ಇದಲ್ಲದೆ ಯೆಹೋವನಾದ ದೇವರು ಮೂಡಣ ದಿಕ್ಕಿನಲ್ಲಿರುವ ಏದೆನ್ ಸೀಮೆಯಲ್ಲಿ ಒಂದು ಉದ್ಯಾನವನವನ್ನು ಸೃಷ್ಟಿಸಿ ತಾನು ಉಂಟುಮಾಡಿದ ಮನುಷ್ಯನನ್ನು ಅದರಲ್ಲಿ ತಂಗುವಂತೆ ಮಾಡಿದನು.
TSK
TSK · ಯೋವೇಲ 2:3
مراجع Treasury of Scripture Knowledge في ಕನ್ನಡ IRV.
ಅವು ಭೂಮಿಯನ್ನೆಲ್ಲಾ ಆವರಿಸಿಕೊಳ್ಳುವವು. ನೆಲವೇ ಕಾಣಿಸದೆ ಹೋಗುವುದು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿದ್ದೆಲ್ಲವನ್ನು ಮಿಡತೆಗಳು ತಿಂದುಬಿಡುವವು. ಹೊಲದಲ್ಲಿರುವ ನಿಮ್ಮ ಎಲ್ಲಾ ಮರಗಳ ಎಲೆ ಚಿಗುರುಗಳನ್ನೂ ತಿಂದುಬಿಡುವವು.
ನಮ್ಮ ದೇವರು ಪ್ರತ್ಯಕ್ಷನಾಗುವನು, ಎಷ್ಟು ಮಾತ್ರವೂ ಸುಮ್ಮನಿರುವುದಿಲ್ಲ; ಆತನ ಮುಂಭಾಗದಲ್ಲಿ ಬೆಂಕಿ ಪ್ರಜ್ವಲಿಸುತ್ತದೆ; ಆತನ ಸುತ್ತಲು ಬಿರುಗಾಳಿ ಬೀಸುತ್ತದೆ.
ನಿಮ್ಮ ಕೊಳ್ಳೆಯು ಮಿಡತೆಗಳು ಕೂಡಿಸುವ ಹಾಗೆ ಕೂಡಿಸಲ್ಪಡುವುದು, ಮಿಡತೆಗಳು ಓಡಾಡುವ ಹಾಗೆ ಮನುಷ್ಯರು ಅದರ ಮೇಲೆ ಓಡಾಡುವರು.
ಇವರು ನಿನ್ನ ಬೆಳೆಯನ್ನೂ, ನಿನ್ನ ಆಹಾರವನ್ನೂ, ನಿನ್ನ ಗಂಡು ಮತ್ತು ಹೆಣ್ಣುಮಕ್ಕಳನ್ನೂ, ನಿನ್ನ ದನ ಮತ್ತು ಕುರಿಗಳನ್ನೂ, ನಿನ್ನ ದ್ರಾಕ್ಷಾಲತೆಗಳನ್ನೂ ಹಾಗೂ ಅಂಜೂರದ ಗಿಡಗಳನ್ನೂ ತಿಂದುಬಿಡುವರು. ನಿನ್ನ ಭರವಸೆಯ ಕೋಟೆಕೊತ್ತಲುಗಳ ಪಟ್ಟಣಗಳನ್ನು ಖಡ್ಗದಿಂದ ಹಾಳುಮಾಡುವರು.
ಚೂರಿಮಿಡತೆ ತಿಂದು ಉಳಿದಿದ್ದ ಬೆಳೆಯನ್ನು ಗುಂಪು ಮಿಡತೆ ತಿಂದು ಬಿಟ್ಟಿತು; ಗುಂಪು ಮಿಡತೆ ತಿಂದು ಉಳಿದದ್ದನ್ನು ಕುದರೆ ಮಿಡತೆ ತಿಂದು ಬಿಟ್ಟಿತು; ಕುದರೆ ಮಿಡತೆ ತಿಂದು ಉಳಿದದ್ದನ್ನು ಕಂಬಳಿ ಮಿಡತೆ ತಿಂದುಬಿಟ್ಟಿತು.
¶ ಕರ್ತನಾದ ಯೆಹೋವನು ಇನ್ನೊಂದು ದರ್ಶನವನ್ನು ನನಗೆ ತೋರಿಸಿದನು. ಇಗೋ, ಕರ್ತನಾದ ಯೆಹೋವನು ತನ್ನ ಜನರನ್ನು ದಂಡಿಸುವುದಕ್ಕಾಗಿ ಅಗ್ನಿಯನ್ನು ಕರೆದನು. ಅದು ಮಹಾ ಸಾಗರವನ್ನು ನುಂಗಿ ದೇಶವನ್ನೂ ತಿಂದುಬಿಟ್ಟಿತು.
ಅವರು ನೋಡದ ಎಲ್ಲಾ ಜನಾಂಗಗಳ ಮಧ್ಯಕ್ಕೆ ಅವರನ್ನು ತೂರಿಬಿಡುವೆನು. ಯೆಹೋವನ ಈ ಮಾತಿನಂತೆ ಅವರು ಚದರಿದ ಮೇಲೆ ದೇಶವು ಹಾಳಾಯಿತು. ಅದರಲ್ಲಿ ಯಾರೂ ಹೋಗುತ್ತಿರಲಿಲ್ಲ, ಬರುತ್ತಿರಲಿಲ್ಲ; ಆ ರಮ್ಯ ದೇಶವನ್ನು ಹಾಳುಮಾಡಿದರು.’”