ಯೆಹೋವನು ಪಶ್ಚಿಮದಿಂದ ಬಿರುಗಾಳಿ ಬೀಸುವಂತೆ ಮಾಡಿದನು. ಅದು ಆ ಮಿಡತೆಗಳನ್ನು ಎತ್ತಿಕೊಂಡು ಹೋಗಿ ಕೆಂಪುಸಮುದ್ರದೊಳಗೆ ಹಾಕಿಬಿಟ್ಟಿತು. ಐಗುಪ್ತ ದೇಶದ ಮೇರೆಗಳೊಳಗೆ ಒಂದು ಮಿಡತೆಯೂ ನಿಲ್ಲಲಿಲ್ಲ.
TSK
TSK · ಯೋವೇಲ 2:20
مراجع Treasury of Scripture Knowledge في ಕನ್ನಡ IRV.
¶ ಹಜಾಯೇಲನು ಎಲೀಷನಿಗೆ, “ನಿನ್ನ ಸೇವಕನಾದ ನಾನು ನಾಯಿಯಂತಿರುತ್ತೇನಷ್ಟೇ; ನನ್ನಿಂದ ಇಂಥಾ ಕ್ರೂರ ಕಾರ್ಯವಾಗುವುದು ಹೇಗೆ?” ಎಂದು ಕೇಳಲು ಅವನು, “ನೀನು ಅರಾಮ್ಯರ ಅರಸನಾಗುವಿಯೆಂದು ಯೆಹೋವನು ನನಗೆ ತಿಳಿಸಿದ್ದಾನೆ” ಎಂದನು.
ಅವರಲ್ಲಿ ಹತರಾದವರು ಬಿಸಾಡಲ್ಪಡುವರು, ಅವರ ಶವಗಳ ದುರ್ವಾಸನೆಯು ಮೇಲಕ್ಕೆ ಏರುವುದು. ಅವರ ರಕ್ತಪ್ರವಾಹದಿಂದ ಪರ್ವತಗಳು ಕರಗುವವು.
ಇಸ್ರಾಯೇಲರು ದೇಶವನ್ನು ಶುದ್ಧಿಮಾಡುವುದಕ್ಕಾಗಿ ಏಳು ತಿಂಗಳು ಅವರನ್ನು ಸಮಾಧಿ ಮಾಡುತ್ತಲೇ ಇರುವರು.
¶ “ಇದು ಪೂರ್ವದಿಕ್ಕಿನ ಮೇರೆಯಾಗಿದೆ: ಹವ್ರಾನ್, ದಮಸ್ಕ, ಗಿಲ್ಯಾದ್ ಇವುಗಳಿಗೂ ಇಸ್ರಾಯೇಲ್ ದೇಶಕ್ಕೂ ಮಧ್ಯದಲ್ಲಿರುವ ಯೊರ್ದನ್ ಹೊಳೆಯು ಮೇರೆಯಾಗಿರುವುದು. ಉತ್ತರ ಮೇರೆಯಿಂದ ದಕ್ಷಿಣ ಸಮುದ್ರದವರೆಗೆ ನೀವು ಗುರುತು ಹಾಕಿಕೊಳ್ಳಬೇಕು.
ಅದು ಕತ್ತಲೆಯ ಮತ್ತು ಮೊಬ್ಬಿನ ದಿನವೂ, ಕಾರ್ಮುಗಿಲಿನ ಕಗ್ಗತ್ತಲ ದಿನವೂ ಆಗಿದೆ. ಉದಯವು ಬೆಟ್ಟಗಳ ಮೇಲೆ ಹರಡಿಕೊಳ್ಳುವ ಹಾಗೆ, ಪ್ರಬಲವಾದ ದೊಡ್ಡ ಸೈನ್ಯವು ಬರುತ್ತದೆ. ಅದರ ಹಾಗೆ ಹಿಂದೆಂದೂ ಬಂದಿಲ್ಲ, ಇನ್ನು ಮುಂದೆಯೂ ಬರುವುದಿಲ್ಲ, ತಲತಲಾಂತರಗಳ ವರ್ಷಗಳವರೆಗೂ ಬರುವುದಿಲ್ಲ.
¶ ಆ ದಿನದಲ್ಲಿ ಜೀವಕರವಾದ ಜಲಪ್ರವಾಹವು ಯೆರೂಸಲೇಮಿನೊಳಗಿಂದ ಹೊರಡುವುದು; ಅರ್ಧಭಾಗವು ಪೂರ್ವಸಮುದ್ರಕ್ಕೂ, ಅರ್ಧಭಾಗವು ಪಶ್ಚಿಮ ಸಮುದ್ರಕ್ಕೂ ಹರಿಯುವುದು; ಬೇಸಿಗೆಕಾಲದಲ್ಲಿಯೂ, ಮಳೆಗಾಲದಲ್ಲಿಯೂ ಹರಿಯುತ್ತಲೇ ಇರುವುದು.