ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.
TSK
TSK · ಯೋಹಾನನು 15:1
مراجع Treasury of Scripture Knowledge في ಕನ್ನಡ IRV.
ತೋಟಗಳಿಗೆ ಹೊತ್ತಾರೆ ಹೊರಟು ದ್ರಾಕ್ಷಿಯು ಚಿಗುರಿದೆಯೋ, ಅದರ ಹೂವು ಅರಳಿದೆಯೋ, ದಾಳಿಂಬೆ ಹೂ ಬಿಟ್ಟಿದೆಯೋ ನೋಡೋಣ ಬಾ, ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ಸಲ್ಲಿಸುವೆನು.
¶ ಆ ದಿನದಲ್ಲಿ ಯೆಹೋವನು ದಯಪಾಲಿಸಿದ ಬೆಳೆಯಿಂದ ಇಸ್ರಾಯೇಲರಲ್ಲಿ ಉಳಿದವರಿಗೆ ಸೌಂದರ್ಯವೂ, ಮಹಿಮೆಯೂ ಉಂಟಾಗುವವು. ದೇಶದಿಂದ ಫಲವೂ, ಉನ್ನತಿಯೂ, ಭೂಷಣವೂ ಲಭಿಸುವುದು.
ಆ ದಿನದಲ್ಲಿ ಫಲಭರಿತ ದ್ರಾಕ್ಷಿಯ ತೋಟದ ವಿಷಯವಾಗಿ ಹಾಡಿರಿ,
ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.
ಬಹು ಮಂದಿ ಮಂದೆಗಾರರು ನನ್ನ ದ್ರಾಕ್ಷಿತೋಟವನ್ನು ಕೆಡಿಸಿದ್ದಾರೆ; ನನ್ನ ಸ್ವತ್ತನ್ನು ತುಳಿದು ನನಗೆ ಇಷ್ಟವಾದ ಆ ಸೊತ್ತನ್ನು ಹಾಳು ಕಾಡನ್ನಾಗಿ ಮಾಡಿದ್ದಾರೆ.
ಇಸ್ರಾಯೇಲ್ ಸೊಂಪಾಗಿ ಬೆಳೆದ ದ್ರಾಕ್ಷಾಲತೆಯಾಗಿದೆ; ಹಣ್ಣುಬಿಟ್ಟುಕೊಂಡಿದೆ; ಅದರ ಹಣ್ಣುಗಳು ಹೆಚ್ಚಿದಷ್ಟೂ ಯಜ್ಞವೇದಿಗಳನ್ನು ಹೆಚ್ಚಿಸಿಕೊಂಡಿದೆ; ಅದರ ಭೂಮಿಯು ಎಷ್ಟು ಒಳ್ಳೆಯದೋ, ಅಷ್ಟು ಒಳ್ಳೆಯ ವಿಗ್ರಹ ಸ್ತಂಭಗಳನ್ನು ನಿರ್ಮಾಣ ಮಾಡಿಕೊಂಡಿದೆ.
¶ ‹“ಪರಲೋಕ ರಾಜ್ಯವು ತನ್ನ ದ್ರಾಕ್ಷಾತೋಟಕ್ಕೆ ಕೂಲಿಯಾಳುಗಳನ್ನು ಗೊತ್ತುಮಾಡಲು ಬೆಳಗ್ಗೆ ಹೊರಟ ಒಬ್ಬ ತೋಟದ ಯಜಮಾನನಿಗೆ ಹೋಲಿಕೆಯಾಗಿದೆ.›
¶ ಆಗ ಯೇಸು ಅವರೊಂದಿಗೆ ಸಾಮ್ಯಗಳಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು, ‹“ಒಬ್ಬ ಮನುಷ್ಯನು›‹ಒಂದು ದ್ರಾಕ್ಷಿಯ ತೋಟವನ್ನು ಮಾಡಿ ಸುತ್ತಲೂ ಬೇಲಿ ಹಾಕಿಸಿ ದ್ರಾಕ್ಷಿಯ ಆಲೆಗಾಗಿ ಒಂದು ಗುಂಡಿಯನ್ನು ತೆಗೆಸಿ›‹ಕಾವಲು ಗೋಪುರವನ್ನು ಕಟ್ಟಿಸಿದನು. ಬಳಿಕ ಆ ತೋಟವನ್ನು ದ್ರಾಕ್ಷಿಯ ತೋಟಗಾರರಿಗೆ ಗುತ್ತಿಗೆಗೆ ಕೊಟ್ಟು, ಹೊರದೇಶಕ್ಕೆ ಹೊರಟು ಹೋದನು.›
¶ ನಿಜವಾದ ಬೆಳಕು ಲೋಕಕ್ಕೆ ಬರುವುದಾಗಿತ್ತು; ಆ ಬೆಳಕೇ ಪ್ರತಿ ಮನುಷ್ಯನಿಗೂ ಬೆಳಕನ್ನು ಕೊಡುವಂಥದು.
ಯೇಸು ಅವರಿಗೆ ‹“ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಮೋಶೆಯು ನಿಮಗೆ ಪರಲೋಕದಿಂದ ರೊಟ್ಟಿ ಕೊಟ್ಟವನಲ್ಲ, ನನ್ನ ತಂದೆಯು ಪರಲೋಕದಿಂದ ಬರುವ ನಿಜವಾದ ರೊಟ್ಟಿಯನ್ನು ನಿಮಗೆ ಕೊಡುತ್ತಾನೆ.›
ನಾವು ದೇವರ ಜೊತೆಕೆಲಸದವರು. ನೀವು ದೇವರ ಹೊಲವೂ. ದೇವರ ಮಂದಿರವೂ ಆಗಿದ್ದೀರಿ.