸಿಕೊಳ್ಳುವಂತೆ ಪ್ರೆರೇಪಿಸುವ ದೇವರ ಒಳ್ಳೆತನದ ಅರಿವು ನಿನಗಿಲ್ಲವೋ?

ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮನ್ನು ಪ್ರೀತಿಸಿದ ಮಹಾ ಪ್ರೀತಿಯ ನಿಮಿತ್ತ,

¶ ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ ಚುರುಕಾಗಿಯೂ, ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.