ಆತನು ನನಗೆ, “ನೀನು ನನ್ನ ಸೇವಕನೂ, ನಾನು ಪ್ರಭಾವಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ” ಎಂದು ಹೇಳಿದನು.
TSK
TSK · ಯೋಹಾನನು 13:31
مراجع Treasury of Scripture Knowledge في ಕನ್ನಡ IRV.
‹ಆದರೆ ನಾನು ಹೊಂದತಕ್ಕ ದೀಕ್ಷಾಸ್ನಾನ ಒಂದುಂಟು, ಅದು ನೆರವೇರುವ ತನಕ ನನಗೆ ನೆಮ್ಮದಿಯಿಲ್ಲ.›
ಯೇಸು ಇದನ್ನು ಕೇಳಿ, ‹“ಈ ರೋಗವು ಮರಣಕ್ಕಾಗಿ ಬಂದದ್ದಲ್ಲ; ಇದರಿಂದ ದೇವಕುಮಾರನಿಗೆ ಮಹಿಮೆ ಉಂಟಾಗುವಂತೆ ದೇವರ ಮಹಿಮೆಗೋಸ್ಕರ ಬಂದದ್ದು”› ಎಂದು ಹೇಳಿದನು.
‹ತಂದೆಯೇ ನಿನ್ನ ಹೆಸರನ್ನು ಮಹಿಮೆಪಡಿಸಿಕೋ”› ಎಂದನು. ಅದಕ್ಕೆ, “ಮಹಿಮೆಪಡಿಸಿದ್ದೇನೆ ತಿರುಗಿ ಮಹಿಮೆಪಡಿಸುವೆನು” ಎಂಬ ಸ್ವರವು ಪರಲೋಕದಿಂದ ಬಂದಿತು.
‹ಆತನು ನನ್ನದನ್ನು ಸ್ವೀಕರಿಸಿ ನಿಮಗೆ ತಿಳಿಯಪಡಿಸುತ್ತಾನಾದ್ದರಿಂದ›‹ನನ್ನನ್ನೇ ಮಹಿಮೆಪಡಿಸುವನು.›
¶ “ಆದುದರಿಂದ ನೀವು ಶಿಲುಬೆಗೆ ಹಾಕಿಸಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂಬುದು ಇಸ್ರಾಯೇಲ್ ಕುಲದವರಿಗೆಲ್ಲಾ ನಿಸ್ಸಂದೇಹವಾಗಿ ತಿಳಿದಿರಲಿ” ಎಂದು ಹೇಳಿದನು.
ಹೀಗೆ ನೀವು ಏಕಮನಸ್ಸಿನಿಂದ ಒಕ್ಕೊರಳಿನಿಂದ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾದ ದೇವರನ್ನು ಕೊಂಡಾಡುವಿರಿ.
ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ ಸುವಾರ್ತೆಯ ಬೆಳಕನ್ನು ನೋಡಬಾರದೆಂದು ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ.
ಕ್ರಿಸ್ತನಲ್ಲಿ ಮೊಟ್ಟ ಮೊದಲು ನಿರೀಕ್ಷೆಯನ್ನಿಟ್ಟ ನಾವು ಆತನ ಮಹಿಮೆಯನ್ನು ಸ್ತುತಿಸುವವರಾಗಿರಬೇಕೆಂದು ಹೀಗೆ ಮಾಡಿದನು.
ದೇವರು ನಮ್ಮ ಕರ್ತನಾದ ಕ್ರಿಸ್ತಯೇಸುವಿನಲ್ಲಿ ಮಾಡಿದ ನಿತ್ಯಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು, ಪರಲೋಕದಲ್ಲಿ ರಾಜತ್ವಗಳಿಗೂ, ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂದು ಉದ್ದೇಶಿಸಿದನು.
ನಮ್ಮ ಮೇಲೆ ದೋಷಾರೋಪಣೆ ಮಾಡಿದಂಥ ಆಜ್ಞಾರೂಪವಾಗಿದ್ದಂಥ ಪತ್ರವನ್ನು ತೊಡೆದುಹಾಕಿ ಅದನ್ನು ಶಿಲುಬೆಗೆ ಜಡಿದು ಇಲ್ಲದಂತಾಗಿ ಮಾಡಿದನು.
ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ.
ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.