ಅವು ನಿನ್ನ ಮನೆಗಳಲ್ಲಿಯೂ, ನಿನ್ನ ಪರಿವಾರದವರ ಮನೆಗಳಲ್ಲಿಯೂ, ಐಗುಪ್ತ್ಯರೆಲ್ಲರ ಮನೆಗಳಲ್ಲಿಯೂ ತುಂಬಿಕೊಂಡಿರುವವು. ನಿಮ್ಮ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅಂಥ ಮಿಡತೆಯ ದಂಡನ್ನು ಎಂದೂ ಅವರು ನೋಡಿರುವುದಿಲ್ಲ’” ಎಂದು ಹೇಳಿದರು. ಇದನ್ನು ಹೇಳಿ ಮೋಶೆ ತಿರುಗಿಕೊಂಡು ಫರೋಹನ ಬಳಿಯಿಂದ ಹೊರಟುಹೋದನು.
TSK
TSK · ಯೋವೇಲ 2:2
مراجع Treasury of Scripture Knowledge في ಕನ್ನಡ IRV.
ಜನರು ದೂರದಲ್ಲಿ ನಿಂತಿದ್ದರು. ಮೋಶೆಯು ದೇವರಿರುವ ಆ ಕಾರ್ಗತ್ತಲಿನ ಸಮೀಪಕ್ಕೆ ಹೋದನು.
ಅವನು, “ನಾನು ಕದಲುವುದೇ ಇಲ್ಲ; ನನಗೆ ವಿಪತ್ತು ಎಂದೆಂದಿಗೂ ಸಂಭವಿಸುವುದಿಲ್ಲ” ಅಂದುಕೊಂಡಿದ್ದಾನೆ.
ಸಮುದ್ರವು ಭೋರ್ಗರೆಯುವಂತೆ ಆ ದಿನದಲ್ಲಿ ಇವರು ಯೆಹೂದ್ಯರನ್ನು ಕಂಡು ಗರ್ಜಿಸುವರು. ಭೂಮಿಯನ್ನು ದೃಷ್ಟಿಸಿದರೆ ಅಂಧಕಾರವೂ, ವ್ಯಾಕುಲವೂ ತುಂಬಿರುವುದು. ಮೋಡ ಕವಿದು ಬೆಳಕು ಕತ್ತಲಾಗುವುದು.
ಬಹು ದಿನಗಳ ಮೇಲೆ ಯೆಹೋವನು ನನಗೆ, “ಹೊರಡು, ಯೂಫ್ರೆಟಿಸ್ ನದಿಗೆ ಹೋಗಿ ಅಲ್ಲಿ ಬಚ್ಚಿಡಬೇಕೆಂದು ನಾನು ಅಪ್ಪಣೆಕೊಟ್ಟ ನಡುಕಟ್ಟನ್ನು ಅಲ್ಲಿಂದ ತೆಗೆ” ಎಂದು ಹೇಳಿದನು.
ಆಹಾ, ನಮ್ಮ ದೇವರು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿ ನಮ್ಮನ್ನೂ, ನಮ್ಮನ್ನಾಳುವ ಅಧಿಪತಿಗಳನ್ನೂ ಕುರಿತು ಗದರಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾನೆ; ಯೆರೂಸಲೇಮಿಗೆ ಆದಂತಹ ಕೇಡು ಭೂಮಂಡಲದಲ್ಲಿ ಎಲ್ಲಿಯೂ ಎಂದೂ ಆಗಲಿಲ್ಲವಲ್ಲಾ.
ವೃದ್ಧರೇ, ಇದನ್ನು ಕೇಳಿರಿ, ದೇಶದ ನಿವಾಸಿಗಳೇ, ನೀವೆಲ್ಲರೂ ಕಿವಿಗೊಡಿರಿ. ಇಂಥ ಬಾಧೆಯು ನಿಮ್ಮ ಕಾಲದಲ್ಲಾಗಲಿ ನಿಮ್ಮ ಪೂರ್ವಿಕರ ಕಾಲದಲ್ಲಿಯಾಗಲಿ ಸಂಭವಿಸಿತ್ತೋ?
ಬೆಟ್ಟಗಳ ತುದಿಯಲ್ಲಿ ಅವು ಹಾರಾಡುತ್ತ ರಥಗಳಂತೆ ಚೀತ್ಕಾರ ಮಾಡುತ್ತವೆ; ಕೂಳೆಯನ್ನು ದಹಿಸುವ ಬೆಂಕಿಯ ಜ್ವಾಲೆಯ ಶಬ್ದದ ಹಾಗೆಯೂ, ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಸೈನ್ಯದ ಹಾಗೆಯೂ ಇವೆ.
ಗುಂಪು ಮಿಡತೆಗಳು, ಸಣ್ಣ ಮಿಡತೆಗಳು, ದೊಡ್ಡ ಮಿಡತೆಗಳು, ಚೂರಿ ಮಿಡತೆಗಳು, ನಾನು ಕಳುಹಿಸಿದ ಈ ಮಿಡತೆಗಳ ಸೈನ್ಯಗಳು ತಿಂದು ನಷ್ಟಮಾಡಿದ ವರ್ಷಗಳನ್ನು ನಾನು ನಿಮಗೆ ತಿರುಗಿಕೊಡುವೆನು.
ತೂರ್, ಚೀದೋನ್, ಫಿಲಿಷ್ಟಿಯರ ಎಲ್ಲಾ ಪ್ರಾಂತ್ಯಗಳೇ, ನನ್ನ ವಿರುದ್ಧ ನಿಮಗೆ ಕೋಪವೇಕೆ? ನನಗೆ ಪ್ರತಿಕಾರ ಮಾಡುವಿರೋ? ನೀವು ನನಗೆ ಪ್ರತಿಕಾರ ಮಾಡಿದರೆ, ನೀವು ಮಾಡುವ ಕೇಡನ್ನು ತ್ವರೆಯಾಗಿ ನಿಮ್ಮ ತಲೆಗೆ ಬರುವಂತೆ ಮಾಡುವೆನು.
ಇಗೋ, ಪರ್ವತಗಳನ್ನು ರೂಪಿಸಿ, ಗಾಳಿಯನ್ನು ನಿರ್ಮಿಸಿ, ತನ್ನ ಸಂಕಲ್ಪವನ್ನು ಮನುಷ್ಯರಿಗೆ ವ್ಯಕ್ತಗೊಳಿಸಿ, ಉದಯವನ್ನು ಅಂಧಕಾರವನ್ನಾಗಿ ಮಾಡಿ ಮತ್ತು ಭೂಮಿಯ ಉನ್ನತ ಪ್ರದೇಶಗಳನ್ನು ತುಳಿದುಬಿಡುವಾತನು” ಸೇನಾಧೀಶ್ವರ ದೇವರಾದ ಯೆಹೋವನೆಂಬುದೇ ನನ್ನ ನಾಮಧೇಯ.
ಯೆಹೋವನ ದಿನವು ಬೆಳಕಲ್ಲ; ಕತ್ತಲೆಯೇ! ಯಾವ ಪ್ರಕಾಶ ಇಲ್ಲದ ಗಾಢಾಂಧಕಾರವೇ!
¶ ಯೆಹೋವನ ಮಹಾದಿನವು ಸಮೀಪಿಸಿತು, ಬಹು ತ್ವರೆಯಾಗಿ ಬರುತ್ತಿದೆ; ಆಹಾ, ಕಿವಿಗೊಡಿರಿ, ಯೆಹೋವನ ದಿನವೇ ಬಂದಿತು; ಇಗೋ, ಅಲ್ಲಿ ಒಬ್ಬ ಶೂರನು ಘೋರವಾಗಿ ಗೋಳಾಡುತ್ತಿದ್ದಾನೆ!
¶ ಆ ದಿನದಲ್ಲಿ ಬೆಳಕಿರದು, ಜ್ಯೋತಿಗಳು ಅಡಗಿಹೋಗುವವು, ಇಂಥಾ ದಿನವು ಒಂದೇ,
¶ ನೀವು ಮುಟ್ಟಬಹುದಾದ ಮತ್ತು ಬೆಂಕಿ ಹೊತ್ತಿದಂಥ ಬೆಟ್ಟಕ್ಕೂ, ಕಾರ್ಮೋಡ, ಕಗ್ಗತ್ತಲೆ, ಬಿರುಗಾಳಿ, ತುತ್ತೂರಿಯ ಶಬ್ದ, ಮಾತುಗಳ ಧ್ವನಿ ಎಂಬಿವುಗಳ ಬಳಿಗಲ್ಲ ನೀವು ಬಂದಿರುವುದು. ಆ ಧ್ವನಿಯನ್ನು ಕೇಳಿದವರು ಇನ್ನೆಂದಿಗೂ ಆ ಧ್ವನಿ ತಮ್ಮೊಂದಿಗೆ ಮಾತನಾಡುವುದೇ ಬೇಡವೆಂದು ಕೇಳಿಕೊಂಡರು.