ಆಗ ಕರ್ತನಾದ ಯೆಹೋವನು ನ್ಯಾಯತೀರ್ಪಿನ ಆತ್ಮದಿಂದಲೂ, ದಹಿಸುವ ಆತ್ಮದಿಂದಲೂ ಚೀಯೋನಿನ ಸ್ತ್ರೀಯರ ಕಲ್ಮಷವನ್ನೂ ಮತ್ತು ಯೆರೂಸಲೇಮಿನ ರಕ್ತದ ಕಲೆಯನ್ನು ತೊಳೆದುಬಿಡುವನು.
TSK
TSK · ಯೋಹಾನನು 13:8
مراجع Treasury of Scripture Knowledge في ಕನ್ನಡ IRV.
ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.
ಆಗ ಪೇತ್ರನು ಆತನನ್ನು ಪಕ್ಕಕ್ಕೆ ಕರೆದುಕೊಂಡು ಹೋಗಿ, “ಕರ್ತನೇ, ದೇವರು ಅದನ್ನು ನಿನಗೆ ಬರಗೊಡಿಸದಿರಲಿ; ನಿನಗೆ ಹೀಗೆ ಎಂದಿಗೂ ಆಗಬಾರದು” ಎಂದು ಆತನನ್ನು ಗದರಿಸುವುದಕ್ಕೆ ಪ್ರಾರಂಭಿಸಿದನು.
ಆದರೆ ಪೇತ್ರನು ಆತನಿಗೆ, “ಎಲ್ಲರೂ ನಿನ್ನ ವಿಷಯದಲ್ಲಿ ದಿಗಿಲುಪಟ್ಟು ಹಿಂಜರಿದರೂ ನಾನು ಮಾತ್ರ ಎಂದಿಗೂ ಹಿಂಜರಿಯುವುದಿಲ್ಲ” ಎಂದು ಉತ್ತರ ಕೊಟ್ಟನು.
ಅದಕ್ಕೆ ಯೇಸು ‹“ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಮತ್ತು ಆತ್ಮನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದಲ್ಲಿ ಪ್ರವೇಶಿಸಲಾರನು.›
ಈಗ ನೀನೇಕೆ ತಡಮಾಡುತ್ತೀ? ಎದ್ದು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೋ’ ಅಂದನು.
ಆತನು ಅದನ್ನು ಪಾವನಗೊಳಿಸುವುದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು.
ಇಂಥ ಉಪದೇಶಗಳು ಮನುಷ್ಯಕಲ್ಪಿತವಾದ ಆಚರಣೆಗಳಿಂದಲೂ, ಕಪಟದೀನತೆಯಿಂದಲೂ ಮತ್ತು ದೇಹದಂಡನೆಯಿಂದಲೂ ಜ್ಞಾನವುಳ್ಳದೆಂದು ತೋರಿಬರುತ್ತವೆ, ಆದರೆ ಶಾರೀರಿಕ ಇಚ್ಛೆಗಳನ್ನು ನಿಯಂತ್ರಿಸುವಲ್ಲಿ ಇವುಗಳಿಂದ ಯಾವ ಪ್ರಯೋಜನವೂ ಉಂಟಾಗುವುದಿಲ್ಲ.
ಧರ್ಮಶಾಸ್ತ್ರದ ಪ್ರಕಾರ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು. ರಕ್ತಧಾರೆ ಇಲ್ಲದೆ ಪಾಪ ಕ್ಷಮಾಪಣೆಯು ಉಂಟಾಗುವುದಿಲ್ಲ.
ಆದಕಾರಣ ಕೆಟ್ಟ ಮನಸ್ಸಾಕ್ಷಿಯನ್ನು ಪ್ರೋಕ್ಷಿಸಿ ಶುದ್ಧೀಕರಿಸಿಕೊಂಡು, ತಿಳಿನೀರಿನಿಂದ ತೊಳೆದ ದೇಹದಿಂದಲೂ, ಯಥಾರ್ಥಹೃದಯದಿಂದಲೂ, ನಂಬಿಕೆಯ ಪೂರ್ಣನಿಶ್ಚಯದಿಂದಲೂ ದೇವರ ಸಮೀಪಕ್ಕೆ ಬರೋಣ.
ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.