ಅದಕ್ಕೆ ದೂತನು, “ಪವಿತ್ರಾತ್ಮನು ನಿನ್ನ ಮೇಲೆ ಬರುವನು; ಪರಾತ್ಪರನಾದ ದೇವರ ಶಕ್ತಿಯು ನಿನ್ನನ್ನು ಅವರಿಸುವುದು; ಆದುದರಿಂದ ನಿನಗೆ ಹುಟ್ಟುವ ಆ ಪವಿತ್ರ ಶಿಶು ದೇವರ ಮಗನೆನಿಸಿಕೊಳ್ಳುವನು.
TSK
TSK · ಯೋಹಾನನು 14:30
مراجع Treasury of Scripture Knowledge في ಕನ್ನಡ IRV.
¶ ತರುವಾಯ ಯೇಸು, ‹“ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?”› ಅಂದನು.
‹ಇಹಲೋಕಾಧಿಪತಿಗೆ ನ್ಯಾಯತೀರ್ಪಾಗಿರುವುದರಿಂದ ನ್ಯಾಯತೀರ್ಪಿನ ಕುರಿತಾಗಿಯೂ, ಲೋಕಕ್ಕೆ ಮನವರಿಕೆಯನ್ನು ಉಂಟುಮಾಡುವನು.›
ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ ಸುವಾರ್ತೆಯ ಬೆಳಕನ್ನು ನೋಡಬಾರದೆಂದು ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ.
ಪೂರ್ವದಲ್ಲಿ ನೀವು ಇಹಲೋಕದ ಪದ್ಧತಿಗೆ ಅನುಸಾರವಾಗಿಯೂ, ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡೆಸುವ ಆತ್ಮನಿಗನುಸಾರವಾಗಿ ಜೀವನ ನಡಿಸಿದ್ದೀರಿ.
ದೇವರು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತನ್ನ ಪ್ರಿಯ ಕುಮಾರನ ಸಾಮ್ರಾಜ್ಯಕ್ಕೆ ಸೇರಿಸಿದನು.
¶ ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.
ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.
¶ ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರಾಗಿದ್ದೀರಿ. ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಉನ್ನತನಾಗಿರುವುದರಿಂದ ನೀವು ಆ ಸುಳ್ಳು ಪ್ರವಾದಿಗಳ ಆತ್ಮವನ್ನು ಜಯಿಸಿದ್ದೀರಿ.
ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.
ಆ ಸಾವಿರ ವರ್ಷಗಳು ಮುಗಿದ ಮೇಲೆ ಸೈತಾನನಿಗೆ ಸೆರೆಯಿಂದ ಬಿಡುಗಡೆಯಾಗುವುದು.