TSK

TSK · ಯೋಹಾನನು 12:5

مراجع Treasury of Scripture Knowledge في ಕನ್ನಡ IRV.

العودة إلى المقطع

ಆದರೂ ಅವರು ಈವರೆಗೆ ಮಾಡಿದ ಇಟ್ಟಿಗೆಗಳ ಲೆಕ್ಕದಲ್ಲಿ ಏನೂ ಕಡಿಮೆಯಾಗಬಾರದು ಎಂದು ಅವರಿಗೆ ಹೇಳಬೇಕು. ಅವರು ಮೈಗಳ್ಳರೇ, ಆದುದರಿಂದಲೇ ಅವರು, ‘ನಾವು ಹೋಗಿ ನಮ್ಮ ದೇವರಿಗೆ ಯಜ್ಞಮಾಡಿ ಬರುವುದಕ್ಕೆ ಅಪ್ಪಣೆಯಾಗಬೇಕು’ ಎಂದು ಕೂಗಿಕೊಳ್ಳುತ್ತಿದ್ದಾರೆ.

ನಾವಂತು ಅರಮನೆಯ ಉಪ್ಪನ್ನು ತಿನ್ನುವವರಾದುದರಿಂದ ಅರಸರಿಗೆ ಅಪಮಾನವುಂಟಾಗುವುದನ್ನು ನೋಡಿ ಸುಮ್ಮನಿರುವುದು ಸರಿಯಲ್ಲವೆಂದು ತಿಳಿದು ಅರಸರಿಗೆ ಈ ಪತ್ರದ ಮೂಲಕವಾಗಿ ವರ್ತಮಾನ ಕಳುಹಿಸಿದ್ದೇವೆ.

¶ “ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು ದೇವಾಲಯದ ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು! ನಾನು ನಿಮ್ಮನ್ನು ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

ಶಿಷ್ಯರು ಇದನ್ನು ಕಂಡು ಕೋಪಗೊಂಡು, “ಹೀಗೆ ವ್ಯರ್ಥವಾಗಿ ಖರ್ಚುಮಾಡುವುದೇಕೆ?

ಆದರೆ ಕೆಲವರು ತಮ್ಮೊಳಗೆ ಕೋಪಗೊಂಡು, “ಈ ತೈಲವನ್ನು ಹೀಗೆ ವ್ಯರ್ಥಮಾಡಿದ್ದೇಕೆ?

‹ನಿಮಗಿರುವುದನ್ನು ಮಾರಿಬಿಟ್ಟು ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ. ಪರಲೋಕದಲ್ಲಿ ಲಯವಾಗದ ಸಂಪತ್ತನ್ನು ಇಟ್ಟುಕೊಳ್ಳಿರಿ. ಅದನ್ನು ಕದಿಯುವುದಕ್ಕೆ ಕಳ್ಳನು ಸಮೀಪಕ್ಕೆ ಬರಲಾರನು. ಅವು ನುಸಿ ಹಿಡಿದು ನಾಶವಾಗುವುದಿಲ್ಲ.›

ಅದಕ್ಕೆ ಫಿಲಿಪ್ಪನು, “ಪ್ರತಿಯೊಬ್ಬನಿಗೆ ಸ್ವಲ್ಪ ಸ್ವಲ್ಪ ಸಿಕ್ಕಬೇಕಾದರೂ ಇನ್ನೂರು ದಿನಾರಿ ಮೌಲ್ಯದ ರೊಟ್ಟಿಯಾದರೂ ಅವರಿಗೆ ಸಾಲುವುದಿಲ್ಲ” ಎಂದನು.