TSK

TSK · ಯೋಹಾನನು 1:14

مراجع Treasury of Scripture Knowledge في ಕನ್ನಡ IRV.

العودة إلى المقطع

ನಾನು ಯೆಹೋವನ ಆಜ್ಞೆಯನ್ನು ತಿಳಿಸುತ್ತೇನೆ, ಕೇಳಿರಿ; ಆತನು ನನಗೆ, “ನನಗೆ ನೀನು ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.

ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.

ಒಣನೆಲದೊಳಗೆ ಬೇರಿನಿಂದ ಹೊರಡುವ ಸಸಿಯಂತೆಯೂ, ಬುಡದಿಂದ ಒಡೆಯುವ ಚಿಗುರಿನ ಹಾಗೂ ಅವನು ಯೆಹೋವನ ದೃಷ್ಟಿಯಲ್ಲಿ ಬೆಳೆದನು. ಅವನಲ್ಲಿ ಯಾವ ಅಂದಚಂದಗಳೂ ಇರಲಿಲ್ಲ; ನಾವು ಅವನನ್ನು ನೋಡಿದಾಗ ನೋಡತಕ್ಕ ಯಾವ ಲಕ್ಷಣವೂ ಕಾಣಲಿಲ್ಲ.

ಯಾಕೋಬನ ಮಗನು ಯೋಸೇಫನು. ಯೋಸೇಫನು ಮರಿಯಳ ಗಂಡನು. ಈ ಮರಿಯಳಿಂದಲೇ ಕ್ರಿಸ್ತನೆಂಬ ಯೇಸು ಹುಟ್ಟಿದನು.

¶ ಆರು ದಿನಗಳಾದ ಮೇಲೆ ಯೇಸು ಪೇತ್ರನನ್ನೂ ಯಾಕೋಬನನ್ನೂ ಅವನ ತಮ್ಮ ಯೋಹಾನನನ್ನೂ ಮಾತ್ರ ಏಕಾಂತವಾಗಿ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು.

ಆಕೆಯು ತನ್ನ ಚೊಚ್ಚಲು ಮಗನನ್ನು ಹೆತ್ತು ಬಟ್ಟೆಯಲ್ಲಿ ಸುತ್ತಿ ಛತ್ರದಲ್ಲಿ ಅವರಿಗೆ ಸ್ಥಳವಿಲ್ಲದ ಕಾರಣ ಅವನನ್ನು ಗೋದಲಿಯಲ್ಲಿ ಮಲಗಿಸಿದಳು.

ಇಷ್ಟರಲ್ಲಿ ಪೇತ್ರನಿಗೂ ಅವನ ಸಂಗಡ ಇದ್ದವರಿಗೂ ನಿದ್ರೆಯಿಂದ ಮೈಭಾರವಾಗಿತ್ತು. ಆದರೆ ಎಚ್ಚರವಾದ ಮೇಲೆ ಅವರು ಆತನ ಮಹಿಮೆಯನ್ನೂ ಆತನ ಸಂಗಡ ನಿಂತಿದ್ದ ಆ ಇಬ್ಬರು ಪುರುಷರನ್ನೂ ಕಂಡರು.

¶ ಯೇಸು ಕ್ರಿಸ್ತನ ಪರಿಪೂರ್ಣತೆಯಿಂದ ನಾವೆಲ್ಲರೂ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು.

¶ ‹“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.›

‹ನಾನೇ ಪರಲೋಕದಿಂದ ಇಳಿದು ಬಂದ ಜೀವವುಳ್ಳ ರೊಟ್ಟಿ. ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಸದಾ ಕಾಲವು ಬದುಕುವನು; ಮತ್ತು ನಾನು ಕೊಡುವ ರೊಟ್ಟಿ ನನ್ನ ದೇಹವೇ, ಅದನ್ನು ಲೋಕದ ಜೀವಕ್ಕಾಗಿ ಕೊಡುವೆನು”› ಎಂದು ಹೇಳಿದನು.

“ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಹೇಗೂ ಸ್ವಸ್ಥತೆಯನ್ನು ಹೊಂದದೆ ಇರುವಂತೆ, ಆತನು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣಮಾಡಿದನು” ಎಂಬುದೇ.

ಯೇಸು ಅವನಿಗೆ, ‹“ಫಿಲಿಪ್ಪನೇ, ನಾನು ಇಷ್ಟು ಕಾಲ ನಿಮ್ಮ ಜೊತೆಯಲ್ಲಿಯೇ ಇದ್ದರೂ ಇನ್ನೂ ನೀನು ನನ್ನನ್ನು ತಿಳಿಯಲಿಲ್ಲವೇ! ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ, ಮತ್ತು ನಮಗೆ ತಂದೆಯನ್ನು ತೋರಿಸು ಎಂದು ನೀನು ಹೇಳುವುದಾದರು ಹೇಗೆ?›

‘ನನಗೆ ನೀನು ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ’ ಎಂದು ಎರಡನೆಯ ಕೀರ್ತನೆಯಲ್ಲಿ ಬರೆದಿರುವ ಮಾತು ನೆರವೇರಿತು.

ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.

ಮೊದಲನೆಯ ಮನುಷ್ಯನು ಮಣ್ಣಿನಿಂದ ಮಾಡಲ್ಪಟ್ಟವನು; ಭೂಮಿಗೆ ಸೇರಿದವನು, ಎರಡನೆಯ ಮನುಷ್ಯನು ಪರಲೋಕದಿಂದ ಬಂದವನು.

ಅದಕ್ಕಾತನು, ‹“ನನ್ನ ಕೃಪೆಯೇ ನಿನಗೆ ಸಾಕು,›‹ಬಲಹೀನತೆಯಲ್ಲಿಯೇ ನನ್ನ ಬಲವು ಪೂರ್ಣಸಾಧಕವಾಗುತ್ತದೆ”› ಎಂದು ನನಗೆ ಹೇಳಿದನು. ಹೀಗಿರಲಾಗಿ, ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿರಬೇಕೆಂದು ನನಗುಂಟಾಗುವ ಬಲಹೀನತೆಯಲ್ಲಿಯೂ ಬಹು ಸಂತೋಷವಾಗಿ ಹೆಚ್ಚಳಪಡುವೆನು.

ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ

ಆತನು ದೇವಸ್ವರೂಪನಾಗಿದ್ದರೂ, ದೇವರಿಗೆ ಸರಿಸಮಾನನಾಗಿರುವನೆಂಬ ಅಮೂಲ್ಯ ಪದವಿಯನ್ನು ಬಿಡಲೊಲ್ಲೆನು ಎಂದೆಣಿಸದೆ,

ಆದರೆ ನಮ್ಮ ಕರ್ತನ ಕೃಪೆಯು ಅತ್ಯಧಿಕವಾಗಿದ್ದು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯನ್ನೂ ಪ್ರೀತಿಯನ್ನೂ ನನ್ನಲ್ಲಿ ಉಕ್ಕಿಸಿತ್ತು.

ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.

ಯಾಕೆಂದರೆ ಪವಿತ್ರಗೊಳಿಸುವವನಿಗೂ ಪವಿತ್ರರಾದವರಿಗೂ ಒಬ್ಬಾತನೇ ಮೂಲ ಆತನು ದೇವರೇ. ಈ ಕಾರಣದಿಂದ ಅವರನ್ನು ಪವಿತ್ರಗೊಳಿಸುವಾತನು ಅವರನ್ನು ಸಹೋದರರೆಂದು ಕರೆಯುವುದಕ್ಕೆ ನಾಚಿಕೆಪಡಲಿಲ್ಲ.

¶ ಅದೇ ರೀತಿಯಾಗಿ ಕ್ರಿಸ್ತನು, ಸಹ ತನ್ನನ್ನು ಘನಪಡಿಸಿಕೊಂಡು ತಾನೇ ಮಹಾಯಾಜಕನನ್ನಾಗಿ ಮಾಡಿಕೊಳ್ಳಲಿಲ್ಲ. ಆದರೆ “ನೀನು ನನ್ನ ಮಗನು, ಈ ಹೊತ್ತು ನಾನು ನಿನಗೆ ತಂದೆಯಾದೆನು” ಎಂದು ದೇವರೇ ಹೇಳಿದನು.

ನೀವು ಜೀವವುಳ್ಳ ಕಲ್ಲಾಗಿರುವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲನ್ನು ಜನರು ನಿರಾಕರಿಸಿದರು ಆದರೆ ಅದು ದೇವರಿಂದ ಆರಿಸಿಕೊಳ್ಳಲ್ಪಟ್ಟದು ಮತ್ತು ಆತನಿಗೆ ಅಮೂಲ್ಯವಾದದ್ದು ಆಗಿದೆ.

¶ ನಾವು ನಿಮಗೆ ಪ್ರಚುರಪಡಿಸುವ ಜೀವವಾಕ್ಯವು ಆದಿಯಿಂದ ಇದ್ದದ್ದು. ನಾವು ಅದನ್ನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು, ಮನಸ್ಸಿಟ್ಟು ಗ್ರಹಿಸಿ ಕೈಯಿಂದ ಮುಟ್ಟಿದ್ದೂ ಆಗಿರುವಂತದ್ದು.

ನಾವು ಆತನ ಮೂಲಕ ಜೀವಿಸುವುದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮಲ್ಲಿ ಪ್ರತ್ಯಕ್ಷವಾಗಿದೆ.

ಏಕೆಂದರೆ, ಯೇಸುಕ್ರಿಸ್ತನು ಮನುಷ್ಯನಾಗಿ ಬಂದನು ಎಂಬುದನ್ನು ಒಪ್ಪದೆ ಇರುವ ಅನೇಕ ಮೋಸಗಾರರು ಲೋಕದೊಳಗೆ ಹೊರಟು ಬಂದಿದ್ದಾರೆ. ಇಂಥವರೇ, ಯೇಸುವನ್ನು ಒಪ್ಪದ ಮೋಸಗಾರರೂ, ಕ್ರಿಸ್ತವಿರೋಧಿಗಳು ಆಗಿದ್ದಾರೆ.