TSK

TSK · ಯೋಹಾನನು 12:48

مراجع Treasury of Scripture Knowledge في ಕನ್ನಡ IRV.

العودة إلى المقطع

ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೋಸ್ಕರ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು.

ನೀವಾದರೋ ನಿಮ್ಮನ್ನು ಕಷ್ಟಸಂಕಟಗಳಿಂದ ಬಿಡಿಸಿದ ನಿಮ್ಮ ದೇವರಾದ ನನ್ನನ್ನು ಈಗ ತಿರಸ್ಕರಿಸಿ, ನಮಗೊಬ್ಬ ಅರಸನನ್ನು ನೇಮಿಸೆಂದು ಹೇಳುತ್ತೀರಿ ಅನ್ನುತ್ತಾನೆ. ಆದುದರಿಂದ ನೀವು ಕುಲ ಕುಲವಾಗಿಯೂ ಗೋತ್ರಗೋತ್ರವಾಗಿಯೂ ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಿರಿ” ಎಂದು ಅಪ್ಪಣೆ ಮಾಡಿದನು.

ಯೇಸು ಅವರಿಗೆ, ‹“‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಇದು ಕರ್ತನಿಂದಲೇ ಆಯಿತು; ಮತ್ತು ನಮ್ಮ ಕಣ್ಣುಗಳಿಗೆ ಅದು ಆಶ್ಚರ್ಯವಾಗಿ ತೋರುತ್ತದೆ ಎಂಬ ಮಾತನ್ನು ನೀವು ಶಾಸ್ತ್ರದಲ್ಲಿ ಎಂದಾದರೂ ಓದಲಿಲ್ಲವೋ?’›

¶ ಇದಲ್ಲದೆ ಆತನು, ಮನುಷ್ಯಕುಮಾರನು ಬಹು ಕಷ್ಟಗಳನ್ನು ಅನುಭವಿಸಿ ಹಿರಿಯರಿಂದಲೂ, ಮುಖ್ಯಯಾಜಕರಿಂದಲೂ, ಶಾಸ್ತ್ರಿಗಳಿಂದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರಬೇಕಾಗಿದೆ ಎಂದು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದನು.

‹ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು; ನಂಬದೇ ಹೋಗುವವನು ದಂಡನೆಗೆ ಗುರಿಯಾಗುವನು.›

ಯೇಸು ಅವರಿಗೆ, ‹“ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ, ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕರಿಸಲ್ಪಟ್ಟು ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕಾಗಿದೆ”› ಎಂದು ಹೇಳಿದನು.

‹ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ, ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುವವನಾಗಿದ್ದಾನೆ, ನನ್ನನ್ನು ತಿರಸ್ಕಾರ ಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ತಿರಸ್ಕಾರ ಮಾಡುವವನಾಗಿದ್ದಾನೆ”› ಅಂದನು.

¶ ಆದರೆ ಯೇಸು ಅವರನ್ನು ದೃಷ್ಟಿಸಿ ನೋಡಿ, ಹಾಗಾದರೆ ‹“‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ› ‹ಮುಖ್ಯವಾದ ಮೂಲೆಗಲ್ಲಾಯಿತು’› ‹ಎಂದು ಬರೆದಿರುವ ಮಾತೇನು?›

‹ನಾನು ತಂದೆಯ ಮುಂದೆ ನಿಮ್ಮ ಮೇಲೆ ಅಪವಾದ ಹೊರಿಸುತ್ತಿದ್ದೇನೆಂದು ತಿಳಿಯಬೇಡಿರಿ. ನಿಮ್ಮ ಮೇಲೆ ಅಪವಾದ ಹೊರಿಸುವವನು ಒಬ್ಬನಿದ್ದಾನೆ; ಅವನೇ ನೀವು ನಿರೀಕ್ಷೆಯಿಟ್ಟಿರುವ ಮೋಶೆ!›

ಆ ಪ್ರವಾದಿಯ ಮಾತನ್ನು ಕೇಳದಿರುವ ಪ್ರತಿಯೊಬ್ಬನು ನಮ್ಮ ಜನರೊಳಗಿಂದ ಸಂಪೂರ್ಣವಾಗಿ ನಾಶವಾಗುವನು’ ಎಂಬುದೇ.

ರಕ್ಷಣಾ ಮಾರ್ಗದಲ್ಲಿರುವವರಲ್ಲಿಯೂ ಮತ್ತು ನಾಶನದ ಮಾರ್ಗದಲ್ಲಿರುವವರಲ್ಲಿಯೂ ನಾವು ದೇವರಿಗೆ ಕ್ರಿಸ್ತನ ಪರಿಮಳವಾಗಿದ್ದೇವೆ.

ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ವಿಧೇಯರಾಗದವರಿಗೂ ಪ್ರತಿಕಾರ ಮಾಡುವನು.

ಒಂದೇ ಸಾರಿ ಸಾಯುವುದೂ ಆ ಮೇಲೆ ನ್ಯಾಯತೀರ್ಪು ಮನುಷ್ಯರಿಗೆ ಹೇಗೆ ನೇಮಕವಾಗಿದೆಯೋ,

ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?