ಯೇಸು ಅವನಿಗೆ, ‹“ನೀನು ಪೂರ್ಣನಾಗುವುದಕ್ಕೆ ಬಯಸುವುದಾದರೆ, ಹೋಗಿ ನಿನಗಿರುವುದನ್ನೆಲ್ಲಾ ಮಾರಿ, ಬಡವರಿಗೆ ಕೊಡು, ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು”› ಎಂದು ಹೇಳಿದನು.
TSK
TSK · ಯೋಹಾನನು 14:24
مراجع Treasury of Scripture Knowledge في ಕನ್ನಡ IRV.
ಹೇಗೆಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮ ವರವನ್ನು ಅಳತೆಮಾಡದೆ ಧಾರಾಳವಾಗಿ ಅನುಗ್ರಹಿಸುವುದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.
‹ಆತನ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಆತನು ಕಳುಹಿಸಿದಾತನನ್ನು ನೀವು ನಂಬದೇ ಇದ್ದೀರಿ.›
ಯೇಸುವು ಇದನ್ನು ತಿಳಿದು ದೇವಾಲಯದಲ್ಲಿ ಉಪದೇಶ ಮಾಡುವಾಗ, ‹“ನೀವು ನನ್ನನ್ನು ಬಲ್ಲಿರಿ, ನಾನು ಎಲ್ಲಿಂದ ಬಂದವನೆಂದೂ ನೀವು ಬಲ್ಲಿರಿ, ಆದರೂ ನಾನು ನನ್ನಷ್ಟಕ್ಕೆ ನಾನೇ ಬಂದವನಲ್ಲ. ನನ್ನನ್ನು ಕಳುಹಿಸಿದಾತನು ಸತ್ಯವಂತನು. ನೀವು ಆತನನ್ನು ಅರಿತವರಲ್ಲ.›
ಹೀಗಿರಲಾಗಿ ಯೇಸು ಅವರಿಗೆ, ‹“ನೀವು ಮನುಷ್ಯಕುಮಾರನನ್ನು ಮೇಲಕ್ಕೆತ್ತಿದಾಗ, ನಾನೇ ಆತನೆಂದೂ, ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನೆಂದು ನೀವು ತಿಳಿದುಕೊಳ್ಳುವಿರಿ. ಆದರೆ ನನ್ನ ತಂದೆಯು ನನಗೆ ಬೋಧಿಸಿದ ಸಂಗತಿಗಳನ್ನೇ ಮಾತನಾಡುತ್ತೇನೆ.›
ಯೇಸು ಅವರಿಗೆ, ‹“ದೇವರು ನಿಮಗೆ ತಂದೆಯಾಗಿದ್ದರೆ, ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ, ಏಕೆಂದರೆ ನಾನು ದೇವರಿಂದಲೇ ಹೊರಟು ಲೋಕಕ್ಕೆ ಬಂದವನಾಗಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ, ಆದರೆ ದೇವರೇ ನನ್ನನ್ನು ಕಳುಹಿಸಿದ್ದಾನೆ.›
‹ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾನೆ ಎಂಬುದನ್ನು ನೀನು ನಂಬುವುದಿಲ್ಲವೋ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುವುದಿಲ್ಲ; ತಂದೆಯು ನನ್ನಲ್ಲಿ ಇದ್ದುಕೊಂಡು ತನ್ನ ಕಾರ್ಯಗಳನ್ನು ಮಾಡುತ್ತಾನೆ.›
‹ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಪಡಿಸಿ ತೋರಿಸುವೆನು”› ಎಂದು ಹೇಳಿದನು.
ಕ್ರಿಸ್ತನು ನಮಗೋಸ್ಕರ ತನ್ನ ಪ್ರಾಣವನ್ನು ಅರ್ಪಿಸಿದ್ದರಿಂದ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.