ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು.
TSK
TSK · ಯೋಹಾನನು 1:17
مراجع Treasury of Scripture Knowledge في ಕನ್ನಡ IRV.
¶ ದೇವರು ಈ ಎಲ್ಲಾ ಆಜ್ಞಾವಿಧಿಗಳನ್ನು ಅವರಿಗೆ ಕೊಟ್ಟನು:
¶ ಮೋಶೆ ಎಲ್ಲಾ ಇಸ್ರಾಯೇಲರನ್ನು ಕರೆದು, “ಇಸ್ರಾಯೇಲರೇ, ನಾನು ಈಗ ನಿಮಗೆ ತಿಳಿಸುವ ಆಜ್ಞಾವಿಧಿಗಳನ್ನು ಕೇಳಿರಿ; ಇವುಗಳನ್ನು ಗ್ರಹಿಸಿಕೊಂಡು ಅನುಸರಿಸಿ ನಡೆಯಬೇಕು.
ಆತನ ಶಾಶ್ವತ ಪ್ರೀತಿ ಮತ್ತು ನಂಬಿಗಸ್ತಿಕೆ ಒಂದನ್ನೊಂದು ಕೂಡಿರುವವು; ನೀತಿಯು, ಸಮಾಧಾನವು ಮುದ್ದಿಟ್ಟುಕೊಳ್ಳುವವು.
ಆತನು ಇಸ್ರಾಯೇಲನ ಮನೆತನದವರ ಬಗ್ಗೆ ಇದ್ದ, ತನ್ನ ಪ್ರೀತಿ, ಸತ್ಯತೆಗಳನ್ನು ನೆನಪುಮಾಡಿಕೊಂಡಿದ್ದಾನೆ. ಭೂಲೋಕದ ಎಲ್ಲಾ ಕಡೆಯವರೂ, ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡಿದ್ದಾರೆ.
ಆತನು ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂತೆ ಅಬ್ರಹಾಮನಿಗೂ ಅವನ ವಂಶದವರಿಗೂ ಯಾವಾಗಲೂ ದಯೆ ತೋರಿಸಬೇಕೆಂಬುದನ್ನು ನೆನಪಿಸಿಕೊಂಡು, ತನ್ನ ಸೇವಕನಾದ ಇಸ್ರಾಯೇಲನಿಗೆ ನೆರವಾಗಿದ್ದಾನೆ” ಎಂದಳು.
¶ ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.
‹ಮೋಶೆಯು ನಿಮಗೆ ಧರ್ಮಶಾಸ್ತ್ರವನ್ನು ಕೊಡಲಿಲ್ಲವೇ? ಆದರೂ ನಿಮ್ಮಲ್ಲಿ ಒಬ್ಬನಾದರೂ ಆ ಧರ್ಮಶಾಸ್ತ್ರದಂತೆ ನಡೆಯಲಿಲ್ಲ. ನೀವು ನನ್ನನ್ನು ಕೊಲ್ಲುವುದಕ್ಕೆ ಹುಡುಕುವುದೇಕೆ?”› ಎಂದು ಕೇಳಿದನು.
ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು, ಆದರೆ ಈತನು ಎಲ್ಲಿಯವನೋ ನಮಗೆ ತಿಳಿಯದು” ಎಂದರು.
ಅವನೇ ಸೀನಾಯಿಬೆಟ್ಟದಲ್ಲಿ, ತನ್ನೊಡನೆ ಮಾತನಾಡಿದ ದೇವದೂತನಿಗೂ ನಮ್ಮ ಪೂರ್ವಿಕರಿಗೂ ಅಡವಿಯಲ್ಲಿದ್ದ ಸಭೆಯೊಳಗೆ ಇದ್ದು ಜೀವಕರವಾದ ದೈವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು ಆಗಿದ್ದಾನೆ.
¶ ಅವರು ಅವನಿಗೆ ಒಂದು ದಿನವನ್ನು ಗೊತ್ತುಮಾಡಲು, ಬಹುಮಂದಿ ಅವನ ಬಿಡಾರದಲ್ಲಿ ಅವನ ಬಳಿಗೆ ಬಂದರು. ಅವನು ಬೆಳಗ್ಗಿನಿಂದ ಸಾಯಂಕಾಲದ ವರೆಗೂ ದೇವರ ರಾಜ್ಯವನ್ನು ಕುರಿತು ಪ್ರಾಮಾಣಿಕವಾಗಿ ಸಾಕ್ಷಿಹೇಳುತ್ತಾ, ಮೋಶೆಯ ಧರ್ಮಶಾಸ್ತ್ರವನ್ನೂ, ಪ್ರವಾದಿಗಳ ಗ್ರಂಥಗಳನ್ನೂ, ಆಧಾರಮಾಡಿಕೊಂಡು ಯೇಸುವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಇದ್ದನು.
ಅಪರಾಧಗಳು ಹೆಚ್ಚಾಗುತ್ತಾ ಬಂದೆಂತಲ್ಲಾ ಧರ್ಮಶಾಸ್ತ್ರವು ಅದರೊಂದಿಗೆ ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.
ಯಾಕೆಂದರೆ ಕ್ರಿಸ್ತನು ಪೂರ್ವಿಕರಿಗೆ ಉಂಟಾದ ದೇವರ ವಾಗ್ದಾನಗಳನ್ನು ದೃಢಪಡಿಸಿ ಆತನ ಸತ್ಯವನ್ನು ತೋರಿಸುವುದಕ್ಕಾಗಿ ಸುನ್ನತಿಯೆಂಬ ಸಂಸ್ಕಾರಕ್ಕೆ ಸೇವಕನಾಗಿದ್ದಾನೆಂದೂ,
ಕಲ್ಲಿನ ಮೇಲೆ ಕೊರೆಯಲಾದ ಮೃತ್ಯುಕಾರಕವಾದ ಈ ಶಾಸನ ಅಷ್ಟು ಮಹಿಮೆಯಿಂದ ಕೂಡಿದ್ದಾಗಿತ್ತು. ಆ ಮಹಿಮೆಯಿಂದ ಮೋಶೆಯ ಮುಖವನ್ನು ಆವರಿಸಿದ್ದ ಮಹಿಮೆಯೂ ಕುಂದಿಹೋಗುವಂಥದ್ದಾಗಿದ್ದರೂ ಆ ಮಹಿಮೆಯಿಂದಾಗಿ ಆತನ ಮುಖವನ್ನು ದಿಟ್ಟಿಸಿ ನೋಡಲು ಇಸ್ರಾಯೇಲರಿಗೆ ಆಗಲಿಲ್ಲ.
¶ ನಾನು ಹೇಳಬಯಸುವುದೇನೆಂದರೆ, ದೇವರು ಮೊದಲು ಅನುಮೋದಿಸಿದ ಒಡಂಬಡಿಕೆಯನ್ನು, ನಾನೂರ ಮೂವತ್ತು ವರ್ಷಗಳ ನಂತರ ಬಂದ ಮೋಶೆಯ ಧರ್ಮಶಾಸ್ತ್ರವು ಅದನ್ನು ನಿರರ್ಥಕಗೊಳಿಸಿ, ಆ ವಾಗ್ದಾನವನ್ನು ಬರಿದಾಗಿಮಾಡಲು ಸಾಧ್ಯವಿಲ್ಲ.
ಆದರೆ ದೇವರು ಆ ಜನರಲ್ಲಿ ತಪ್ಪು ಹೊರಿಸಿ ಹೀಗೆಂದನು, “‘ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಯೆಹೂದ ವಂಶದವರೊಂದಿಗೂ ಹೊಸದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು’ ಎಂದು ಕರ್ತನು ಹೇಳುತ್ತಾನೆ.
ಯಾಕೆಂದರೆ ಹೋರಿಗಳ ಮತ್ತು ಕುರಿಗಳ ರಕ್ತದಿಂದ ಪಾಪಗಳನ್ನು ಪರಿಹಾರಮಾಡುವುದು ಅಸಾಧ್ಯವಾಗಿದೆ.
ಅದನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಪಾದಕ್ಕೆ ಅಡ್ಡ ಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.